ಪಂಚಮಸಾಲಿ ಸಮುದಾಯದಿಂದ ಸಂಪುಟ ಸೇರುವುದು ಯಾರು?ಯತ್ನಾಳ್ ಸೇರ್ಪಡೆಗೆ ವಿರೋಧ
ಬಿಜೆಪಿಯಲ್ಲಿ 15 ಪಂಚಮಸಾಲಿ ಸಮುದಾಯವನ್ನು ಪ್ರತಿನಿಧಿಸುವ ಶಾಸಕರಿದ್ದಾರೆ
Team Udayavani, Feb 7, 2022, 11:18 AM IST
ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಈಗ ಮುಕ್ತ ಮನಸು ಹೊಂದಿದ್ದಾರೆ. ಆದರೆ ಈ ಪ್ರಕ್ರಿಯೆಗೆ ಈಗ ಪಂಚಮಸಾಲಿ ಸಮುದಾಯದಿಂದ ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ? ಎಂಬ ದೊಡ್ಡ ಪ್ರಶ್ನೆ ಎದುರಾಗಿದೆ.
ಇದನ್ನೂ ಓದಿ:ಲತಾ ಮಂಗೇಶ್ಕರ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಶಾರುಖ್: ‘ಜಾತ್ಯಾತೀತ ಭಾರತ’ ಎಂದ ನೆಟ್ಟಿಗರು
ವೋಟ್ ಬ್ಯಾಂಕ್ ರಾಜಕಾರಣದ ದೃಷ್ಟಿಯಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಪಂಚಮಸಾಲಿ ಲಿಂಗಾಯಿತ ಸಮುದಾಯ ಮಹತ್ವದ್ದಾಗಿದೆ. ಎರಡು ಪಕ್ಷ ಸೇರಿ 20ಕ್ಕೂ ಹೆಚ್ಚು ಪಂಚಮಸಾಲಿ ಸಮುದಾಯದ ಶಾಸಕರಿದ್ದಾರೆ. ಬಿಜೆಪಿಯಲ್ಲಿ 15 ಪಂಚಮಸಾಲಿ ಸಮುದಾಯವನ್ನು ಪ್ರತಿನಿಧಿಸುವ ಶಾಸಕರಿದ್ದಾರೆ. ಹೀಗಾಗಿ ಈ ಸಮುದಾಯಕ್ಕೆ ಪ್ರಾಧಾನ್ಯತೆ ನೀಡುವುದು ಈಗ ಅನಿವಾರ್ಯವಾಗಿದೆ.
ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಸೇರಿಸ ಮೂವರಿಗೆ ಈಗಾಗಲೇ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಆದರೆ ಸಮುದಾಯದ ಮುಖಂಡರು ಹಾಗೂ ಸಂಪುಟದಲ್ಲಿ ಸ್ಥಾನ ಪಡೆದ ಸಚಿವರ ಮಧ್ಯೆ ಹೇಳಿಕೊಳ್ಳುವಂಥ ಹೊಂದಾಣಿಕೆ ಇಲ್ಲ. ಪಂಚಮಸಾಲಿ ಮಠಾಧೀಶರ ಪರವಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ಸಂಪುಟದಿಂದ ಹೊರಗಿದ್ದಾರೆ.
ಬಿಜೆಪಿ ಮೂಲಗಳ ಪ್ರಕಾರ ಸಂಪುಟ ಪುನಾರಚನೆಯಾದರೆ ಸಚಿವ ನಿರಾಣಿಯನ್ನು ಕೈ ಬಿಟ್ಟಿ ಯತ್ನಾಳ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಕ್ಕೆ ಸಿಎಂ ಬೊಮ್ಮಾಯಿ ಉತ್ಸುಕರಾಗಿದ್ದಾರೆ. ಆದರೆ ಬೆಲ್ಲದ್ ಪರ ಸಂಘ ಪರಿವಾರದ ನಾಯಕರು ಒಲವು ಹೊಂದಿದ್ದಾರೆ. ಬೆಲ್ಲದ್ ಹಾಗೂ ಯತ್ನಾಳ್ ಇಬ್ಬರಿಗೂ ಸಂಪುಟದಲ್ಲಿ ಅವಕಾಶ ನೀಡಲೇಬಾರದು ಎಂದು ಮಾಜಿ ಸಿಎಂ ಯಡಿಯೂರಪ್ಪ ಪಟ್ಟು ಹಿಡಿದು ಕುಳಿತಿದ್ದಾರೆ.
ಹೀಗಾಗಿ ಪಂಚಮಸಾಲಿ ಸಮುದಾಯದ ರಾಜಕೀಯ ಗೋಜಲು ನಿವಾರಣೆ ಮಾಡುವುದು ಸಿಎಂ ಬೊಮ್ಮಾಯಿಗೆ ಸವಾಲಾಗಿ ಪರಿಣಮಿಸಿದೆ. ಯಾರಿಗೆ ಅವಕಾಶ ನೀಡಿದರೂ ಮತ್ತೊಂದು ಬಣ ಮುನಿಸಿಕೊಳ್ಳುವುದು ನಿಶ್ಚಿತ. ಈ ಸಮಸ್ಯೆ ನಿವಾರಣೆ ಮಾಡುವುದು ಬೊಮ್ಮಾಯಿ ಅವರಿಗೆ ಹಗ್ಗದ ಮೇಲಿನ ನಡಿಗೆಯಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ