ಬಿಗ್ ಬಾಸ್ ವಿಜೇತ, ನಟ ಸಿದ್ದಾರ್ಥ್ ಶುಕ್ಲಾ ಸಾವಿಗೂ ಮುನ್ನ ರಾತ್ರಿ ನಡೆದಿದ್ದೇನು?

ಸಿದ್ದಾರ್ಥ್ ಕುಟುಂಬ ಸದಸ್ಯರು ಹಾಗೂ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

Team Udayavani, Sep 2, 2021, 4:48 PM IST

ಬಿಗ್ ಬಾಸ್ ವಿಜೇತ, ನಟ ಸಿದ್ದಾರ್ಥ್ ಶುಕ್ಲಾ ಸಾವಿಗೂ ಮುನ್ನ ರಾತ್ರಿ ನಡೆದಿದ್ದೇನು?

ಮುಂಬಯಿ:ಕಿರುತೆರೆ ಖ್ಯಾತ ನಟ, ಬಾಲಿಕಾ ವಧು ಧಾರವಾಹಿಯ ಮೂಲಕ ಜನಪ್ರಿಯತೆ ಗಳಿಸಿದ್ದ ಸಿದ್ದಾರ್ಥ್ ಶುಕ್ಲಾ ಗುರುವಾರ ಮುಂಬಯಿ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕರೆ ತರುವ ಮುನ್ನವೇ ಶುಕ್ಲಾ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು.

ಶುಕ್ಲಾ ಸಾವಿಗೂ ಮುನ್ನ ಮನೆಯಲ್ಲಿ ಏನಾಗಿತ್ತು?

ಕೆಲವು ವರದಿಗಳ ಪ್ರಕಾರ ಸಿದ್ದಾರ್ಥ್ ಶುಕ್ಲಾ ಮಲಗುವ ಮುನ್ನ ಕೆಲವೊಂದು ಔಷಧಗಳನ್ನು ಸೇವಿಸಿದ್ದರು. ಬಳಿಕ ಬೆಳಿಗ್ಗೆ ಅವರು ಎದ್ದೇಳಲೇ ಇಲ್ಲ ಎಂದು ತಿಳಿಸಿದೆ.

ಪೊಲೀಸ್ ಮೂಲಗಳ ಪ್ರಕಾರ ಬೆಳಗ್ಗಿನ ಜಾವ 3.3.30ರ ಹೊತ್ತಿಗೆ ಸಿದ್ದಾರ್ಥ್ ಶುಕ್ಲಾ ಎದ್ದು ಕುಳಿತಾಗ ತುಂಬಾ ಸುಸ್ತಾದ ಅನುಭವವಾಗಿದ್ದು, ತನಗೆ ಎದೆ ನೋವು ಇರುವುದಾಗಿ ಶುಕ್ಲಾ ತಾಯಿಗೆ ತಿಳಿಸಿದ್ದರು. ತಾಯಿ ಸ್ವಲ್ಪ ನೀರು ಕುಡಿಯಲು ಕೊಟ್ಟು, ನಂತರ ಮಲಗಲು ಹೇಳಿದ್ದರು. ಬೆಳಗ್ಗೆ ತಾಯಿ ಮಗನನ್ನು ಎಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲವಾಗಿತ್ತು. ಕೂಡಲೇ ತಾಯಿ ತಮ್ಮ ಸಹೋದರಿಗೆ ವಿಷಯ ತಿಳಿಸಿದ್ದರು, ನಂತರ ವೈದ್ಯರಿಗೆ ಕರೆ ಮಾಡಿದ್ದರು.

ಸಿದ್ದಾರ್ಥ್ ಶುಕ್ಲಾ ದೇಹದಲ್ಲಿ ಯಾವುದೇ ಗಾಯದ ಕಲೆಗಳಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶುಕ್ಲಾ ಅವರ ಬಾವ ಹಾಗೂ ಸಂಬಂಧಿಕರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಶುಕ್ಲಾ ಸಾವನ್ನಪ್ಪಿರುವುದಾಗಿ ತಿಳಿಸಿದ್ದರು. ಸಿದ್ದಾರ್ಥ್ ಕುಟುಂಬ ಸದಸ್ಯರು ಹಾಗೂ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಸಿದ್ದಾರ್ಥ್ ಸಾವಿನ ಬಗ್ಗೆ ಕುಟುಂಬ ಸದಸ್ಯರು ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ ಎಂದು ವರದಿ ಹೇಳಿದೆ.

ಸಿದ್ದಾರ್ಥ್ ಸಾವಿನ ಬಗ್ಗೆ ವೈದ್ಯರು ಹೇಳಿದ್ದೇನು?

ನಟ ಸಿದ್ದಾರ್ಥ ಶುಕ್ಲಾ ದೇಹದಲ್ಲಿ ಯಾವುದೇ ಗಾಯದ ಕಲೆಗಳು ಕಂಡುಬಂದಿಲ್ಲ. ಶುಕ್ಲಾ ಸಾವಿನ ಬಗ್ಗೆ ಆರಂಭಿಕವಾಗಿ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲವಾಗಿತ್ತು. ಶುಕ್ಲಾ ಅವರನ್ನು ಬಾವ ಹಾಗೂ ಸಂಬಂಧಿಕರು ಮತ್ತು ಮೂವರು ಸ್ನೇಹಿತರು ಕೂಪರ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ನಲ್ಲಿ ತಂದಿದ್ದು, ಅದಾಗಲೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು.

ಶುಕ್ಲಾ ಅವರು ಶೋಬಿಜ್ ನಲ್ಲಿ ರೂಪದರ್ಶಿಯಾಗಿ ವೃತ್ತಿಜೀವನ ಆರಂಭಿಸಿದ್ದರು. ಬಳಿಕ ಬಬುಲ್ ಕಾ ಆಂಗನ್ ಚೂಟೇ ನಾ ಟಿವಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ನಂತರ ಜಾನೇ ಪೆಹಜಾನೇ ಸೆ ಯೇ ಅಜ್ನನಬಿ, ಲವ್ ಯೂ ಜಿಂದಗಿ ಧಾರವಾಹಿಯಲ್ಲಿ ನಟಿಸಿದ್ದರೂ ಕೂಡಾ ಬಾಲಿಕಾ ವಧು ಮೂಲಕ ಸಿದ್ದಾರ್ಥ್ ಜನಪ್ರಿಯರಾಗಿದ್ದರು.

ಝಲಕ್ ದಿಖ್ಲಾ ಜಾ 6, ಫಿಯರ್ ಫ್ಯಾಕ್ಟರ್; ಖತ್ರೋನ್ ಕೆ ಕಿಲಾಡಿ 7 ಹಾಗೂ ಬಿಗ್ ಬಾಸ್ 13 ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅಲ್ಲದೇ ಬಿಗ್ ಬಾಸ್ 13ನೇ ಸೀಸನ್ ನಲ್ಲಿ ವಿನ್ನರ್ ಆಗಿ ಹೊರಹೊಮ್ಮಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.