ಒಕ್ಕಲಿಗ ಸಮುದಾಯಕ್ಕೆ ಶೇ 12 ಮೀಸಲಾತಿಗಾಗಿ ಸಚಿವರು, ಶಾಸಕರಿಂದ ಮನವಿ

ನಾವೂ ರಾಜ್ಯದಲ್ಲಿ 16% ಇದ್ದೇವೆ. ನಮ್ಮಲ್ಲೂ ತುಂಬಾ ಬಡವರಿದ್ದಾರೆ.... ಜೆಡಿಎಸ್, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಏನೂ ಮಾಡಿಲ್ಲ...

Team Udayavani, Dec 23, 2022, 2:37 PM IST

1-sassad

ಬೆಳಗಾವಿ: ರಾಜ್ಯದ ಶಿಕ್ಷಣ ಸಂಸ್ಥೆಗಳು ಮತ್ತು ಸರಕಾರಿ ಉದ್ಯೋಗಗಳಲ್ಲಿ ಪ್ರವೇಶದಲ್ಲಿ ಶೇ 12 ರಷ್ಟು ಮೀಸಲಾತಿ ನೀಡಬೇಕು ಎಂದು ಒಕ್ಕಲಿಗ ಸಮುದಾಯಕ್ಕೆ ಸೇರಿದ ಕರ್ನಾಟಕದ ಸಚಿವರು ಮತ್ತು ಬಿಜೆಪಿ ಶಾಸಕರು ಶುಕ್ರವಾರ ಒತ್ತಾಯಿಸಿದರು. ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಒಕ್ಕಲಿಗ ಸಮುದಾಯದ ನ್ಯಾಯಯುತ ಬೇಡಿಕೆ ಇದಾಗಿದೆ. ಜನಸಂಖ್ಯೆ ಆಧಾರದಲ್ಲಿ ನಾವೂ ರಾಜ್ಯದಲ್ಲಿ 16% ಇದ್ದೇವೆ. ನಮ್ಮಲ್ಲೂ ತುಂಬಾ ಬಡವರಿದ್ದಾರೆ. ಜಮೀನುಗಳನ್ನು ಕಳೆದುಕೊಂಡವರಿದ್ದಾರೆ. ನಮ್ಮ ಸಮುದಾಯದ ಮೀಸಲಾತಿಯನ್ನ 4 ರಿಂದ 12 ಪರ್ಸೆಂಟ್ ಗೆ ಹೆಚ್ಚಿಸಬೇಕು ಎಂಬುದು ನಮ್ಮ ನ್ಯಾಯಯುತವಾದ ಬೇಡಿಕೆ ಎಂದರು.

ಒಕ್ಕಲಿಗ ಸಮುದಾಯವನ್ನ ಭಾಗ ಮಾಡಿ ಒಡೆದಿದ್ದಾರೆ. ಹೀಗಾಗಿ ಬಂಟರು, ರೆಡ್ಡಿ, ಕುಂಚಿಟಗರು ಸೇರಿದಂತೆ ಕೇಂದ್ರ ಓಬಿಸಿ ರಿಸರ್ವೇಶನ್ ನಲ್ಲಿ ಸೇರಿಸಬೇಕು. ಒಕ್ಕಲಿಗ ಸಮುದಾಯಕ್ಕೆ ಅಭದ್ರತೆ ಕಾಡಬಾರದು. ಇಡೀ ಒಕ್ಕಲಿಗ ಸಮುದಾಯವನ್ನ ಒಟ್ಟಿಗೆ ಸೇರಿಸಬೇಕು. ಕರ್ನಾಟಕದಲ್ಲಿ ಬಿಜೆಪಿ ಸರಕಾರವಿದೆ, ಹೀಗಾಗಿ ನಮಗೆ ನಂಬಿಕೆ ಇದೆ ಎಂದರು.

ನಮ್ಮ ಬೇಡಿಕೆಯನ್ನ ಗೌರವಿಸಿ ಪರಿಹಾರ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎನ್ನುವುದಾಗಿ ಸರಳ ಮುಖ್ಯಮಂತ್ರಿ ಬೊಮ್ಮಾಯಿಯವರು ಹೇಳಿದ್ದಾರೆ. ನಾವೂ ಗಲಾಟೆ, ಧಮ್ಕಿ ಮಾಡಲ್ಲ. ಶಾಂತಿಯುತವಾಗಿ ಎಲ್ಲರೂ ಸೇರಿ ಮನವಿ ಮಾಡುತ್ತಿದ್ದೇವೆ. ಸಮುದಾಯದ ಸ್ವಾಮೀಜಿಗಳನ್ನು ಜನವರಿ 4 ರಂದು ಭೇಟಿ ಮಾಡುತ್ತೇವೆ. ನಾವೆಲ್ಲರೂ ಒಟ್ಟಿಗೆ ಹೆಜ್ಜೆ ಹಾಕಿ, ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ. ನಾವೂ ಯಾವುದೇ ಬೆದರಿಕೆ ಹಾಕುವುದಿಲ್ಲ ಎಂದರು.

ಒಕ್ಕಲಿಗ ಸಮಾಜದ ಜೊತೆ ಬೊಮ್ಮಾಯಿ, ಯಡಿಯೂರಪ್ಪ ಸದಾ ಇದ್ದಾರೆ.ವಿಧಾನ ಸೌಧದ ಮುಂದೆಯೂ ಕೆಂಪೇಗೌಡರ ಪ್ರತಿಮೆ ಮಾಡಲು ಹಣ ಬಿಡುಗಡೆ ಮಾಡಿದ್ದಾರೆ. ಒಕ್ಕಲಿಗರ ನಿಗಮ ಮಾಡಿ 120 ಕೋಟಿ ಹಣವನ್ನು ಕೊಟ್ಟಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ಮಾತಿಗೆ ಮನ್ನಣೆ ಕೊಡುತ್ತೇವೆ ಎಂದರು.

ಜೆಡಿಎಸ್, ಕಾಂಗ್ರೆಸ್ ಶಾಸಕರು ಅಧಿಕಾರ ಇದ್ದಾಗ ಏನೂ ಮಾಡಿಲ್ಲ. ನಾವೂ ಈಗ ಏರ್ ಪೋರ್ಟ್ ನಲ್ಲಿ ಕೆಂಪೇಗೌಡರ ಪ್ರತಿಮೆ ಮಾಡಿದ್ದೇವೆ. ಒಕ್ಕಲಿಗರಿಗೆ ನ್ಯಾಯ ಒದಗಿಸಲು ನಾವೆಲ್ಲ ಸಚಿವರು, ಶಾಸಕರು ಒಂದಾಗಿ ಕೆಲಸ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.