ಶಿಕ್ಷಕರ ನೇಮಕಾತಿ ಹಗರಣ: ಪಾರ್ಥ, ಅರ್ಪಿತಾಗೆ ಸೇರಿದ 46 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಸಚಿವ ಪಾರ್ಥ ಚಟರ್ಜಿಯನ್ನು ಜುಲೈ 23ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.
Team Udayavani, Sep 19, 2022, 4:05 PM IST
ಕೋಲ್ಕತ: ಶಿಕ್ಷಕರ ನೇಮಕಾತಿ ಹಗರಣದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಆಪ್ತೆ ಅರ್ಪಿತಾ ಮುಖರ್ಜಿಗೆ ಸೇರಿದ್ದ 46.22 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ (ಸೆ.19) ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರವೀಣ್ ಕುಟುಂಬಕ್ಕೆ ನೀಡಿದ ಭರವಸೆ ಈಡೇರಿಸಿ, ತಪ್ಪಿದರೆ ಸಿಎಂ ಮುಖಕ್ಕೆ ಮಸಿ : ಮುತಾಲಿಕ್
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೀಡಿರುವ ಪ್ರಕಟಣೆಯಲ್ಲಿ, ಪಾರ್ಥ ಚಟರ್ಜಿ ಮತ್ತು ಅರ್ಪಿತಾಗೆ ಸೇರಿದ ಫ್ಲ್ಯಾಟ್, ಫಾರ್ಮ್ ಹೌಸ್ ಸೇರಿದಂತೆ ಒಟ್ಟು 40.33 ಕೋಟಿ ರೂಪಾಯಿ ಮೌಲ್ಯದ 40 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಇದನ್ನು ಹೊರತುಪಡಿಸಿ 35 ಬ್ಯಾಂಕ್ ಖಾತೆಗಳಲ್ಲಿ ಇರುವ 7.89 ಕೋಟಿ ರೂಪಾಯಿ ಠೇವಣಿ ಜಪ್ತಿ ಮಾಡಲಾಗಿದೆ ಎಂದು ವಿವರಿಸಿದೆ.
ಜಪ್ತಿ ಮಾಡಲಾದ ಸ್ಥಿರಾಸ್ತಿಯು ಬಹುತೇಕ ನಕಲಿ ಕಂಪನಿ ಮತ್ತು ವ್ಯಕ್ತಿಗಳ ಹೆಸರನ್ನು ಹೊಂದಿರುವುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿಕಟವರ್ತಿ, ಸಚಿವ ಪಾರ್ಥ ಚಟರ್ಜಿಯನ್ನು ಜುಲೈ 23ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ