ನಟ ಸುಶಾಂತ್ ಸಾವಿಗಿಂತ ಮೊದಲು “ರಿಯಾ ಚಕ್ರವರ್ತಿ” ಮನೆಯಿಂದ ಹೊರಬಿದ್ದಿದ್ದೇಕೆ?

ಬಾಂದ್ರಾದ ಅಪಾರ್ಟ್ ಮೆಂಟ್ ನಲ್ಲಿ ರಿಯಾ ಹಾಗೂ ಸುಶಾಂತ್ ಒಟ್ಟಿಗೆ ವಾಸಿಸುತ್ತಿದ್ದರು

Team Udayavani, Jun 14, 2020, 5:51 PM IST

ನಟ ಸುಶಾಂತ್ ಸಾವಿಗಿಂತ ಮೊದಲು “ರಿಯಾ ಚಕ್ರವರ್ತಿ”  ಮನೆಯಿಂದ ಹೊರಬಿದ್ದಿದ್ದೇಕೆ

ಮುಂಬೈ: ಬಾಲಿವುಡ್ ನ ಯುವ ಪ್ರತಿಭಾವಂತ ನಟ, ಟಿವಿ ಸೀರಿಯಲ್ ಮೂಲಕ ವೃತ್ತಿ ಆರಂಭಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿರುವುದು ಬಾಲಿವುಡ್ ಗೆ ಆಘಾತಕಾರಿ ಸುದ್ದಿಯಾಗಿದೆ. ಏತನ್ಮಧ್ಯೆ ಸುಶಾಂತ್ ಮಾನಸಿಕ ಒತ್ತಡ(ಡಿಪ್ರೆಶನ್)ದಿಂದ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ.

ಯುವ ಪ್ರತಿಭೆಯ ನಟ ಸುಶಾಂತ್ ಸಿಂಗ್ ಸಹ ನಟಿಯಾಗಿದ್ದ ಅಂಕಿತಾ ಲೋಖಾಂಡೆಯನ್ನು ಸುಮಾರು ಆರು ವರ್ಷಗಳ ಕಾಲ ಪ್ರೀತಿಸಿದ್ದರು. ಆದರೆ 2016ರಲ್ಲಿ ಇಬ್ಬರ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಬೇರೆ, ಬೇರೆಯಾಗಿದ್ದರು.

ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಜತೆ, ಜತೆಯಾಗಿ ಸುತ್ತಾಡುವ ಮೂಲಕ ಇಬ್ಬರ ನಡುವಿನ ರಿಲೇಷನ್ ಶಿಪ್ ಬಗ್ಗೆ ಗಾಸಿಪ್ ಹರಿದಾಡತೊಡಗಿತ್ತು. ಚಿಚೋರೆ ಸಿನಿಮಾದ ಯಶಸ್ಸಿನ ನಂತರ ಸುಶಾಂತ್ ಇಂಡಸ್ಟ್ರಿಯಲ್ಲಿ ಹೆಚ್ಚು ಸದ್ದು ಮಾಡಲಿಲ್ಲ. ಆದರೆ ಮಾಧ್ಯಮಗಳ ವರದಿ ಪ್ರಕಾರ, ಸುಶಾಂತ್ ಮತ್ತು ರಿಯಾ ಜೋಡಿ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗತೊಡಗಿತ್ತು.

ಸುಶಾಂತ್ ಕೂಡಾ ರಿಯಾಳ ಚೆಂದನೆಯ ಫೋಟೋವನ್ನು ಇನ್ಸ್ ಸ್ಟಾಗ್ರಾಂ ಸ್ಟೋರಿಯಲ್ಲಿ ಹಾಕಿಕೊಳ್ಳುವ ಮೂಲಕ ತಮ್ಮ ಲವ್ ಅಫೇರ್ ಅನ್ನು ಪರೋಕ್ಷವಾಗಿ ತಿಳಿಸಿದ್ದರು. “ಮೇರಿ ಜಿಲೇಬಿ@ರಿಯಾಚಕ್ರವರ್ತಿ” ಎಂದು ಕ್ಯಾಪ್ಶನ್ ಕೊಟ್ಟಿದ್ದರು.

ಬಾಂದ್ರಾದ ಅಪಾರ್ಟ್ ಮೆಂಟ್ ನಲ್ಲಿ ರಿಯಾ ಹಾಗೂ ಸುಶಾಂತ್ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಉನ್ನತ ಮಟ್ಟದ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ನಾಲ್ಕು ದಿನದ ಮೊದಲು ರಿಯಾ ಅಪಾರ್ಟ್ ಮೆಂಟ್ ನಿಂದ ಹೊರನಡೆದಿದ್ದಳು ಎಂದು ಹೇಳಲಾಗುತ್ತಿದೆ. ಬಂಗಾಳಿ ಕುಟುಂಬದ ರಿಯಾ ಚಕ್ರವರ್ತಿ ಜಿನಿಸಿದ್ದು ಬೆಂಗಳೂರಿನಲ್ಲಿ. ಈಕೆ ಅಂಬಾಲಾ ಕಂಟೋನ್ಮೆಂಟ್ ನ ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಪಡೆದಿದ್ದಳು. 2013ರಲ್ಲಿ ತೆರೆಕಂಡಿದ್ದ ಬಾಲಿವುಡ್ ನ ಮೇರೆ ಡ್ಯಾಡಿ ಕಿ ಮಾರುತಿ ಸಿನಿಮಾದಲ್ಲಿ ನಟಿಸಿದ್ದಳು.

ಇಬ್ಬರ ನಡುವೆ ಜಗಳ ನಡೆದಿದ್ದರಬಹುದು, ಇದರಿಂದಾಗಿ ಸುಶಾಂತ್ ಮಾನಸಿಕ ಒತ್ತಡಕ್ಕೆ ಒಳಗಾಗಿರಬೇಕೆಂದು ವಿಶ್ಲೇಷಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.