ವಿಮೋಚನೆ ಹೋರಾಟದಲ್ಲಿ ಭಾಗಿ : ಬಾಂಗ್ಲಾ ಸ್ವರ್ಣ ಸ್ವಾತಂತ್ರೋತ್ಸವದಲ್ಲಿ ಮೋದಿ
Team Udayavani, Mar 27, 2021, 7:20 AM IST
ಢಾಕಾ: “ಬಾಂಗ್ಲಾದೇಶ ವಿಮೋಚನೆಗಾಗಿ ನಾನೂ ಸತ್ಯಾಗ್ರಹ ನಡೆಸಿ ಜೈಲಿಗೆ ಹೋಗಿದ್ದೆ. ನನ್ನ ರಾಜಕೀಯ ಬದುಕಿನ ಮೊದಲ ಹೋರಾಟಗಳಲ್ಲಿ ಅದೂ ಒಂದಾಗಿತ್ತು…’
-ಪ್ರಧಾನಿ ಮೋದಿ ಅವರ ಮಾತಿದು. ಬಾಂಗ್ಲಾ ದೇಶದ 50ನೇ ಸ್ವಾತಂತ್ರೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿರುವ ಅವರು, ಬಾಂಗ್ಲಾ ವಿಮೋಚನೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಬಾಂಗ್ಲಾ ವಿಮೋಚನೆಯಲ್ಲಿ ಭಾರತೀಯ ಸೇನೆ ನಿರ್ವಹಿಸಿದ್ದ ಪಾತ್ರದ ಬಗ್ಗೆ ಪ್ರಸ್ತಾವಿಸಿದರಲ್ಲದೆ ಭಾರತೀಯ ಯೋಧರನ್ನು ಕೊಂಡಾಡಿದರು.
ಬಾಂಗ್ಲಾದೇಶ ವಿಮೋಚನೆಯಲ್ಲಿ ವಂಗ ಬಂಧು ಶೇಖ್ ಮುಜೀಬುರ್ ರೆಹಮಾನ್ ಅವರ ನಾಯಕತ್ವ ಮತ್ತು ಭಾರತೀಯ ಸೇನೆಯ ತ್ಯಾಗ ಮತ್ತು ಬಲಿದಾನವನ್ನು ನೆನೆಯಬೇಕು. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಭಾರತೀಯ ಸೇನೆಯ ವೀರ ಯೋಧರು ಹುತಾತ್ಮರಾಗಿದ್ದಾರೆ. ಈ ಯೋಧರಿಗೆ ನಮಿಸುತ್ತೇನೆ ಎಂದಿದ್ದಾರೆ.
“1971ರ ಬಾಂಗ್ಲಾ ವಿಮೋಚನೆಯ ದಿನಗಳು ಇನ್ನೂ ನೆನಪಿವೆ. ನನಗಾಗ 20-22 ವರ್ಷಗಳಾಗಿದ್ದಿರಬೇಕು, ನಾನು ಕಾಲೇಜಿನಲ್ಲಿ ಓದುತ್ತಿದ್ದೆ. ಬಾಂಗ್ಲಾ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ನಾನೂ ಭಾಗಿಯಾಗಿದ್ದೆ’ ಎಂದು ಮೋದಿ ನೆನಪಿಸಿಕೊಂಡರು.
ಕಾರ್ಯಕ್ರಮದ ಆರಂಭದಲ್ಲಿ ಶೇಖ್ ಮುಜೀಬುರ್ ರೆಹಮಾನ್ ಅವರಿಗೆ ಮರಣೋತ್ತರವಾಗಿ ಗಾಂಧಿ ಶಾಂತಿಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಜೀಬುರ್ ರೆಹಮಾನ್ ಅವರ ಪರವಾಗಿ ಪುತ್ರಿಯರಾದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಶೇಕ್ ರೆಹಾನಾ ಅವರು ಪ್ರಶಸ್ತಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್