ನಾವು ಈ ದೇಶದ ರಾಜಕೀಯವನ್ನು ಬದಲಾಯಿಸುತ್ತೇವೆ: ಕೇಜ್ರಿವಾಲ್
75 ವರ್ಷದಿಂದ ಬ್ರಿಟಿಷ್ ವ್ಯವಸ್ಥೆಯನ್ನೇ ಹೊಂದಿದ್ದೇವೆ
Team Udayavani, Mar 10, 2022, 5:18 PM IST
ನವದೆಹಲಿ : ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಳಿಕ ನಾವು ಈ ದೇಶದ ರಾಜಕೀಯವನ್ನು ಬದಲಾಯಿಸುತ್ತೇವೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿಕೆ ನೀಡಿದ್ದಾರೆ.
ಗೆಲುವಿನ ಸಂಭ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್ ಮುಖ್ಯಮಂತ್ರಿಯಾಗುತ್ತಿರುವ ನನ್ನ ಕಿರಿಯ ಸಹೋದರ ಭಗವಂತ್ ಮಾನ್ ಅವರನ್ನು ಅಭಿನಂದಿಸುತ್ತೇನೆ. ಆಪ್ 90 ಸ್ಥಾನಗಳನ್ನು ದಾಟಿದೆ, ಫಲಿತಾಂಶಗಳು ಇನ್ನೂ ಬರುತ್ತಿವೆ, ಜನರು ನಮ್ಮ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ, ನಾವು ಅದನ್ನು ಮುರಿಯುವುದಿಲ್ಲ ಎಂದರು.
ಬ್ರಿಟಿಷರು ಹೋದ ನಂತರ ನಾವು ವ್ಯವಸ್ಥೆಯನ್ನು ಬದಲಾಯಿಸದಿದ್ದರೆ ಏನೂ ಆಗುವುದಿಲ್ಲ ಎಂದು ಭಗತ್ ಸಿಂಗ್ ಒಮ್ಮೆ ಹೇಳಿದ್ದರು. ದುಃಖಕರವೆಂದರೆ ಕಳೆದ 75 ವರ್ಷಗಳಲ್ಲಿ, ಈ ಪಕ್ಷಗಳು ಮತ್ತು ನಾಯಕರು ಅದೇ ಬ್ರಿಟಿಷ್ ವ್ಯವಸ್ಥೆಯನ್ನು ಹೊಂದಿದ್ದರು, ಅವರು ದೇಶವನ್ನು ಲೂಟಿ ಮಾಡುತ್ತಿದ್ದಾರೆ, ಯಾವುದೇ ಶಾಲೆಗಳು/ಆಸ್ಪತ್ರೆಗಳನ್ನು ಮಾಡಲಾಗಿಲ್ಲ. ಆದರೆ ಆಪ್ ವ್ಯವಸ್ಥೆಯನ್ನು ಬದಲಾಯಿಸಿದೆ ಎಂದರು.
ಹಲವು ದಿಗ್ಗಜ ನಾಯಕರನ್ನು ಜನರು ಸೋಲಿಸಿ ಮನೆಗೆ ಕಳುಹಿಸಿದ್ದಾರೆ.ಇದು ಪಂಜಾಬ್ ಜನತೆಯ ಸಾಮರ್ಥ್ಯವನ್ನು ತೋರಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!