ಪರಿವಾರದ ‘ಆ ಪ್ರಭಾವಿ’ ಎರಡು ಬಾರಿ ಸಿಎಂ ಭೇಟಿ ಮಾಡಿದ್ದೇಕೆ?; ಸದ್ದಿಲ್ಲದೆ ನಡೆಯುತ್ತಿದೆ ಹಲವು ಬೆಳವಣಿಗೆಗಳು


Team Udayavani, Dec 10, 2022, 11:42 AM IST

ಪರಿವಾರದ ‘ಆ ಪ್ರಭಾವಿ’ ಎರಡು ಬಾರಿ ಸಿಎಂ ಭೇಟಿ ಮಾಡಿದ್ದೇಕೆ?;

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶದ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಹಲವು ವಿದ್ಯಮಾನಗಳು ಸದ್ದಿಲ್ಲದೇ ನಡೆಯುತ್ತಿದೆ. ಬಿಜೆಪಿಯ ಆಗುಹೋಗುಗಳ ವಿಚಾರದಲ್ಲಿ ಪ್ರಧಾನ ಪಾತ್ರ ವಹಿಸುವ ಸಂಘ-ಪರಿವಾರದ ಪ್ರಭಾವಿಯೊಬ್ಬರು ಶುಕ್ರವಾರ ಎರಡು ಬಾರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿರುವುದು ಈಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸರ್ಕಾರ, ಸಂಘಟನೆಯಲ್ಲಿ ಬದಲಾವಣೆ, ಪುನಾರ್ರಚನೆ ಸಂದರ್ಭ ಎದುರಾದಾಗಲೆಲ್ಲ ಬಿಜೆಪಿ ಹೈಕಮಾಂಡ್ ಬಹುವಾಗಿ ನೆಚ್ಚಿಕೊಳ್ಳುವುದು ಸಂಘ-ಪರಿವಾರದ ಹಿರಿಯರಾದ ಮುಕುಂದ್ ಅವರ ಅಭಿಪ್ರಾಯವನ್ನು. ಹೀಗಾಗಿ ರಾಜ್ಯ ಬಿಜೆಪಿ ವಲಯದಲ್ಲಿ ಮುಕುಂದ್ ಪ್ರಭಾವಿ ಸ್ಥಾನ ಹೊಂದಿದ್ದಾರೆ. ಅವರು ಶುಕ್ರವಾರ ಎರಡು ಬಾರಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಉಭಯ ಕುಶಲೋಪರಿ ಸಾಂಪ್ರತಕ್ಕಾಗಿ ಮುಕುಂದ್ ಜಿ ಯಾರನ್ನೂ ಭೇಟಿ ಮಾಡುವುದಿಲ್ಲ. ಹೀಗಾಗಿ ಶುಕ್ರವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಹಾಗೂ ರಾತ್ರಿ ಪ್ರಭಾವಿ ಸಚಿವರ ನಿವಾಸದಲ್ಲಿ ಸುದೀರ್ಘ ಚರ್ಚೆ ನಡೆಸಿರುವ ಕಾರಣವೇನು? ಎಂಬ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ:ಇಮ್ರಾನ್ ಖೇಡವಾಲಾ.. ಗುಜರಾತ್ ನ 182 ಶಾಸಕರಲ್ಲಿ ಇವರೊಬ್ಬರೇ ಮುಸ್ಲಿಂ ಶಾಸಕ

ಈ ಭೇಟಿಯ ಹಿಂದಿರುವ ಕಾರಣ ಇನ್ನೂ ಬಯಲಾಗಿಲ್ಲ. ಆದರೆ ಸಂಘಟನಾತ್ಮಕವಾಗಿ ಯಾವುದೋ ಮಹತ್ವದ ಬದಲಾವಣೆಯಾಗಲಿದೆ ಎಂಬ ಗುಸುಗುಸು ಈಗ ಬಿಜೆಪಿಯಲ್ಲಿ ಪ್ರಾರಂಭವಾಗಿದೆ. ಚುನಾವಣಾ ದೃಷ್ಟಿಯಿಂದಲೇ ಈ ಭೇಟಿ ನಡೆದಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎನ್ನಲಾಗುತ್ತಿದೆ.

ಇದೆಲ್ಲದರ ಮಧ್ಯೆ ಸಿಎಂ ಬಸವರಾಜ್ ಬೊಮ್ಮಾಯಿ ಡಿಸೆಂಬರ್ 14ರಂದು ದಿಲ್ಲಿಗೆ ತೆರಳುತ್ತಿದ್ದಾರೆ. ಮಹಾರಾಷ್ಟ್ರ ಜತೆಗಿನ ಗಡಿ ವಿವಾದ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರ ಜತೆಗೆ ಸಭೆ ನಡೆಯಲಿದೆ. ಆದರೆ ಮುಕುಂದ್ ಭೇಟಿಗೂ ಸಿಎಂ ದಿಲ್ಲಿ ಪ್ರವಾಸಕ್ಕೂ ಯಾವುದಾದರೂ ಸಂಬಂಧವಿದೆಯೇ? ಎಂಬುದು ಸದ್ಯಕ್ಕೆ ಕುತೂಹಲ ಉಳಿಸಿಕೊಂಡಿದೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.