ಮರೆಯಾದ ಕಂಚಿನ ಕಂಠ; ಭಾಗವತಿಕೆಗೆ ಮಂಗಳ ಹಾಡಿದ ಬಲಿಪ ಭಾಗವತರು
ಬಲಿಪ ಶೈಲಿಯ ಕಂಪನ್ನು ಯಕ್ಷಲೋಕದಲ್ಲಿ ಪಸರಿಸಿದ್ದ ದಿಗ್ಗಜ
Team Udayavani, Feb 16, 2023, 8:08 PM IST
ಮಂಗಳೂರು : ಯಕ್ಷಗಾನ ರಂಗ ಕಂಡ ತೆಂಕುತಿಟ್ಟಿನ ಪ್ರಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ ಅವರು ಗುರುವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಮೂಡಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದರು. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದರು.
ಬಲಿಪ ಭಾಗವತರ ನಿಧಾನಕ್ಕೆ ಗಣ್ಯರು, ಜನಪ್ರತಿನಿಧಿಗಳು ಸೇರಿ ಸಾವಿರಾರು ಮಂದಿ ಕಲಾವಿದರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇವರ ಪುತ್ರ ಭಾಗವತ ಪ್ರಸಾದ್ ಅವರು 2022 ಏಪ್ರಿಲ್ ತಿಂಗಳಿನಲ್ಲಿ ಇಹಲೋಕ ತ್ಯಜಿಸಿದ್ದರು.
ದೇವಿ ಮಾಹಾತ್ಮೆ, ಕಟೀಲು ಕ್ಷೇತ್ರ ಮಾಹಾತ್ಮೆ, ತೆಂಕು ತಿಟ್ಟಿನ ಎಲ್ಲಾ ಪೌರಾಣಿಕ ಪ್ರಸಂಗಳ ಪದ್ಯಗಳಿಗೆ ತನ್ನ ಪರಿಪೂರ್ಣ ಯಕ್ಷಗಾನೀಯ ಶೈಲಿಯ ಏರು ಸ್ವರದ ಭಾಗವತಿಕೆಯ ಮೂಲಕ ಪರಿಪೂರ್ಣ ನ್ಯಾಯ ಒದಗಿಸಿಕೊಟ್ಟವರು ಬಲಿಪ ಭಾಗವತರು.
ಬಲಿಪ ನಾರಾಯಣ ಭಾಗವತರು 60ಕ್ಕೂ ಹೆಚ್ಚು ವರ್ಷಗಳ ಕಾಲ ಸುದೀರ್ಘ ಯಕ್ಷಗಾನ ಕಲಾ ಸೇವೆ ಸಲ್ಲಿಸಿದ್ದಾರೆ. ಪಡ್ರೆ ಜಠಾಧಾರಿ ಮೇಳವನ್ನು ಮೊದಲಿಗೆ ಆರಂಭಿಸಿದ್ದರು. ಯಕ್ಷಗಾನದ 50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಬಲಿಪ ಭಾಗವತರಿಗಿತ್ತು.30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ.
ತೆಂಕು ತಿಟ್ಟು ಯಕ್ಷ ರಂಗದ ಭೀಷ್ಮ ಎಂದು ಕರೆಯುತ್ತಿದ್ದರು.ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ.ಬಲಿಪ ನಾರಾಯಣ ಭಾಗವತರು ”ಐದು ದಿನದ ದೇವೀ ಮಹಾತ್ಮೆ” ಎಂಬ ಮಹಾಪ್ರಸಂಗವನ್ನು ರಚಿಸಿದ್ದು ಯಕ್ಷಗಾನದ ಇತಿಹಾಸದಲ್ಲೇ ಮಹತ್ವದ ಕೃತಿಯಾಗಿ ಮೂಡಿ ಬಂದಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಸಾವಿರಾರು ಸನ್ಮಾನಗಳು ಅವರಿಗೆ ಸಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ