ವೀಕೆಂಡ್ ಪಾರ್ಟಿಗೆ ಪೊಲೀಸರ ದಾಳಿ : ಅಮಲು ಪದಾರ್ಥಗಳು ವಶಕ್ಕೆ
Team Udayavani, Apr 10, 2021, 11:15 PM IST
ನೆಲಮಂಗಲ: ತಾಲೂಕಿನ ಮರಸರಹಳ್ಳಿಯಲ್ಲಿ ಹೊರರಾಜ್ಯದ ಯುವಕ ಯುವತಿಯರ ನಡೆಸುತ್ತಿದ್ದ ವೀಕೆಂಡ್ ಪಾರ್ಟಿಗೆ ಪೊಲೀಸರು ದಾಳಿ ನಡೆಸಿ ಗಾಂಜಾ ಹಾಗೂ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ನಗರದಲ್ಲಿ ನೈಟ್ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಶ್ರೀನಿವಾಸಪುರ ಗ್ರಾಮ ಪಂಚಾಯ್ತಿಯ ಮರಸರಹಳ್ಳಿಯಲ್ಲಿ ನಿವೃತ್ತ ಡೀಸಿ ತೋಟದಲ್ಲಿ ಕೇರಳ, ತಮಿಳುನಾಡು ಹಾಗೂ ಬೆಂಗಳೂರು ಸುತ್ತಮುತ್ತಲಿನ 70ಕ್ಕೂ ಹೆಚ್ಚು ಯುವಕ ಯುವತಿಯರು 1 ಸಾವಿರ ರೂ.ನಿಂದ 10 ಸಾವಿರ ರೂ.ವರೆಗೂ ಹಣ ನೀಡಿ ಪಾರ್ಟಿಯಲ್ಲಿ ಭಾಗವಹಿಸಿದ್ದರು.
ದಿಢೀರ್ ದಾಳಿ:
ಶನಿವಾರ ಮಧ್ಯಾಹ್ನದಿಂದ ಬೆಂಗಳೂರು, ಹೊರರಾಜ್ಯಗಳಿಂದ ಆಗಮಿಸಿರುವ ಯುವಕ ಯುವತಿಯರು ಸಂಜೆ ವೇಳೆಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಜಗದೀಶ್ ಹಾಗೂ ವೃತ್ತ ನಿರೀಕ್ಷಕ ಹರೀಶ್ ಕುಮಾರ್, ಸಬ್ಇನ್ಸ್ಪೆಕ್ಟರ್ ವಸಂತ್, ಸುರೇಶ್ ನೇತೃತ್ವದಲ್ಲಿ ದಿಢೀರ್ ದಾಳಿ ಮಾಡಿಸಿದ ಪೊಲೀಸರು ಯುವಕ ಯುವತಿಯರನ್ನು ವಶಕ್ಕೆ ಪಡೆದು ಪಾರ್ಟಿಗೆ ತಂದಿದ್ದ ಮದ್ಯ ಹಾಗೂ ಗಾಂಜಾ ವಶಕ್ಕೆ ಪಡೆದರು.
ಪೊಲೀಸರು ದಿಢೀರ್ ದಾಳಿ ನಡೆಸುತ್ತಿದಂತೆ ಪಾರ್ಟಿ ಆಯೋಜನೆ ಮಾಡಿದ್ದ ವ್ಯಕ್ತಿ ನಾಪತ್ತೆ ಆಗಿದ್ದಾನೆ. ಇಂತಹ ಪಾರ್ಟಿಗಳನ್ನು ನಡೆಸಲು ಜಮೀನು ಮಾಲಿಕರು ಅನುಮತಿ ನೀಡಿದ್ದು ಹೇಗೆ? ಕೊರೊನಾ ಕಟ್ಟುನಿಟ್ಟಿನ ನಿಯಮದ ನಡುವೆ 70ಕ್ಕೂ ಹೆಚ್ಚು ಹೊರರಾಜ್ಯದ ಯುವಕರು ಸೇರಿದ್ದು ಹೇಗೆ? ಎಂಬ ಅನುಮಾನಗಳು ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್