ಈಶ್ವರಪ್ಪ, ಖೂಬಾ ಬಂಧನ ಏಕಿಲ್ಲ? : ಸದನದಲ್ಲಿ ಸಿದ್ದರಾಮಯ್ಯ ಆಕ್ರೋಶ
ಯೋಧ ಅಲ್ತಾಫ್ ಅಹ್ಮದ್ ಗೆ ಯಾಕೆ 25 ಲಕ್ಷ ಪರಿಹಾರ ನೀಡಿಲ್ಲ?
Team Udayavani, Mar 24, 2022, 5:44 PM IST
ವಿಧಾನಸಭೆ : ಹರ್ಷ ಕೊಲೆ ಸಂದರ್ಭದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದಾಗಲೂ ಶಿವಮೊಗ್ಗದಲ್ಲಿ ಶವ ಮೆರವಣಿಗೆ ನಡೆಸಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಏಕೆ ಬಂಧಿಸಿಲ್ಲ ? ಆಳಂದದಲ್ಲಿ ಮೆರವಣಿಗೆ ನಡೆಸಿದ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾನೂನು – ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ” ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇರುತ್ತದೆ ” ಎಂದು ಮುಖ್ಯಮಂತ್ರಿ ಗಳೇ ಹೇಳಿಕೆ ನೀಡಿದರೆ ಪೊಲೀಸರ ನೈತಿಕ ಸ್ಥೈರ್ಯ ಏನಾಗಬೇಡ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಹಿಂದೂ ಕಾರ್ಯಕರ್ತರ ಕೊಲೆಯಾದರೆ 25 ಲಕ್ಷ ಪರಿಹಾರ ನೀಡುತ್ತೀರಿ. ಆದರೆ ನರಗುಂದದ ಸಮೀರ್, ಬೆಳ್ತಂಗಡಿಯ ದಿನೇಶ್, ಹಿಮಪಾತದಲ್ಲಿ ಮೃತಪಟ್ಟ ಮಡಿಕೇರಿಯ ಯೋಧ ಅಲ್ತಾಫ್ ಅಹ್ಮದ್ ಅವರಿಗೆ ಸರಕಾರ 25 ಲಕ್ಷ ಪರಿಹಾರ ನೀಡಿಲ್ಲ. ಸತ್ತವರು ಯಾರು ಎಂಬುದಕ್ಕಿಂತ ಕೊಂದವರು ಯಾರು ? ಎಂಬುದರ ಮೇಲೆ ಸರಕಾರದ ಪರಿಹಾರ ನೀತಿ ನಿರ್ಧಾರವಾಗುತ್ತದೆ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಹರ್ಷ ಕೊಲೆಯಾದಾಗ ಈಶ್ವರಪ್ಪ ನವರೇ ಶಿವಮೊಗ್ಗದಲ್ಲಿ ಮೆರವಣಿಗೆ ನಡೆಸಿದರು. ಸಚಿವರಾಗಿ ಈ ರೀತಿ ಮಾಡುವುದು ಎಷ್ಟು ಸರಿ ? ಈ ಬಗ್ಗೆ ನಾನೇ ಡಿಜಿಪಿಗೆ ಕರೆ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದೆ. ಕಾನೂನು ಸುವ್ಯವಸ್ಥೆ ಕಾಪಾಡಲಾಗದ ನೀವು ಅಧಿಕಾರದಲ್ಲಿ ಮುಂದುವರಿಯಬೇಕೋ ಬೇಡವೋ ಎಂಬುದನ್ನು ನಿರ್ಧರಿಸಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ