ಪಕ್ಷ ಸೂಚಿಸಿದವರಿಗೆ ಮತ ಹಾಕಬೇಕು: ಸಿದ್ದರಾಮಯ್ಯ
Team Udayavani, Jun 8, 2020, 7:48 PM IST
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಪಕ್ಷ ಸೂಚಿಸಿದವರಿಗೆ ಮತ ಹಾಕುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕರಿಗೆ ಸೂಚಿಸಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆಗೂ ಮೊದಲು ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದ ಅವರು, ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಮಾಜಿ ಪ್ರಧಾನಿ ದೇವೇಗೌಡರಿಗೆ ಯಾರು ಮತ ಹಾಕಬೇಕು ಎನ್ನುವುದನ್ನು ಪಕ್ಷ ಸೂಚಿಸುತ್ತದೆ. ಇದು ಹೈ ಕಮಾಂಡ್ ಸೂಚನೆಯಾಗಿದ್ದು ಎಲ್ಲರೂ ಪಾಲಿಸುವಂತೆ ಸೂಚಿಸಿದ್ದರು ಎಂದು ತಿಳಿದು ಬಂದಿದೆ.
ದೇವೇಗೌಡರು ಕಾಂಗ್ರೆಸ್ ಬೆಂಬಲದೊಂದಿಗೆ ಸ್ಪರ್ಧೆ ಮಾಡಲಿದ್ದಾರೆ. ಹೀಗಾಗಿ ಅವರಿಗೆ ಯಾರು ಮತ ಹಾಕಬೇಕೆಂದು ಪಕ್ಷ ಸೂಚಿಸುತ್ತದೆ ಎಂದು ಶಾಸಕರಿಗೆ ಸೂಚಿಸಿದ್ದರು ಎಂದು ತಿಳಿದು ಬಂದಿದೆ.
ಶಾಸಕಾಂಗ ಸಭೆಯ ನಂತರ ವಿಧಾನಸೌಧದ ಪಕ್ಷದ ಕಚೇರಿಯಲ್ಲಿ ಹಿರಿಯ ನಾಯಕರು ಮತ್ತೊಂದು ಸಭೆ ನಡೆಸಿ, ನಾಮಪತ್ರ ಸಲ್ಲಿಕೆಗೆ ಯಾರು ಖರ್ಗೆಯವರ ಜೊತೆಯಲ್ಲಿರಬೇಕು ಎನ್ನುವುದನ್ನು ನಿರ್ಧರಿಸಿ, ನಾಮಪತ್ರದ ನಾಲ್ಕು ಪ್ರತಿಗಳನ್ನು ಮಾಡಿ, ನಾಯಕರು ಸರತಿಯಲ್ಲಿ ವಿಧಾನಸಭಾ ಕಾರ್ಯದರ್ಷಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ