ನ್ಯಾಯ ಕೊಡಿ, ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ: ಚಪ್ಪಾಳೆ ಪ್ರತಿಭಟನೆ
Team Udayavani, Feb 17, 2022, 1:01 PM IST
ಬೆಂಗಳೂರು : ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಗುರುವಾರವೂ ವಿಧಾನಸಭೆಯಲ್ಲಿ ಧರಣಿ ಮುಂದುವರಿದಿದ್ದು, ” ನ್ಯಾಯ ಕೊಡಿ ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ ” ಎಂದು ಕಾಂಗ್ರೆಸ್ ಶಾಸಕರು ಚಪ್ಪಾಳೆ ಪ್ರತಿಭಟನೆ ನಡೆಸಿದ್ದಾರೆ.
ಗುರುವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಂತಾಪ ನಿರ್ಣಯವನ್ನು ಸ್ಪೀಕರ್ ಮಂಡಿಸಿದರು. ಆ ಬಳಿಕ ಪ್ರಶ್ನೋತ್ತರ ಕಲಾಪ ಆರಂಭವಾಯಿತು. ಈ ಬಗ್ಗೆ ಪ್ರತಿಭಟನಾ ನಿರತ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸಿದರು ಪ್ರಯೋಜನವಾಗಲಿಲ್ಲ.
ಹೀಗಾಗಿ ಕಾಂಗ್ರೆಸ್ ಶಾಸಕರು ಘೋಷಣೆಗೆ ಶರಣಾದರು. ” ದೇಶದ್ರೋಹಿ ದೇಶದ್ರೋಹಿ ಈಶ್ಚರಪ್ಪ ದೇಶದ್ರೋಹಿ ” ಎಂದು ಕೂಗಿ ಈಶ್ವರಪ್ಪ ಅವರನ್ನು ಕೆರಳಿಸುವ ಪ್ರಯತ್ನ ನಡೆಸಿದರು.
ಆದರೆ ಪ್ರಶ್ನೋತ್ತರ ಕಲಾಪ ನಿಲ್ಲಲಿಲ್ಲ. ಹೀಗಾಗಿ ಸ್ಪೀಕರ್ ಪೀಠದತ್ತ ಮುಖಮಾಡಿ ” ನ್ಯಾಯ ಕೊಡಿ ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ” , ಕಣ್ಣು ಬಿಡಿ ಕಣ್ಣು ಬಿಡಿ ಸ್ಪೀಕರ್ ಅವರೇ ಕಣ್ಣು ಬಿಡಿ ಎಂದು ಚಪ್ಪಾಳೆ ಹಾಕಿ ಘೋಷಣೆ ಹಾಕಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಸ್ಟ್ಯಾಂಪ್ ವಿಧೇಯಕವೂ ಮಂಡನೆಯಾಯ್ತು. ಆದರೆ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಸದನವನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ