ಉಡುಪಿ, ದಕ್ಷಿಣಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ : ಅಶೋಕ್
Team Udayavani, Aug 30, 2021, 7:44 PM IST
ಬೆಂಗಳೂರು : ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೋವಿಡ್ ಸಂಬಂಧ ತಜ್ಞರು, ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕೇರಳದಲ್ಲಿ ಪ್ರತಿದಿನ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ ಹಾಗಾಗಿ ಕೇರಳದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ ಒಂದು ವಾರ ಕ್ವಾರಂಟೈನ್ ಮಾಡಲು ತೀರ್ಮಾನ ಮಾಡಲಾಗಿದ್ದು ಒಂದು ವಾರದ ಬಳಿಕ ಕೊವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.
ಉಳಿದಂತೆ ಚಿಕ್ಕಮಗಳೂರು, ಕೋಲಾರ, ಮೈಸುರು, ಶಿವಮೊಗ್ಗ, ಕಲಬುರ್ಗಿಯಲ್ಲಿ ಪ್ರಮಾಣ 1.5. ಕ್ಕಿಂತ ಕಡಿಮೆ ಇದ್ದು ಅಲ್ಲಿ ವಿಕೇಂಡ್ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ ಎಂದರು.
6,7,8 ನೇ ತರಗತಿ ಆರಂಭ :
ಶೇ 2% ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6,7,8 ನೇ ತರಗತಿ ಸೆಪ್ಟೆಂಬರ್ 6ನೇ ತಾರೀಖಿನಿಂದ ಶಾಲೆ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು ಶೇ 50% ರಷ್ಟು ಮಾತ್ರ ಮಕ್ಕಳು ಹಾಜರಾಗಬೇಕು ಎನ್ನಲಾಗಿದೆ. ಅಲ್ಲದೆ ವಾರದಲ್ಲಿ 5 ದಿನ ಮಾತ್ರ ಶಾಲೆ ನಡೆಸಲು ಅವಕಾಶ ಕಲ್ಪಿಸಲಾಗಿದ್ದು ಉಳಿದ ಎರಡು ದಿನಗಳಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಲು ಮಾಡಲು ಅವಕಾಶ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಸೇರ್ಪಡೆಯಾದ ಅಖಂಡ; ಶೋಭಾ ಕರಂದ್ಲಾಜೆ ಗೆಲ್ಲಿಸಲು ಕೆಲಸ ಮಾಡುತ್ತೇನೆ
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ
MUST WATCH
ಹೊಸ ಸೇರ್ಪಡೆ
Congress;ಕೋಲಾರದಲ್ಲಿ ‘ಮುಖ್ಯಮಂತ್ರಿ’ ಡಿ.ಕೆ.ಶಿವಕುಮಾರ್ ಎಂದ ರಾಹುಲ್ ಗಾಂಧಿ!
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ
BJP ಸೇರ್ಪಡೆಯಾದ ಅಖಂಡ; ಶೋಭಾ ಕರಂದ್ಲಾಜೆ ಗೆಲ್ಲಿಸಲು ಕೆಲಸ ಮಾಡುತ್ತೇನೆ
Lok Sabha Polls; ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!