ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ


Team Udayavani, Oct 20, 2021, 3:24 PM IST

eshwarappa

ಶಿವಮೊಗ್ಗ:’ನಾವು ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರಿಗೆ ಹಗುರವಾಗಿವಾಗಿ ಇದುವರೆಗೂ ಟೀಕೆ ಮಾಡಿಲ್ಲ.ಪಾಕಿಸ್ತಾನದ ವಿರುದ್ಧ ತೆಗೆದುಕೊಂಡಿದ್ದ ದಿಟ್ಟ ನಿಲುವಿಗೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹೊಗಳಿದ್ದೆವು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿಯವರ ಬಗ್ಗೆ ನಳಿನ್ ಕುಮಾರ್ ಕಟೀಲ್ ಅವರು ನೀಡಿದ ಹೇಳಿಕೆ ನೀಡಿದ ವಿಚಾರಕ್ಕೆ ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂಗ್ರೆಸ್ ನವರು ಬಹಳ ನೋವಿನಿಂದ ಟೀಕೆ ಮಾಡುತ್ತಿದ್ದಾರೆ.ಬಿಜೆಪಿ ಕೇವಲ ಅನಿಸಿಕೊಳ್ಳಲು ಮಾತ್ರ ಇಲ್ಲ’ ಎಂದರು.

‘ಆಗಿನ ವಿಪಕ್ಷ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು, ಇಂದಿರಾಗಾಂಧಿಯವರನ್ನು ದುರ್ಗೆ ಎಂದು ಹೊಗಳಿದ್ದರು. ಆದರೆ, ವಿಶ್ವವೇ ಮೆಚ್ಚಿರುವ ನಾಯಕ, ಪ್ರಧಾನಿ ನರೇಂದ್ರ ಮೋದಿಯವರಿಗೆ ಹೆಬ್ಬೆಟ್ ಗಿರಾಕಿ ಎಂದು ಕಾಂಗ್ರೆಸ್ ನವರು ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ನವರು ಸೊಕ್ಕಿನಿಂದ ಮಾತನಾಡುತ್ತಾರಲ್ಲಾ.ಹೀಗೆ ಹೇಳಿದಾಗ ನಾವೇನು ಮಂಡಕ್ಕಿ ತಿನ್ನುತ್ತಾ ಕೂರಬೇಕಾ’ ಎಂದು ಕಿಡಿಕಾರಿದರು.

‘ಮೋದಿಗೆ ಟೀಕೆ ಮಾಡಿದ್ದು ಇಡೀ ದೇಶದ, ಪ್ರಪಂಚದ ಜನರಿಗೆ ಇಂತಹ ಹೇಳಿಕೆ ನೋವಾಗಿದೆ. ರಾಹುಲ್ ಗಾಂಧಿ ಬಗ್ಗೆ ಡ್ರಗ್ಸ್ ಪೆಡ್ಲರ್ ಎಂದು ಹೇಳಿದ ಕೂಡಲೇ, ಕಾಂಗ್ರೆಸ್ ನವರ ಹೇಳಿಕೆಗಳು ಬರತೊಡಗಿವೆ.ಕಟೀಲು ಅವರಿಗೆ ನಿಮಾನ್ಸ್ ಗೆ ಸೇರಿಸಿ ಎಂದು ಹೇಳುತ್ತಿದ್ದಾರೆ. ನರೇಂದ್ರ ಮೋದಿಯವರನ್ನು ಟೀಕೆ ಮಾಡಿದ ಅವರಿಗೆ ಯಾವ ಆಸ್ಪತ್ರೆಗೆ ಸೇರಿಸಬೇಕು’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯರಿಗೆ ಯಾವ ಆಸ್ಪತ್ರೆಗೆ ಸೇರಿಸಿದರೂ ಹುಚ್ಚು ವಾಸಿಯಾಗಲ್ಲ’ ಎಂದರು.

‘ನಾವು ಕಾಂಗ್ರೆಸ್ ರಾಷ್ಟ್ರೀಯ ನಾಯಕರುಗಳಿಗೆ ಈ ರೀತಿ ಪದಗಳನ್ನು ಯಾರಿಗೂ ಬಳಸಿದವರಲ್ಲ.ಪ್ರಧಾನಿ ಮೋದಿಯವರಿಗೆ ಟೀಕೆ ಮಾಡಿದ್ದಕ್ಕೆ, ನಮ್ಮ ರಾಜ್ಯಾಧ್ಯಕ್ಷರು, ತಿರುಗೇಟು ನೀಡಿದ್ದಾರಷ್ಟೇ’ ಎಂದರು.

‘ಇದೇ ರೀತಿ ಮುಂದುವರೆಸಿದರೆ, ಈ ರೀತಿ ಹಗುರವಾಗಿ ಮಾತನಾಡಿದರೆ, ನಾವು ಬೇರೆ ಬೇರೆ ರೀತಿಯ ಪದಗಳನ್ನು ನಾವು ಬಳಸಬೇಕಾಗುತ್ತದೆ. ನರೇಂದ್ರ ಮೋದಿಯವರ ಬಗ್ಗೆ ಟೀಕೆ ಮಾಡಿದ ಸಿದ್ಧರಾಮಯ್ಯನವರು, ದೇಶದ ಕ್ಷಮೆ ಕೋರಲಿ.ಕಟೀಲು ಅವರ ಭಾವಚಿತ್ರ ಸುಟ್ಟು ಹಾಕಿದರೆ, ನಾವೇನು ಬೆದರಲ್ಲ.ನಾವು ಶಕ್ತಿಶಾಲಿಯಾಗಿ ಬೆಳೆದಿದ್ದೆವೆ.ಇಡೀ ದೇಶವೇ ನಾವು ಆಳುತ್ತಿದ್ದೆವೆ. ಎಲ್ಲಿದೆ ಕಾಂಗ್ರೆಸ್’ ಎಂದು ಪ್ರಶ್ನಿಸಿದರು.

‘ರಾಷ್ಟ್ರೀಯ ಅಧ್ಯಕ್ಷನ ಆಯ್ಕೆ ಮಾಡುವ ಯೋಗ್ಯತೆ ಇಲ್ಲದವರು ಮೋದಿಯವರ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದರು.

‘ಆರ್.ಎಸ್.ಎಸ್. ಬಗ್ಗೆ ಮಾಜಿ ಸಿ.ಎಂ. ಕುಮಾರಸ್ವಾಮಿ ಟೀಕೆ ಕೂತಿರುವ ಒಬ್ಬ ಕುಂಟನಿಗೆ ಏಳುವ ಶಕ್ತಿ ಇರುವುದಿಲ್ಲ.ಅಂತಹ ಕುಂಟ, ಪೈಲ್ವಾನನಿಗೆ ಎದ್ದು ಬಂದು ಜಾಡಿಸಿ ಒದೆಯುತ್ತೆನೆ ಎಂದು ಹೇಳುತ್ತಾನೆ. ಆದರೆ, ಆ ಕುಂಟನಿಗೆ ಎದ್ದೆಳಲು ಕೂಡ ಶಕ್ತಿ ಇರುವುದಿಲ್ಲ.ಅಂತಹ ಪರಿಸ್ಥಿತಿ ಜೆಡಿಎಸ್ ದ್ದಾಗಿದೆ’ ಎಂದು ಲೇವಡಿ ಮಾಡಿದರು.

‘ಆರ್ ಎಸ್ಎಸ್ ಈಗ ಸೂರ್ಯನಷ್ಟು ಬೆಳೆದಿದೆ.ಆರ್ ಎಸ್ಎಸ್ ಪ್ರಪಂಚದಲ್ಲಿಯೇ, ಸಂಸ್ಕೃತಿ ಬೆಳೆಸುವ ದೊಡ್ಡ ಸಂಘಟನೆ. ಸೂರ್ಯನಿಗೆ ಉಗಿಯುವ ಕೆಲಸ ಇವರು ಮಾಡುತ್ತಿದ್ದಾರೆ. ಸಿದ್ಧರಾಮಯ್ಯರಿಗೆ ಮತ್ತು ಕುಮಾರಸ್ವಾಮಿಯವರಿಗೆ ಆರ್ ಎಸ್ಎಸ್ ನ ಒಂದು ಕೂದಲು ಕೂಡ ಅಲ್ಲಾಡಿಸಲು ಆಗುವುದಿಲ್ಲ’ ಎಂದರು.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.