ಪಂಜಾಬ್ ನಲ್ಲಿ ಕೇಜ್ರಿವಾಲ್: ಎಲ್ಲರೂ ಹೆಮ್ಮೆ ಪಡುವ ಸಿಎಂ ಅಭ್ಯರ್ಥಿ ನೀಡುತ್ತೇವೆ
Team Udayavani, Sep 29, 2021, 5:17 PM IST
ಮೊಹಾಲಿ: ‘ನಾವು ಮತ್ತೆ ಮತ್ತೆ ಹೇಳುತ್ತಿದ್ದೇವೆ, ಆಮ್ ಆದ್ಮಿ ಪಕ್ಷ ಪಂಜಾಬ್ ಗೆ ಎಲ್ಲರೂ ಹೆಮ್ಮೆ ಪಡುವಂತಹ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನೀಡುತ್ತದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
ಚುನಾವಣಾ ತಯಾರಿ ಮತ್ತು ಪಕ್ಷ ಸಂಘಟನಾ ಕಾರ್ಯಕ್ರಮಕ್ಕಾಗಿ ಪಂಜಾಬ್ ಗೆ ಆಗಮಿಸಿರುವ ಕೇಜ್ರಿವಾಲ್ ಅವರು , ‘ನೀವೆಲ್ಲರೂ ಹೆಮ್ಮೆ ಪಡುವಂತಹ, ಪಂಜಾಬ್ ಹೆಮ್ಮೆ ಪಡುವಂತಹ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಾವು ಘೋಷಿಸುತ್ತೇವೆ’. ನಾಳೆ ಸುದ್ದಿಗೋಷ್ಠಿಯಲ್ಲಿ ಸವಿವರಗಳನ್ನು ನೀಡುವುದಾಗಿ ತಿಳಿಸಿದರು.
ಬರ್ಗಾರಿ ಗ್ರಾಮದಲ್ಲಿ ಸಿಖ್ ಪವಿತ್ರ ಗ್ರಂಥ ಅಪವಿತ್ರ ಗೊಳಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿ, ‘ಪ್ರಕರಣದ ಮಾಸ್ಟರ್ ಮೈಂಡ್ ಯಾರು ಎನ್ನುವುದನ್ನು ನಾನೇನು ಹೇಳಬೇಕಾಗಿಲ್ಲ. ಇದುವರೆಗೆ ಅವನಿಗೆ ಯಾವುದೇ ಶಿಕ್ಷೆಯಾಗಿಲ್ಲ. ಛನ್ನಿ ಸಾಹೇಬರು ಕುನ್ವಾರ್ ವಿಜಯ್ ಪ್ರತಾಪ್ ಅವರ ವರದಿಯನ್ನು ಓದಲೇಬೇಕು. ಅಲ್ಲಿ ಅವರಿಗೆ ಆರೋಪಿಗಳ ಹೆಸರು ಸಿಗುತ್ತದೆ. 24 ಗಂಟೆಗಳ ಒಳಗೆ ಅವರನ್ನು ಬಂಧಿಸಲಿ’ ಎಂದರು.
ಮುಖ್ಯಮಂತ್ರಿಯಾದ ಚರಣ್ ಜಿತ್ ಸಿಂಗ್ ಛನ್ನಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಅವರು ಕಳಂಕಿತರು ಮತ್ತು ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ