ಎಚ್ಚರ…ನಿರ್ಲಕ್ಷ್ಯ ಬೇಡ; ಏನಿದು ಒಮಿಕ್ರಾನ್‌ ರೂಪಾಂತರಿ?ಕೋವಿಡ್ ನ ಹೊಸ ತಳಿ

ಬೋಟ್ಸಾವಾನಾ ರೂಪಾಂತರಿ ಅಥವಾ ಒಮಿಕ್ರಾನ್‌ ರೂಪಾಂತರಿ ಎಂದು ಹೆಸರಿಡಲಾಗಿದೆ.

Team Udayavani, Nov 27, 2021, 12:00 PM IST

ಎಚ್ಚರ…ನಿರ್ಲಕ್ಷ್ಯ ಬೇಡ; ಏನಿದು ಒಮಿಕ್ರಾನ್‌ ರೂಪಾಂತರಿ?ಕೋವಿಡ್ ನ ಹೊಸ ತಳಿ

ವಾಷಿಂಗ್ಟನ್: ದಕ್ಷಿಣ ಆಫ್ರಿಕಾದ ಅತಿ ಜನನಿಬಿಡ ಪ್ರಾಂತ್ಯವಾದ ಗುಟೆಂಗ್ ನಲ್ಲಿ ಪತ್ತೆಯಾಗಿರುವ ಕೋವಿಡ್ ವೈರಸ್ ನ ಹೊಸ ರೂಪಾಂತರ ತಳಿಗೆ (ಬಿ.1.1.529) ಒಮಿಕ್ರಾನ್ ಎಂದು ವಿಶ್ವಸಂಸ್ಥೆ ಹೆಸರಿಟ್ಟಿದೆ.

ಏನಿದು ಒಮಿಕ್ರಾನ್‌ ರೂಪಾಂತರಿ?

ದಕ್ಷಿಣ ಆಫ್ರಿಕಾದ ಅತಿ ಜನನಿಬಿಡ ಪ್ರಾಂತ್ಯವಾದ ಗುಟೆಂಗ್‌ ನಲ್ಲಿ ಈ ವೈರಾಣುವಿರುವ ಹೊಸ ಪ್ರಕರಣಗಳು ಪತ್ತೆಯಾಗಿವೆ. ಅತ್ತ, ಹಾಂಕಾಂಗ್‌, ಬೋಟ್ಸಾವಾನಾದಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಲ್ಲಿ ಇದೇ ಮಾದರಿಯ ವೈರಾಣು ಪತ್ತೆಯಾಗಿದೆ. ಇದಕ್ಕೆ ಬೋಟ್ಸಾವಾನಾ ರೂಪಾಂತರಿ ಅಥವಾ ಒಮಿಕ್ರಾನ್‌ ರೂಪಾಂತರಿ ಎಂದು ಹೆಸರಿಡಲಾಗಿದೆ.

ಹೆಚ್ಚು ಶಕ್ತಿಶಾಲಿ

ಸಾಮಾನ್ಯವಾಗಿ ಕೊರೊನಾ ವೈರಾಣುವಿನ ಮೇಲೆ ಪ್ರೊಟೀನ್‌ನಿಂದ ಕೂಡಿದ ಮುಳ್ಳಿನಂಥ ಆಕಾರವಿರುತ್ತದೆ. ಬಿ.1.1.529 ರೂಪಾಂತರಿ ವೈರಾಣುವಿನಲ್ಲಿ ಈ ಪ್ರೋಟೀನ್‌, ಕನಿಷ್ಟ 30 ಬಾರಿಯಾದರೂ ರೂಪಾಂತರ ಹೊಂದಿದೆದೆ. ಹಾಗಾಗಿ, ಇದು ಈವರೆಗಿನ ಎಲ್ಲಾ ರೂಪಾಂತರಿ ಗಳಿಗಿಂತ ಹೆಚ್ಚು ವೇಗವಾಗಿ, ಹೆಚ್ಚು ಪರಿಣಾಮಕಾರಿಯಾಗಿ ಹರಡ ಬಲ್ಲದು ಎನ್ನಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಬುಧವಾರ- ಗುರುವಾರಗಳಂದು ದಾಖಲಾಗಿ ರುವ 1,100 ಹೊಸ ಕೊರೊನಾ ಪ್ರಕರಣಗಳಲ್ಲಿ ಶೇ. 90ರಷ್ಟು ಹೊಸ ರೂಪಾಂತರಿ ಪತ್ತೆಯಾಗಿ ರುವುದು ಇದರ ತ್ವರಿತ ಹರಡುವಿಕೆಗೆ ಸಾಕ್ಷಿಯಾಗಿದೆ.

ಸಮಾಧಾನಕರ ಸಂಗತಿ!

ಕೊರೊನಾಕ್ಕೆ ಈವರೆಗೆ ಅಭಿವೃದ್ಧಿಪಡಿಸಲಾಗಿರುವ ಎಲ್ಲಾ ಲಸಿಕೆಗಳು ಈ ಹೊಸ ರೂಪಾಂತರಿ ವೈರಾಣುವನ್ನು ಹತ್ತಿಕ್ಕುವಲ್ಲಿ ಶಕ್ತವಾಗಿವೆ ಎಂದು ವಿಜ್ಞಾನಿಗಳು  ತಿಳಿಸಿದ್ದಾರೆ. ಇನ್ನು, ಈ ವೈರಾಣುವಿನಿಂದ ಈವರೆಗೆ ಕಂಡಿರದ ಅತಿ ಭೀಕರ ಕೊರೊನಾ ರೋಗ ಉಂಟಾಗುತ್ತದೆ ಎಂಬುದಂತೂ ಸುಳ್ಳು ಎಂದೂ ವಿಜ್ಞಾನಿಗಳು ತಿಳಿಸಿದ್ದಾರೆ. ಇವೆರಡೂ ವಿಚಾರಗಳು, ಹೊಸ ರೂಪಾಂತರಿಯ ಭೀತಿಯ ನಡುವೆಯೂ ಈ ವಿಚಾರ ಸಮಾಧಾನ ಹಾಗೂ ಆತ್ಮವಿಶ್ವಾಸ ತರುವಂಥದ್ದಾಗಿವೆ.

ಕಟ್ಟೆಚ್ಚರ ವಹಿಸಿ: ಕೇಂದ್ರದ ಸೂಚನೆ

ಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕಟ್ಟೆಚ್ಚರದ ಸೂಚನೆ ರವಾನಿಸಿದೆ. “ವಿದೇಶಗಳಿಂದ, ಅದರಲ್ಲೂ ವಿಶೇಷವಾಗಿ ದಕ್ಷಿಣ ಆಫ್ರಿಕಾದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ಕೊರೊನಾ ಪರೀಕ್ಷೆ ನಡೆಸಬೇಕು. ಜೊತೆಗೆ, ಸಾರ್ವಜನಿಕರಿಗೆ ನಡೆಸಲಾಗುತ್ತಿರುವ ಪರೀಕ್ಷೆಗಳನ್ನು ಇನ್ನೂ ಹೆಚ್ಚಿ ಮಟ್ಟದಲ್ಲಿ ನಡೆಸಬೇಕು’ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ. ಜೊತೆಗೆ, ಯಾವ ದೇಶಗಳ ಪ್ರಜೆಗಳಿಗೆ ಕೊರೊನಾ ಪರೀಕ್ಷೆಗಳನ್ನು ಕಡ್ಡಾಯಗೊಳಿಸಬೇಕೆಂದು ಸೂಚಿಸುವ ಪಟ್ಟಿಯನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಯು.ಕೆ. ಸೇರಿದಂತೆ ಎಲ್ಲಾ ಐರೋಪ್ಯ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಬೋಟ್ಸಾವಾನಾ, ಚೀನಾ, ಮಾರಿಷಸ್‌, ನ್ಯೂಜಿಲೆಂಡ್‌, ಜಿಂಬಾಬ್ವೆ, ಸಿಂಗಾಪುರ ದೇಶಗಳ ಜೊತೆಗೆ ಈಗ ಹೊಸದಾಗಿ ಹಾಂಕಾಂಗ್‌, ಇಸ್ರೇಲ್‌ ರಾಷ್ಟ್ರಗಳನ್ನು ಸೇರಿಸಲಾಗಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.