ತೇಜಸ್ ಎಕ್ಸ್ಪ್ರೆಸ್ ರದ್ದು: ಖಾಸಗಿ ರೈಲುಗಳ ಸಂಚಾರಕ್ಕೆ ಹಿನ್ನಡೆ?
Team Udayavani, Nov 24, 2020, 7:00 AM IST
ಹೊಸದಿಲ್ಲಿ: ಭಾರತೀಯ ರೈಲ್ವೆ ಇಲಾಖೆ 109 ಮಾರ್ಗಗಳಲ್ಲಿ 151 ಖಾಸಗಿ ರೈಲುಗಳನ್ನು ಓಡಿಸಲು ಸಿದ್ಧತೆ ನಡೆಸುತ್ತಿದೆ. ಆದರೆ ಇಂಡಿಯನ್ ರೈಲ್ವೆ ಕೆಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಷನ್ ಮಾಲೀಕತ್ವದ ತೇಜಸ್ ಎಕ್ಸ್ಪ್ರೆಸ್ ಅನ್ನು ಜನರ ಕೊರತೆ ಹಿನ್ನೆಲೆಯಲ್ಲಿ ನ.24ರಿಂದ ಪ್ರಯಾಣ ರದ್ದುಗೊಳಿಸಲು ಚಿಂತನೆ ನಡೆಸಿದೆ. ತೇಜಸ್ ಎಕ್ಸ್ಪ್ರೆಸ್ ಖಾಸಗಿ ರೈಲುಗಳ ಮಾದರಿಯಲ್ಲೇ ಕಾರ್ಯನಿರ್ವಹಿಸುತ್ತಿದೆ. ಹೊಸದಿಲ್ಲಿ-ಲಕ್ನೋ ಮತ್ತು ಅಹಮದಾಬಾದ್-ಮುಂಬಯಿ ನಡುವಿನ ರೈಲು ಸಂಚಾರವನ್ನು ಕ್ರಮವಾಗಿ ನ.23 ಮತ್ತು ನ.24ರಿಂದ ರದ್ದುಗೊಳಿಸಲು ಐಆರ್ಸಿಟಿಸಿ ತೀರ್ಮಾನಿಸಿದೆ.
ಕೊರೊನಾ ಹಿನ್ನೆಲೆಯಲ್ಲಿ ಜನರ ಪ್ರಯಾಣ ಕಡಿಮೆಯಾಗಿದೆ. ಶೇ.70ರಷ್ಟು ಪ್ರಯಾಣಿಕರು ಇದ್ದರೆ ಮಾತ್ರ ಅದಕ್ಕೆ ಲಾಭವಾಗಿ ಪರಿಣಮಿಸುತ್ತದೆ. ಹೀಗಾಗಿ, ಖಾಸಗಿ ರೈಲುಗಳನ್ನು ಓಡಿಸಬೇಕು ಎಂಬ ರೈಲ್ವೆ ಇಲಾಖೆಯ ಯೋಜನೆಗೆ ಈ ಬೆಳವಣಿಗೆ ಹಿನ್ನಡೆ ಎಂಬ ಅಭಿಪ್ರಾಯ ಕೇಳಿಬಂದಿದೆ.
ಐಆರ್ಸಿಟಿಸಿ ಪ್ರತಿ ಟ್ರಿಪ್ಗೆ 15 ಲಕ್ಷ ಮತ್ತು ಲೀಸ್ ವೆಚ್ಚ ಭರಿಸಬೇಕು. ಆ ಮೊತ್ತ ಬರಬೇಕೆಂದರೆ ಶೇ.70ರಷ್ಟು ಪ್ರಯಾಣಿಕರು ಪ್ರಯಾಣಿಸಬೇಕು.
ಬೆಂಗಳೂರು, ಚೆನ್ನೈ, ಸಿಕಂದರಾಬಾದ್, ಜೈಪುರ ಸೇರಿದಂತೆ 109 ಮಾರ್ಗಗಳಲ್ಲಿ ಖಾಸಗಿ ಸಂಸ್ಥೆಗಳು ರೈಲು ಓಡಿಸಲು ಆಸಕ್ತಿ ವ್ಯಕ್ತಪಡಿಸಿವೆ ಮತ್ತು ಅದಕ್ಕೆ ಸಂಬಂಧಿಸಿದ ಸಂಸ್ಥೆಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯೂ ನಡೆದಿದೆ. ತೇಜಸ್ ಎಕ್ಸ್ಪ್ರೆಸ್ ರದ್ದು ತಾತ್ಕಾಲಿಕ ಹಿನ್ನಡೆ. ಅದು ದೂರಗಾಮಿ ಪರಿಣಾಮ ಬೀರದು ಎನ್ನುವುದು ಸಂಸ್ಥೆಯ ಅಧಿಕಾರಿಯೊಬ್ಬರ ಅಂಬೋಣ. 2023-24ರಿಂದ ಖಾಸಗಿ ರೈಲುಗಳು ಓಡುವ ಬಗ್ಗೆ ಯೋಚನೆ ಇದೆ. ಆ ವೇಳೆಗೆ ಪರಿಸ್ಥಿತಿ ಯಥಾ ಸ್ಥಿತಿಗೆ ಬರಲಿದೆ ಎನ್ನುವುದು ಕ್ರೈಸಿಲ್ನ ಸಾರಿಗೆ ವಿಭಾಗದ ತಜ್ಞ ಜಗನ್ನಾರಾಯಣನ್ ಪದ್ಮನಾಭನ್.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಕಾಂಗ್ರೇಸ್ ನೇತೃತ್ವದ 16 ಪ್ರತಿಪಕ್ಷಗಳ ಘೋಷಣೆ
ಹರಿಯಾಣದ 3 ಜಿಲ್ಲೆಗಳಲ್ಲಿ ಇಂಟರ್ನೆಟ್ ಬಂದ್; ರೈತರ ತೆರವಿಗೆ ಉಭಯ ಸರಕಾರಗಳ ಹರಸಾಹಸ
ಪ್ರತಿಭಟನೆ ಅಂತ್ಯಗೊಳಿಸಿ, ಕೂಡಲೇ ಸ್ಥಳ ಬಿಟ್ಟು ಹೊರಡಿ: ರೈತರಿಗೆ ಉತ್ತರ ಪ್ರದೇಶ ಸರ್ಕಾರ
ದೆಹಲಿ ಹಿಂಸಾಚಾರ: ರೈತ ಮುಖಂಡರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ದೀಪ್ ಸಿಧು ನಾಪತ್ತೆ?
ಅಪ್ರಾಪ್ತೆಯ ಕೈ ಹಿಡಿದು, ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
ಕೋಣದ ಜತೆ 9 ವರ್ಷದ ಬಾಲಕನ ಕಂಬಳ ಓಟ ಪ್ರಾಕ್ಟಿಸ್! ಕಂಬಳದಲ್ಲೇ ಸಾಧನೆ ಮಾಡಬೇಕೆಂಬ ಹಂಬಲವಂತೆ
ಫೆ. 1ರಿಂದ 9 ಮತ್ತು 11ನೇ ತರಗತಿಗಳೂ ಆರಂಭ : ಸಚಿವ ಸುರೇಶ್ ಕುಮಾರ್
ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಕಾಂಗ್ರೇಸ್ ನೇತೃತ್ವದ 16 ಪ್ರತಿಪಕ್ಷಗಳ ಘೋಷಣೆ
ಈ ವಿದ್ಯಾರ್ಥಿನಿ ಏಕ್ ದಿನ ಕಾ ಸಿಇಓ !
ಹರಿಯಾಣದ 3 ಜಿಲ್ಲೆಗಳಲ್ಲಿ ಇಂಟರ್ನೆಟ್ ಬಂದ್; ರೈತರ ತೆರವಿಗೆ ಉಭಯ ಸರಕಾರಗಳ ಹರಸಾಹಸ