
ಬಾಪು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ಭಾರತವನ್ನು ಒಗ್ಗೂಡಿಸುತ್ತೇವೆ
ಬದನವಾಳು ಗ್ರಾಮದಲ್ಲಿ ರಾಹುಲ್ ಗಾಂಧಿ
Team Udayavani, Oct 2, 2022, 2:47 PM IST

ಮೈಸೂರು: ರಾಷ್ಟ್ರಪಿತ ಅನ್ಯಾಯದ ವಿರುದ್ಧ ದೇಶವನ್ನು ಏಕೀಕರಿಸಿದ ರೀತಿಯಲ್ಲಿಯೇ ಭಾರತವನ್ನು ಏಕೀಕರಣಗೊಳಿಸುವುದಾಗಿ ರಾಹುಲ್ ಗಾಂಧಿ ಹೇಳಿದರು.
ಗಾಂಧಿ ಜಯಂತಿ ದಿನವಾದ ಇಂದು ಭಾರತ್ ಜೋಡೋ ಯಾತ್ರೆಯ ಕರ್ನಾಟಕ ಚರಣದಲ್ಲಿರುವ ರಾಹುಲ್ ಗಾಂಧಿ ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗದಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಮಹಾತ್ಮ ಗಾಂಧಿಯವರು 1927ರಲ್ಲಿ ಚಾಲನೆ ನೀಡಿದ್ದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ರಾಹುಲ್ ಗಾಂಧಿಯವರೊಂದಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಲ್ಲಿಯ ನೇಯ್ಗೆಕಾರರೊಂದಿಗೆ ಮಾತುಕತೆ ನಡೆಸಿದರು.
ಇದನ್ನೂ ಓದಿ:ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ
“ಬಾಪು ನಮಗೆ ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ನಡೆಯಲು ಕಲಿಸಿದರು. ಅವರು ಪ್ರೀತಿ, ಸಹಾನುಭೂತಿ, ಸಾಮರಸ್ಯ ಮತ್ತು ಮಾನವೀಯತೆಯ ಅರ್ಥವನ್ನು ವಿವರಿಸಿದರು” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
“ಇಂದು ಗಾಂಧಿ ಜಯಂತಿಯಂದು, ಅವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ನಮ್ಮ ಭಾರತವನ್ನು ಒಂದುಗೂಡಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದರು.
बापू ने हमें सत्य और अहिंसा के पथ पर चलना सिखाया। प्रेम, करुणा, सद्भाव और मानवता का अर्थ समझाया।
आज गांधी जयंती पर, हम प्रण लेते हैं, जिस तरह उन्होंने देश को अन्याय के खिलाफ एकजुट किया था, वैसे ही अब हम भी अपना भारत जोड़ेंगे।pic.twitter.com/L2FiuEj0WZ
— Rahul Gandhi (@RahulGandhi) October 2, 2022
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದು, “ಬಾಪು ಸತ್ಯದ ಉದಾಹರಣೆ. ಬಾಪು ಧೈರ್ಯದ ಜ್ಯೋತಿ. ಬಾಪು ಅವರು ದೇಶದ ಜನರ ನೋವುಗಳನ್ನು ಹಂಚಿಕೊಳ್ಳುವ ಮತ್ತು ಇಡೀ ಭಾರತವನ್ನು ಒಂದುಗೂಡಿಸುವ ಭಾರತ ಯಾತ್ರಿ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಹಳೆಯಂಗಡಿ ರೈಲ್ವೇ ಗೇಟ್ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು…!

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್