ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ಕಟ್ಟಲು ಯಾವ ಧರ್ಮ ಹೇಳುತ್ತದೆ? : ಹೈಕೋರ್ಟ್‌


Team Udayavani, Mar 15, 2021, 11:40 PM IST

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ಕಟ್ಟಲು ಯಾವ ಧರ್ಮ ಹೇಳುತ್ತದೆ? : ಹೈಕೋರ್ಟ್‌

ಬೆಂಗಳೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ನಿರ್ಮಿಸಿ ಎಂದು ಯಾವ ಧರ್ಮ ಹೇಳುತ್ತದೆ ಎಂದು ಪ್ರಶ್ನಿಸಿರುವ ಹೈಕೋರ್ಟ್‌, ದೇವರು-ಧರ್ಮದ ಹೆಸರಲ್ಲಿ ಸಾರ್ವಜನಿಕ ಆಸ್ತಿ ದುರ್ಬಳಕೆ ಮಾಡಿಕೊಳ್ಳುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಕೋಲಾರದ ಚನ್ನಸಂದ್ರ ಹಾಗೂ ಮಂಗಸಂದ್ರ ಗ್ರಾಮಗಳಲ್ಲಿನ ಸರ್ಕಾರಿ ಗೋಮಾಳಗಳ ಜಮೀನಿನಲ್ಲಿ ಅನಧಿಕೃತವಾಗಿ ದೇವಸ್ಥಾನ, ಚರ್ಚ್‌ ಹಾಗೂ ಮಿನಾರ್‌ ನಿರ್ಮಾಣ ಮಾಡಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಸಿದ್ದನಹಳ್ಳಿಯ ಕಿಶೋರ್‌ ರಾಮಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ರೀತಿ ಹೇಳಿತು.

ವಿಚಾರಣೆ ವೇಳೆ ಧಾರ್ಮಿಕ ಕಟ್ಟಡಗಳ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಯನ್ನು ಗಮನಿಸಿದ ನ್ಯಾಯಪೀಠ, ಅವರ ಸಮರ್ಥನೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಹೊಸದಾಗಿ ದೇವಸ್ಥಾನ ನಿರ್ಮಿಸಿಲ್ಲ. 8 ವರ್ಷಗಳ ಹಿಂದೆ ದೇವಸ್ಥಾನ ನಿರ್ಮಿಸಿದ್ದೇವೆ. ಪ್ರಸ್ತುತ ಜಾಗವನ್ನು ದೇವಸ್ಥಾನಕ್ಕೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಅದ್ಹೇಗೆ, ಸರ್ಕಾರಿ ಜಮೀನಿನಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸುತ್ತೀರಿ. ಮೊದಲು ಅವುಗಳನ್ನು ತೆರವು ಮಾಡಿ, ಆಮೇಲೆ ನಿಮ್ಮ ಮನವಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ನಿರ್ದೇಶನ ನೀಡಲಾಗುವುದು ಎಂದು ಹೇಳಿತು.

ಇದನ್ನೂ ಓದಿ :ನೋಟಾ: ಕೇಂದ್ರದ ಅಭಿಪ್ರಾಯ ಕೋರಿದ ಸುಪ್ರೀಂ ಕೋರ್ಟ್

ಅಲ್ಲದೇ, ಗೋಮಾಳ, ಸರ್ಕಾರಿ ಜಾಗದಲ್ಲಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಿ ಎಂದು ಯಾವ ಧರ್ಮ ಹೇಳುತ್ತದೆ. ದೇವರು, ಧರ್ಮದ ಹೆಸರಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುವುದು ಎಷ್ಟು ಸರಿ. ಸುಪ್ರೀಂ ಕೋರ್ಟ್‌ 11 ವರ್ಷಗಳ ಹಿಂದೆಯೇ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಲು ಆದೇಶಿಸಿದೆ. ಹಾಗಿದ್ದೂ, 8 ವರ್ಷಗಳ ಹಿಂದೆ ದೇವಸ್ಥಾನ ನಿರ್ಮಿಸಿದ್ದೇವೆಂದು ಸಮರ್ಥನೆ ಕೊಡುತ್ತಿದ್ದೀರಿ. ಸುಪ್ರೀಂ ತೀರ್ಪಿನ ಹೊರತಾಗಿಯೂ ನೀವು ಯಾವ ಕಾನೂನಿನ ಆಧಾರದಲ್ಲಿ ಧಾರ್ಮಿಕ ಕಟ್ಟಡ ನಿರ್ಮಿಸಿದ್ದೀರಿ ಎಂಬುದಕ್ಕೆ ಸ್ಪಷ್ಟನೆ ನೀಡಿ ಎಂದು ಧಾರ್ಮಿಕ ಕಟ್ಟವೊಂದರ ಪರ ವಕೀಲರಿಗೆ ಹೇಳಿತು. ಅಲ್ಲದೇ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಒಂದೇ ಧರ್ಮವನ್ನು ಗುರಿ ಮಾಡುವುದನ್ನೂ ನ್ಯಾಯಾಲಯ ಸಹಿಸಿಕೊಳ್ಳುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರಿಗೆ ನ್ಯಾಯಪೀಠ ಎಚ್ಚರಿಕೆ ನೀಡಿತು.

ದೇವಸ್ಥಾನ ಇರುವ ಜಾಗ ಸರ್ಕಾರಿ ಗೋಮಾಳ ಎಂದು ಹೇಳಲಾಗಿದ್ದು, ಅದನ್ನು ತೆರವು ಮಾಡುವ ಸಂಬಂಧ ಕ್ರಮ ಕೈಗೊಳ್ಳಿ. ಹಾಗೆಯೇ ಅರ್ಜಿದಾರರು ಆರೋಪಿಸಿರುವಂತೆ ದೇವಸ್ಥಾನ, ಚರ್ಚ್‌ ಹಾಗೂ ಮಿನಾರ್‌ ಇರುವ ಜಾಗವು ಗೋಮಾಳದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ವೆ ನಡೆಸಿ, ಆ ಕುರಿತ ವರದಿಯನ್ನು ಸಲ್ಲಿಸಿ ಎಂದು ಕೋಲಾರ ತಹಶೀಲ್ದಾರ್‌ಗೆ ನಿರ್ದೇಶನ ನೀಡಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಕೋಲಾರದ ಚನ್ನಸಂದ್ರ ಗ್ರಾಮದ ಸರ್ವೆ ನಂಬರ್‌ 49ರ ಜಮೀನು ಸರ್ಕಾರಿ ಗೋಮಾಳವಾಗಿದ್ದು, ಇಲ್ಲಿ ದೇವಸ್ಥಾನ, ಚರ್ಚ್‌ ಹಾಗೂ ಮಿನಾರ್‌ ನಿರ್ಮಿಸಲಾಗಿದೆ. ಅದೇ ರೀತಿ ಮಂಗಸಂದ್ರ ಗ್ರಾಮದ ಸರ್ವೆ ನಂಬರ್‌ 94 ರಲ್ಲಿನ ಗೋಮಾಳದಲ್ಲಿ ಚರ್ಚ್‌ ನಿರ್ಮಿಸಲಾಗಿದೆ. ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ಈ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಬೇಕು. ಗೋಮಾಳಕ್ಕೆಂದೇ ಮೀಸಲಿರಿಸಿರುವ ಜಾಗವನ್ನು ರಕ್ಷಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.