Vitla : ದಾಖಲೆಯಿಲ್ಲದ 200 ಚೀಲ ಅಕ್ಕಿ ವಶ
Team Udayavani, Apr 12, 2023, 6:25 PM IST
ವಿಟ್ಲ : ವಿಟ್ಲಕಸಬಾ ಗ್ರಾಮದ ಉಕ್ಕುಡ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ PSI ಸಂದೀಪ್ ಕುಮಾರ್ ಶೆಟ್ಟಿ ಅವರು ಪೊಲೀಸರೊಂದಿಗೆ ಕುದ್ದುಪದವು, ಮರಕ್ಕಿಣಿಗಳಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಜೀತೊ ವಾಹನವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ದಾಖಲೆಯಿಲ್ಲದೆ 200 ಚೀಲ ಅಕ್ಕಿ ಸಾಗಾಟ ಮಾಡುವುದು ತಿಳಿದುಬಂದು, ವಶಕ್ಕೆ ಪಡೆದುಕೊಂಡ ಘಟನೆ ಸಂಭವಿಸಿದೆ.
ವಾಹನ ಚಾಲಕ ಮಹಮ್ಮದ್ ಆಲಿ ವಾಹನದಲ್ಲಿ ತಲಾ 50 ಕೆ.ಜಿ ಯ 20 ಅಕ್ಕಿ ಚೀಲಗಳು ಇದ್ದು, ಇದನ್ನು ಕೇಪು ಗ್ರಾಮದ ಮರಕ್ಕಿಣಿಯಲ್ಲಿನ
ಹನೀಫ್ ಅವರಿಗೆ ಸೇರಿದ ಗೋಡೌನ್ ಗೆ ಸಾಗಿಸುತ್ತಿರುವುದಾಗಿ ತಿಳಿಸಿದ್ದರು. ಮರಕ್ಕಿಣಿಗೆ ತೆರಳಿ, ಪರಿಶೀಲಿಸಿದಾಗ ಗೋಡೌನಿನಲ್ಲಿ ತಲಾ 50 ಕೆ.ಜಿ ತೂಕದ 180 ಚೀಲಗಳಲ್ಲಿ ಒಟ್ಟು 9 ಟನ್ ತೂಕದ ಅಕ್ಕಿಯನ್ನು ಪ್ಲಾಸ್ಟಿಕ್ ಚೀಲದಲ್ಲಿ ಅಕ್ರಮವಾಗಿ ಯಾವುದೇ ಪರವಾನಿಗೆ ಯಾ ದಾಖಲಾತಿಗಳಿಲ್ಲದೇ ಸಂಗ್ರಹಿಸಿಟ್ಟಿರುವುದು ಕಂಡು ಬಂದಿದೆ.
ಜೀತೊ ವಾಹನದಲ್ಲಿದ್ದ ತಲಾ 50 ಕೆ.ಜಿ ಯ 20 ಚೀಲ ಅಕ್ಕಿ ಸೇರಿ ಒಟ್ಟು 200 ಚೀಲ ಅಕ್ಕಿ ಸ್ವಾದೀನಪಡಿಸಿಕೊಳ್ಳಲಾಗಿದೆ. ಅಕ್ಕಿಯ ಒಟ್ಟು ಮೌಲ್ಯ ಅಂದಾಜು ಸುಮಾರು ರೂಪಾಯಿ 3,30,000/- ಹಾಗೂ ಸ್ವಾಧೀನಪಡಿಸಿಕೊಂಡ ಜೀತೊ ವಾಹನದ ಮೌಲ್ಯ ಸುಮಾರು ರೂಪಾಯಿ 3,00,000/- ಸೇರಿ ಒಟ್ಟು ಮೌಲ್ಯ ಸುಮಾರು ರೂಪಾಯಿ 6,30,000/- ಆಗಿರುತ್ತದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್