ಮಲೆನಾಡನ್ನು ಭಯೋತ್ಪಾದಕರ ಅಡ್ಡೆಯಾಗಲು ಬಿಡುವುದಿಲ್ಲ: ಆರಗ ಜ್ಞಾನೇಂದ್ರ

ಪೊಲೀಸರು ಆಳವಾಗಿ ಇಳಿದು ಕೆಲಸ ಮಾಡಿದ್ದಕ್ಕೆ ಅನಾಹುತ ತಪ್ಪಿದೆ....

Team Udayavani, Sep 24, 2022, 6:35 PM IST

1-saddsada

ತೀರ್ಥಹಳ್ಳಿ : ”ಶಂಕಿತ ಉಗ್ರರು ತೀರ್ಥಹಳ್ಳಿ ಮೂಲದವರೇ ಆಗಿದ್ದರೂ ಕೂಡ ಸಹವಾಸ ಮಂಗಳೂರು ಕರಾವಳಿಯದ್ದು, ಅಲ್ಲಿನ ಕೆಲವು ಮತಾಂಧ ಶಕ್ತಿಯ ಜೊತೆ ಸಂಪರ್ಕ ಇರುವುದರಿಂದ ವ್ಯತ್ಯಾಸವಾಗಿದೆ” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳಿಂದ ಆಹ್ವಾನವಿದೆ: ಜೆಡಿಎಸ್ ಶಾಸಕ ಚವ್ಹಾಣ

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ”ಶಿವಮೊಗ್ಗ ಪೋಲೀಸರನ್ನು ಅಭಿನಂದಿಸುತ್ತೇನೆ. ಪೊಲೀಸರಿಗೆ ಅವಾರ್ಡ್ ಕೂಡ ಘೋಷಣೆ ಮಾಡಲಿದ್ದೇವೆ. ಈ ಕೇಸ್ ಅಲ್ಲಿ ಆಳವಾಗಿ ಇಳಿದು ಕೆಲಸ ಮಾಡಿದ್ದಕ್ಕೆ ಆಗುವ ಅನಾಹುತ ತಪ್ಪಿದೆ. ಬಾಂಬ್ ಟ್ರಯಲ್ ಕೂಡ ನೋಡಿದ್ದರು ಎಂದರೆ ಏನೆಲ್ಲಾ ಅನಾಹುತ ಆಗುತ್ತಿತ್ತೋ ಗೊತ್ತಿಲ್ಲ. ಅದನ್ನು ನಮ್ಮ ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ. ಈ ಆರೋಪಿಗಳಿಗೆ ಯಾವುದರ ಲಿಂಕ್ ಇದೆ ಎಂಬುದರ ಬಗ್ಗೆ ತಪಾಸಣೆ ಆಗುತ್ತಿದೆ. ಈ ರಾಷ್ಟ್ರದ ಏಕತೆಗೆ, ಸಮಗ್ರತೆಗೆ ಭಂಗ ತರುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ಗುಡುಗಿದರು.

”ಮಲೆನಾಡನ್ನು ಯಾವುದೇ ಕಾರಣಕ್ಕೂ ಭಯೋತ್ಪಾದಕ ಅಡ್ಡೆಯಾಗಲು ಬಿಡುವುದಿಲ್ಲ. ಈ ಹಿಂದೆ ನಮ್ಮ ದೇಶದ ಉದ್ದಗಲಕ್ಕೂ ದೀಪಾವಳಿಯಲ್ಲಿ ಪಟಾಕಿ ಹಾರುವ ಹಾಗೆ ಬಾಂಬ್ ಹಾರುತ್ತಿತ್ತು ಈಗ ಎಲ್ಲೂ ಅಂತಹದ್ದು ಇಲ್ಲ. ರಕ್ಷಣಾ ವ್ಯವಸ್ಥೆ ಅಲರ್ಟ್ ಆಗಿದೆ. ಶಾರಿಕ್ ಮತ್ತು ಮತಿನ್ ಇಬ್ಬರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ” ಎಂದರು.

”ಯಾರು ಯಾರಿಗೆ ಯಾವ ಯಾವ ಆಯುಧ ಬಳಸಬೇಕೋ ಯಾರು ಯಾರಿಗೆ ಯಾವ ಭಾಷೆ ಬಳಸಬೇಕೋ ಅದನ್ನ ಬಳಸಬೇಕಾಗುತ್ತದೆ. ಈ ಹಿಂದೆ ಯುಎಪಿಎ ಕೇಸ್ ಹಾಕಿದಾಗ ಅನವಶ್ಯಕವಾಗಿ ಹಾಕ್ತಿದ್ದಾರೆ ಅಂದರು. ಈಗ ಏನಾಯ್ತು, ಇಂತಹ ಪ್ರಕರಣ ಬೆಳಕಿಗೆ ಬಂತು.ಇವರ ಮುಖ ನೋಡಿದರೆ, ಹಿನ್ನೆಲೆ ನೋಡಿದರೆ ಏನು ಅಲ್ಲ ಅನ್ನಿಸುತ್ತದೆ. ಆದರೆ ಮತಾಂಧತೆಗೆ ಒಳಗಾದಾಗ ಇಂತಹ ಕೃತ್ಯ ನಡೆಯುತ್ತದೆ. ಪರಿಶೀಲನೆ ನಡೆಯುತ್ತಿದೆ, ಪೊಲೀಸರಿಗೆ ಎಲ್ಲಾ ರೀತಿಯ ಜಾಡು ಸಿಗುತ್ತಿದೆ” ಎಂದರು.

ನಲಪಾಡ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ”ಉದ್ಯೋಗ ಇದ್ದವರು ಏನೇನು ಮಾಡಿದ್ದಾರೆ ಅಂತ ಗೊತ್ತು.ಯಾವ ಹೋಟೆಲ್ ನಲ್ಲಿ ಏನು ಮಾಡಿದ್ದಾರೆ ಎಂದು ಗೊತ್ತಿದೆ. ನಿರುದ್ಯೋಗಿಗಳು ಎಲ್ಲರೂ  ಬಾಂಬ್ ತಯಾರಿಸಲು ಹೋದರೆ ಈ ದೇಶದಲ್ಲಿ ಶಾಂತಿ ನೆಲೆಸಲು ಹೇಗೆ ಸಾಧ್ಯ” ಎಂದರು.

ಕಾಂಗ್ರೆಸ್ ”ಪೇ ಸಿಎಂ” ಅಭಿಯಾನದ ಬಗ್ಗೆ ಮಾತನಾಡಿ, ಪೇ ಸಿಎಂ ಕಾಂಗ್ರೆಸ್ ನ ವಿಕೃತ ಮನಸ್ಥಿತಿಗೆ ಸಾಕ್ಷಿಯಾಗಿದೆ. ಅವರಿಗೆ ನಾಚಿಕೆ ಆಗಬೇಕು. ನೇರಾನೇರ ರಾಜಕಾರಣ ಮಾಡಿ ಅದರ ಯೋಗ್ಯತೆ ಅವರಿಗೆ ಇಲ್ಲ. ರಮೇಶ್ ಕುಮಾರ್ ಈ ಹಿಂದೆ ಮೂರು ತಲೆ ಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ ಅಂದರು. ಅವರಿಗೆ ಯಾವ ಪೇಸಿಎಂ. ಕಾಂಗ್ರೆಸ್ ನವರನ್ನು ನಂಬುವ ಸ್ಥಿತಿಯಲ್ಲಿ ರಾಜ್ಯದ ಜನರಿಲ್ಲ. ಚುನಾವಣೆ ಸಮೀಪಿಸುತ್ತಿರುವುದರಿಂದ ಇಂತಹ ಗಿಮಿಕ್ ಮಾಡುತ್ತಿದ್ದಾರೆ” ಎಂದರು.

ಕಲಬುರಗಿಯಲ್ಲಿ ಸಿಪಿಐ ಮೇಲೆ ಹಲ್ಲೆಯಾದ ಬಗ್ಗೆ ಮಾತನಾಡಿ, ಒಬ್ಬ ಇನ್ಸ್ ಪೆಕ್ಟರ್ ಮೇಲೆ 30 ಜನ ದಾಳಿ ಮಾಡಿದ್ದಾರೆ. ಆತನ ಮೇಲೆ ಏನು ಆಗಬಹುದೋ ಎಲ್ಲಾ ಆಗಿದೆ. ಆತ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ. ನಾನು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ ಒಳ್ಳೆಯ ಕಡೆ ಚಿಕಿತ್ಸೆ ಕೊಡಿಸಿ ಎಂದು ಹೇಳಿದ್ದೇವೆ. ಬೆಂಗಳೂರಿಗೆ ಕರೆ ತಂದು ಚಿಕಿತ್ಸೆ ಕೊಡಲು ವಿಳಂಬವಾಗುತ್ತದೆ. ಹೀಗಾಗಿ ಹೈದ್ರಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ಸಿದ್ದತೆ ನಡೆಸುತ್ತಿದ್ದಾರೆ. ವೈದ್ಯರ ಅನುಮತಿ ದೊರೆತ ತಕ್ಷಣ ರವಾನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಾಗರಾಜ್ ಶೆಟ್ಟಿ, ಕುಕ್ಕೆ ಪ್ರಶಾಂತ್ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.