ಇರಲಿ ಇಮ್ಮಡಿ ಎಚ್ಚರ; ಇಂದಿನಿಂದ ಅನ್‌ಲಾಕ್‌ 1.0 ದೈಹಿಕ ಅಂತರ, ಮಾಸ್ಕ್ ಅಗತ್ಯ


Team Udayavani, Jun 8, 2020, 6:20 AM IST

ಇರಲಿ ಇಮ್ಮಡಿ ಎಚ್ಚರ; ಇಂದಿನಿಂದ ಅನ್‌ಲಾಕ್‌ 1.0 ದೈಹಿಕ ಅಂತರ, ಮಾಸ್ಕ್ ಅಗತ್ಯ

ಬೆಂಗಳೂರು: ಕಳೆದ 75 ದಿನಗಳಿಂದ ಮುಚ್ಚಿದ್ದ ದೇವಸ್ಥಾನ, ಮಾಲ್‌, ಹೊಟೇಲ್‌ಗ‌ಳು ಸೋಮವಾರ ತೆರೆಯಲಿವೆ. ಹಾಗೆಂದು ಒಮ್ಮೆಗೇ ಕಿಕ್ಕಿರಿಯದಿರೋಣ. ಈ ಸ್ಥಳಗಳಲ್ಲಿ ಜನಸಂದಣಿ ಸೇರ‌ಲು ಆಸ್ಪದಕೊಡ ದಿರೋಣ. ಮುಖ್ಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಕಡ್ಡಾಯವಾಗಿರಲಿ.

ಸೋಮವಾರದಿಂದ ಅನ್‌ಲಾಕ್‌ 1.0 ಜಾರಿಯಾಗುತ್ತದೆ. ಆದರೆ ಸದ್ಯ ಕೋವಿಡ್-19  ಜತೆ ಜತೆಗೇ ಬದುಕಬೇಕಾದ ಸ್ಥಿತಿ ಇದ್ದು, ಬಹಳ ಎಚ್ಚರಿಕೆಯಿಂದ ಇರಬೇಕಿದೆ. ಲಾಕ್‌ಡೌನ್‌ ಅವಧಿ ಮತ್ತು ಸಡಿಲಿಕೆ ಅವಧಿಗೆ ಹೋಲಿಸಿದರೆ ಪ್ರಸ್ತುತ ಸೋಂಕು ಪ್ರಕರಣಗಳ ಸಂಖ್ಯೆ ಸಾಕಷ್ಟು ಏರುಗತಿಯಲ್ಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಅನಗತ್ಯ ಸಂಚಾರಕ್ಕೆ ಮುಂದಾಗಬಾರದು ಎಂದು ಸರಕಾರ ಹೇಳು ತ್ತಿದ್ದರೂ ಸೋಂಕುಪೀಡಿತರ ಸಂಖ್ಯೆ ಹಲವು ಪಟ್ಟು ಹೆಚ್ಚುತ್ತಿದೆ. ಹೀಗಾಗಿ ಎಚ್ಚರ ಇರಲೇಬೇಕು.

ದೇಗುಲ, ಮಾಲ್‌ ತೆರೆಯಲಿದೆ
ನಿರ್ಬಂಧ ಸಡಿಲಿಕೆಯ ಮೊದಲ ಹಂತದಲ್ಲಿ ದೇವಸ್ಥಾನ, ಪ್ರಾರ್ಥನ ಮಂದಿರಗಳು,ಮಾಲ್‌ಗ‌ಳ ಆರಂಭಕ್ಕೆ ಸೋಮವಾರದಿಂದ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಇತರ ಧಾರ್ಮಿಕ ಕೇಂದ್ರ,ಪ್ರಾರ್ಥನ ಮಂದಿರಗಳಲ್ಲೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಧಾರ್ಮಿಕ ಚಟುವಟಿಕೆಗಳು ಆರಂಭವಾಗಲಿವೆ.

ಸಿಗಲಿದೆ ಹೊಟೇಲ್‌ ಊಟ, ಉಪಾಹಾರ
ಹೊಟೇಲ್‌, ರೆಸ್ಟೋರೆಂಟ್‌ಗಳಲ್ಲಿ ಸೋಮವಾರ ಸ್ಥಳದಲ್ಲೇ ತಿಂಡಿ, ಊಟ ಒದಗಿಸಲು ಅನುಮತಿ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ, ನೈರ್ಮಲ್ಯ ರಕ್ಷಣೆ, ಗ್ರಾಹಕರ ಸಂಖ್ಯೆಗೆ ಮಿತಿ ಮತ್ತಿತರ ಷರತ್ತುಗಳೊಂದಿಗೆ ಇವು ತೆರೆಯಬೇಕಿದೆ. ಈ ಹಿನ್ನೆಲೆಯಲ್ಲಿ ಜನರ ಓಡಾಟ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಲಾಕ್‌ಡೌನ್‌ ಜಾರಿಗೂ 10 ದಿನ ಮೊದಲೇ ಸ್ಥಗಿತ ಗೊಂಡಿದ್ದ ಮಾಲ್‌ಗ‌ಳು ತೆರೆದು ಕೊಳ್ಳಲಿವೆ. ಪ್ರತಿಷ್ಠಿತ ಮಾಲ್‌ಗ‌ಳಲ್ಲಿ ಕೆಲವು ದಿನಗಳಿಂದ ಸಾಮಾಜಿಕ ಅಂತರ ಪಾಲನೆ, ನೈರ್ಮಲ್ಯ, ಗ್ರಾಹಕರು ಗುಂಪುಗೂಡುವ ಸ್ಥಳ ತೆರವು, ಬಿಲ್ಲಿಂಗ್‌ ಕೌಂಟರ್‌ನಲ್ಲಿ ಮಾರ್ಕಿಂಗ್‌, ಸುಗಮ ಓಡಾಟ, ಪ್ರತ್ಯೇಕ ಪ್ರವೇಶ,ನಿರ್ಗಮನ ದ್ವಾರಗಳ ವ್ಯವಸ್ಥೆ ಕಲ್ಪಿಸುವ ಕಾರ್ಯ ನಡೆದಿತ್ತು.ಬಹುತೇಕ ಮಾಲ್‌ಗ‌ಳು ಸೋಮವಾರದಿಂದಲೇ ಆರಂಭವಾಗಲಿವೆ.

ಇರಲಿ ಮೈತುಂಬ ಎಚ್ಚರ
ಒಂದೆಡೆ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಮತ್ತೂಂದೆಡೆ ಲಾಕ್‌ಡೌನ್‌ ತೆರವಾಗುತ್ತಿದ್ದು, ಇದರಿಂದ ಜನಸಂದಣಿ ಇನ್ನಷ್ಟು ಹೆಚ್ಚಲಿದೆ. ಇಂತಹ ಸಂದರ್ಭ ಸಣ್ಣ ನಿರ್ಲಕ್ಷ್ಯವೂ ದೊಡ್ಡ ಬೆಲೆ ತೆರಲು ಕಾರಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸರಕಾರಕ್ಕಿಂತ ತೆರೆದುಕೊಳ್ಳಲಿರುವ ಕೇಂದ್ರಗಳು, ಜನರ ಜವಾಬ್ದಾರಿಯೇ ಹೆಚ್ಚಿದೆ. ನಮ್ಮ ಮುಂದಿನ ನಡೆ ಹೇಗಿರಬೇಕು ಎಂಬ ಬಗ್ಗೆ ಕೆಲವು ಸಲಹೆಗಳು ಇಲ್ಲಿವೆ.
-ನಿರ್ಬಂಧ ತೆರವಾಗಿದೆ ಎಂಬ ನೆಪದಲ್ಲಿ ಅನಗತ್ಯ ಓಡಾಟ ಸರಿಯಲ್ಲ. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬಂದು ಸಂಚಾರ ನಡೆಸೋಣ.
-ಉತ್ಸವಗಳು, ಮದುವೆ ಮತ್ತಿತರ ಸಂಭ್ರಮ ಮನೆಗೇ ಸೀಮಿತವಾಗಿರಲಿ.
-ಮುಖಗವಸು, ಸ್ಯಾನಿಟೈಸರ್‌ ಮತ್ತಿತರ ಮುನ್ನೆಚ್ಚರಿಕೆಯನ್ನು ಕೈಗೊಳ್ಳುವಲ್ಲಿ ರಾಜಿ ಸಲ್ಲದು.
-ಎಷ್ಟೇ ತುರ್ತು ಇದ್ದರೂ ದೈಹಿಕ ಅಂತರ ಕಾಪಾಡೋಣ.
-ದೇಗುಲ,ಚರ್ಚ್‌,ಮಸೀದಿಗಳಿಗೆ ಏಕಾಏಕಿ ಭಕ್ತರ ದಂಡು ಹೆಚ್ಚಾಗಬಹುದು. ಹಾಗಾಗಿ ಸದ್ಯಕ್ಕೆ ಭೇಟಿಯನ್ನು ಸಾಧ್ಯವಾದಷ್ಟು ಮುಂದೂಡುವುದು ಸೂಕ್ತ.
-ಪ್ರಧಾನಿ ಮೋದಿ ಹೇಳಿದಂತೆ ಸಾಧ್ಯವಾದಷ್ಟು ತಂತ್ರಜ್ಞಾನಗಳ ಬಳಕೆ ಆಗಲಿ.
-ಸರಕಾರಿ ಕಚೇರಿ,ಕಂಪೆನಿಗಳಲ್ಲಿ ಅಧಿಕಾರಿ ಮಟ್ಟದ ಸಭೆಗಳು ವೀಡಿಯೋ ಕಾನ್ಫರೆನ್ಸ್‌ ಮೂಲ ಕವೇ ಮುಂದುವರಿಯಲಿ.
-ಕೋವಿಡ್‌-19ಕ್ಕೆ ಸಂಬಂಧಿಸಿದಂತೆ ಸರಕಾರ ನೀಡಿರುವ ಸೂಚನೆಗಳನ್ನು ತಪ್ಪದೆ ಪಾಲಿಸೋಣ.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.