
ಹೈಕಮಾಂಡ್ಗೆ ಕಪ್ಪ ಕೊಟ್ಟ ಹಣ ಎಲ್ಲಿಂದ?: ಸುಧಾಕರ್
Team Udayavani, Jan 24, 2023, 6:40 AM IST

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅವರ ಬಲಗೈ ಬಂಟನ ಮನೆ ಮೇಲೆ ಐಟಿ ದಾಳಿ ನಡೆದು ಹೈಕಮಾಂಡ್ಗೆ 1,000 ಕೋಟಿ ರೂ. ಕಪ್ಪ ಕೊಟ್ಟ ವಿಚಾರ ಬೆಳಕಿಗೆ ಬಂತು. ಸಿದ್ದರಾಮಯ್ಯನವರು ಈ ಹಣವನ್ನು ತಮ್ಮ ಬಜೆಟ್ನಲ್ಲಿ ನಿಗದಿ ಮಾಡಿ ಕೊಟ್ಟಿದ್ದರಾ ಎಂದು ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಪ್ರಶ್ನೆ ಮಾಡಿದ್ದಾರೆ
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ರಾತೋರಾತ್ರಿ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ, ಎಸಿಬಿ ರಚನೆ ಮಾಡಿತು. ಲೋಕಾ ಯುಕ್ತವನ್ನು ಮುಚ್ಚಿದ್ದಕ್ಕೆ ಹೈಕೋರ್ಟ್ ಛೀಮಾರಿ ಹಾಕಿತ್ತು. ಅಂದಿನ ಸಿಎಂ ವಿರುದ್ಧ 50-60 ದೂರು ಬಂದ ಮೇಲೆ ತನಿಖೆ ಆಗುತ್ತೆ ಅನ್ನುವ ಭಯದಿಂದ ಹೀಗೆಲ್ಲ ಮಾಡಿತು ಎಂದರು.
ಸಿಎಜಿ ವರದಿ ಪ್ರಕಾರ 2013- 2018ರಲ್ಲಿ 35 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ. ಡಿ ನೋಟಿಫಿಕೇಷನ್ ಅನ್ನುವುದಕ್ಕೆ ರೀಡೂ ಅನ್ನುವ ಹೊಸ ಪದವನ್ನೇ ಸೃಷ್ಟಿ ಮಾಡಿದ್ದಾರೆ. 10 ಸಾವಿರ ಬೆಂಗಳೂರು ನಿವಾಸಿಗಳಿಗೆ ಅನ್ಯಾಯವಾಗಿದೆ. 900 ಎಕ್ರೆಗೂ ಹೆಚ್ಚು ಜಾಗವನ್ನು ರೀಡೂ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಕೆ.ಜೆ ಜಾರ್ಜ್ ಕಾಂಗ್ರೆಸ್ನ ಭ್ರಷ್ಟಾಚಾರಗಳಿಗೆ ನೆರವಾಗಿದ್ದರು. 292 ಕೋಟಿ ರೂ. ವೈಟ್ ಟಾಪಿಂಗ್ ಅಂದಾಜು ಇತ್ತು, ಅದನ್ನ 374 ಕೋಟಿಗೆ ಹೆಚ್ಚಿಸಿದರು. ಯಾಕೆ ಶೇ.25 ಹೆಚ್ಚಳಕ್ಕೆ ಅನುಮತಿ ನೀಡಿದ್ದರು? ಯಾವ ಉದ್ದೇಶಕ್ಕೆ ಹೆಚ್ಚಿಗೆ ಕೊಟ್ಟಿರಿ ಎಂದು ಪ್ರಶ್ನಿಸಿದರು.
ಡಾ| ಕೆ.ಸುಧಾಕರ್ ಈ ಹಿಂದೆ ಯಾವ ಪಕ್ಷದಲ್ಲಿ ಇದ್ದರು? ಕೊರೊನಾ ಸಮಯದಲ್ಲಿ ಲೂಟಿ ಮಾಡಿದ್ದು ಸುಧಾಕರ್ ತಾನೆ? ನಮ್ಮ ಮುಖ ಚೆನ್ನಾಗಿದೆ, ಕನ್ನಡಿಯಲ್ಲಿ ನಿಮ್ಮ ಮುಖನೋಡಿಕೊಳ್ಳಿ. 60 ವರ್ಷ ನಾವು ಲೂಟಿ ಮಾಡಿದ್ದರೆ ತನಿಖೆ ಮಾಡಿಸಿ.
-ಸಿದ್ದರಾಮಯ್ಯ, ವಿಪಕ್ಷ ನಾಯಕ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train Tragedy ತಾಯ್ನಾಡಿಗೆ ವಾಪಸ್ ಆದ ಹುಣಸೂರಿನ ಕ್ರೀಡಾಪಟುಗಳು

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

Congress Guarantee ಘೋಷಣೆಯಿಂದ ಬಿಜೆಪಿಗೆ ಆತಂಕ: ಸಚಿವ ಸತೀಶ್ ಜಾರಕಿಹೊಳಿ

ಸಿದ್ರಾಮಣ್ಣೋರ್ ಫೈವ್ ಗ್ಯಾರಂಟಿ ಕೊಟ್ಮ್ಯಾಕೆ ಲೈಫ್ ಈಸ್ ಜಿಂಗಾಲಾಲಾ…
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
