ತೆಲಂಗಾಣದ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಎಷ್ಟು ಬಾರಿ ಧ್ವನಿ ಎತ್ತಿದ್ದೀರಿ: ರಾಹುಲ್ ಗೆ TRS

ಕೇಂದ್ರ ಸರ್ಕಾರದ ಜೊತೆ ಹೋರಾಟ ನಡೆಸುತ್ತಿದ್ದಾಗ ಕಾಂಗ್ರೆಸ್ ಪಕ್ಷ ಮೌನಕ್ಕೆ ಶರಣಾಗಿದ್ದೇಕೆ?

Team Udayavani, May 6, 2022, 2:56 PM IST

ತೆಲಂಗಾಣದ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಎಷ್ಟು ಬಾರಿ ಧ್ವನಿ ಎತ್ತಿದ್ದೀರಿ: ರಾಹುಲ್ ಗೆ TRS

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೆಲಂಗಾಣಕ್ಕೆ ಭೇಟಿ ನೀಡುವ ಮುನ್ನ ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಶುಕ್ರವಾರವೂ (ಮೇ 06) ವಾಕ್ಸಮರ ಮುಂದುವರಿದಿದೆ.

ಇದನ್ನೂ ಓದಿ:ಒಂದೇ ಬೈಕ್ ನಲ್ಲಿ ಐವರು: ವಿಡಿಯೋ ವೈರಲ್; ಕ್ರಮಕ್ಕೆ ಮಂಗಳೂರು ಶಾಸಕರ ಆಗ್ರಹ

“ ರಾಹುಲ್ ಗಾಂಧಿ ಲೋಕಸಭೆಯಲ್ಲಿ ತೆಲಂಗಾಣದ ಸಮಸ್ಯೆ ಕುರಿತು ಎಷ್ಟು ಬಾರಿ ಧ್ವನಿ ಎತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಕಾಲ್ವಾಕುಂಟ್ಲಾ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

“ರಾಹುಲ್ ಗಾಂಧಿಯವರು ಇಂದು ತೆಲಂಗಾಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವಂತೆ ನಾನು ಮನವಿ ಮಾಡಿಕೊಳ್ಳುತ್ತೇನೆ. ರಾಹುಲ್ ಗಾಂಧಿ ಲೋಕಸಭೆಯಲ್ಲಿ ತೆಲಂಗಾಣದ ಸಮಸ್ಯೆಗಳ ಬಗ್ಗೆ ಎಷ್ಟು ಬಾರಿ ಧ್ವನಿ ಎತ್ತಿದ್ದೀರಿ ಎಂದು ತಿಳಿಸಿ” ಎಂಬುದಾಗಿ ತಿರುಗೇಟು ನೀಡಿದ್ದಾರೆ.

ಏಕರೂಪದ ಭತ್ತ ಸಂಗ್ರಹ ನೀತಿ, ನೀರಾವರಿ ಯೋಜನೆಗಳಿಗೆ ರಾಷ್ಟ್ರೀಯ ಸ್ಥಾನಮಾನ ನೀಡುವುದು, ಶೈಕ್ಷಣಿಕ ಸಂಸ್ಥೆಗಳಲ್ಲಿನ ತಾರತಮ್ಯ ಧೋರಣೆಗೆ ಸಂಬಂಧಿಸಿದಂತೆ ಟಿಆರ್ ಎಸ್ ಪಕ್ಷ ಕೇಂದ್ರ ಸರ್ಕಾರದ ಜೊತೆ ಹೋರಾಟ ನಡೆಸುತ್ತಿದ್ದಾಗ ಕಾಂಗ್ರೆಸ್ ಪಕ್ಷ ಮೌನಕ್ಕೆ ಶರಣಾಗಿದ್ದೇಕೆ? ಎಂದು ಕವಿತಾ ಪ್ರಶ್ನಿಸಿರುವುದಾಗಿ ವರದಿ ವಿವರಿಸಿದೆ.

ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿರುವ ಕವಿತಾ ಕಾಲ್ವಾಕುಂಟ್ಲಾ ಅಳುವ ಮಗು ಎಂಬುದಾಗಿ ತೆಲಂಗಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ ಟೀಕಿಸಿದ್ದಾರೆ.

“ಪಾರ್ಲಿಮೆಂಟ್ ಪ್ರೊಸೀಡಿಂಗ್ಸ್ ಅನ್ನು ಮರು ಪರಿಶೀಲಿಸುವಂತೆ ನಾನು ನಿಮಗೆ (ಕವಿತಾ) ಪ್ರಾಮಾಣಿಕವಾಗಿ ಸಲಹೆ ನೀಡುತ್ತೇನೆ. ನೀವು ಮಾಜಿ ಸಂಸದರಾಗಿದ್ದರಿಂದ ಗ್ರಂಥಾಲಯ ಪ್ರವೇಶಕ್ಕೆ ಅವಕಾಶವಿದೆ. ಅಂದು ಸೋನಿಯಾ ಗಾಂಧಿ ನಾಯಕತ್ವದಲ್ಲಿ ಪ್ರತ್ಯೇಕ ತೆಲಂಗಾಣದ ಬಗ್ಗೆ ಹೋರಾಟ ನಡೆಸುತ್ತಿದ್ದಾಗ ನಿಮ್ಮ ತಂದೆಯಾಗಲಿ, ನೀವಾಗಲಿ ಎಲ್ಲಿದ್ದೀರಿ” ಎಂದು ಕಾಂಗ್ರೆಸ್ ಮುಖಂಡ, ನಿಜಾಮಾಬಾದ್ ಮಾಜಿ ಸಂಸದ ಮಧು ಯಾಶ್ಕಿ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.