300 ಕಿಮೀ ಸ್ಪೀಡ್… ಫೇಸ್ ಬುಕ್ ಲೈವ್; ಬಿಎಂಡಬ್ಲ್ಯು ನಾಗಾಲೋಟ…ನಾಲ್ವರ ದೇಹ ಛಿದ್ರ, ಛಿದ್ರ!
Team Udayavani, Oct 17, 2022, 4:56 PM IST
ಲಕ್ನೋ: ಕೆಲವೊಂದು ಹುಚ್ಚುತನ ಎಂತಹ ಘೋರ ದುರಂತಕ್ಕೆ ಸಾಕ್ಷಿಯಾಗಲಿದೆ ಎಂಬುದಕ್ಕೆ ಈ ನಾಲ್ವರು ಯುವಕರ ಘಟನೆಯೇ ಸಾಕ್ಷಿ. ಉತ್ತರಪ್ರದೇಶದ ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 300 ಕಿಲೋ ಮೀಟರ್ ವೇಗದಲ್ಲಿ ಬಿಎಂಡಬ್ಲ್ಯು ಕಾರನ್ನು ಓಡಿಸಿ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣವಾಗಿ ಇಹಲೋಕ ತ್ಯಜಿಸಿದ್ದಾರೆ. ಅಷ್ಟೇ ಅಲ್ಲ ಸಾಯುವ ಕೆಲವೇ ಕ್ಷಣದ ಘಟನೆಯ ಫೇಸ್ ಲೈವ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಏನಿದು ಹುಚ್ಚು ಸಾಹಸ:
ಸುಲ್ತಾನ್ ಪುರದಿಂದ ದೆಹಲಿಗೆ ನಾಲ್ವರು ಯುವಕರ ತಂಡ ಬಿಎಂಡಬ್ಲ್ಯು ಕಾರಿನಲ್ಲಿ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಹುಚ್ಚು ಸಾಹಸದಿಂದ ಕಾರನ್ನು ಗಂಟೆಗೆ 300 ಕಿಲೋ ಮೀಟರ್ ವೇಗದಲ್ಲಿ ಚಲಾಯಿಸಿದ್ದರು. ತಾವು ಅತೀ ವೇಗದಲ್ಲಿ ಹೋಗುತ್ತಿರುವುದನ್ನು ಫೇಸ್ ಬುಕ್ ಲೈವ್ ಮಾಡಿದ್ದು, ಒಬ್ಬಾತ ಇಷ್ಟೊಂದು ವೇಗದಲ್ಲಿ ಹೋದರೆ ನಾಲ್ವರು ಸಾಯುತ್ತೇವೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ.
ಡ್ರೈವರ್ ಬಿಎಂಡಬ್ಲ್ಯು ವೇಗವನ್ನು ಹೆಚ್ಚಿಸಿದ್ದು, ಬಳಿಕ ಕಾರಿನ ವೇಗವನ್ನು 230 ಕಿಲೋ ಮೀಟರ್ ಸ್ಪೀಡ್ ಗೆ ಇಳಿಸಿದ್ದ. ಆಗ ಮತ್ತೊಬ್ಬಾತ ಯಾವುದೇ ಕಾರಣಕ್ಕೂ ಬ್ರೇಕ್ ಮೇಲೆ ಕಾಲಿಡಬೇಡ ಎಂದು ಡ್ರೈವರ್ ಗೆ ಹೇಳಿದ್ದು, ಮತ್ತೊಬ್ಬ ಪ್ರಯಾಣಿಕ ನಿಧಾನಕ್ಕೆ ಹೋಗು ಎಂದು ಫೇಸ್ ಬುಕ್ ಲೈವ್ ನಲ್ಲಿ ದಾಖಲಾಗಿದೆ.
ಅತೀಯಾದ ವೇಗದಲ್ಲಿ ಬಿಎಂಡಬ್ಲ್ಯು ಚಲಾಯಿಸುತ್ತಿದ್ದಾಗಲೇ ಎದುರಿನಿಂದ ಬಂದ ಕಂಟೈನರ್ ಟ್ರಕ್ ಗೆ ಡಿಕ್ಕಿ ಹೊಡೆದು ಬಿಟ್ಟಿತ್ತು. ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಟ್ರಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಎಂಜಿನ್ ಮತ್ತು ನಾಲ್ವರ ದೇಹ ದೂರ ಎಸೆಯಲ್ಪಟ್ಟಿತ್ತು. ಇಡೀ ಸ್ಥಳ ರಕ್ತಸಿಕ್ತವಾಗಿತ್ತು ಎಂದು ವರದಿ ವಿವರಿಸಿದೆ.
पूर्वांचल एक्सप्रेसवे पर 230 की स्पीड से गाड़ी दौड़ाकर कहा- आज चारों मरेंगे
(पार्ट-1) pic.twitter.com/acjyPePaSU
— UnSeen India (@USIndia_) October 15, 2022
ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿರುವುದಾಗಿ ವರದಿ ತಿಳಿಸಿದೆ. ಸಾವನ್ನಪ್ಪಿರುವವರನ್ನು ದೆಹಲಿ ನಿವಾಸಿ ಡಾ.ಆನಂದ್ ಪ್ರಕಾಶ್, ಬಿಹಾರ ನಿವಾಸಿ ಅಖಿಲೇಶ್ ಸಿಂಗ್, ಔರಂಗಬಾದ್ ನಿವಾಸಿಗಳಾದ ದೀಪಕ್ ಕುಮಾರ್ ಮತ್ತು ಉದ್ಯಮಿ ಮುಕೇಶ್ ಎಂದು ಗುರುತಿಸಲಾಗಿದೆ. ಎಲ್ಲರೂ 30 ವರ್ಷದ ಆಸುಪಾಸಿನವರು ಎಂದು ಹೇಳಲಾಗಿದೆ.
ಕಂಟೈನರ್ ಚಾಲಕ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ಪಾನಮತ್ತರಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ