ಸೂರ್ಯ ನಮಸ್ಕಾರ ಹೇರಿಕೆ ಯಾಕೆ, ಹಿಂದುಗಳು ಈದ್ ಆಚರಣೆಯಲ್ಲಿ ಪಾಲ್ಗೊಳ್ತಾರಾ? ಒಮರ್ ಅಬ್ದುಲ್ಲಾ
ರಂಜಾನ್ ವೇಳೆ ಪ್ರತಿಯೊಬ್ಬರು ಉಪವಾಸ ಕೈಗೊಳ್ಳಬೇಕು ಎಂದು ಆದೇಶ ಹೊರಡಿಸಿದರೆ...
Team Udayavani, Jan 14, 2022, 11:57 AM IST
ನವದೆಹಲಿ: ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಕೇಂದ್ರದ ಆಯುಷ್ ಸಚಿವಾಲಯದ ಆದೇಶದಂತೆ ಕಾಲೇಜುಗಳಲ್ಲಿ ಬೃಹತ್ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸುವಂತೆ ಹೊರಡಿಸಿರುವ ಆದೇಶಕ್ಕೆ ಜಮ್ಮು-ಕಾಶ್ಮೀರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಂಕಾದ ಸಿನಿ ಸಂಕ್ರಾಂತಿ: ಮುಹೂರ್ತ, ಸಿನ್ಮಾ ರಿಲೀಸ್ ಮಾಡಲು ಉತ್ಸಾಹವಿಲ್ಲ…
ಜಮ್ಮು-ಕಾಶ್ಮೀರದ ಉನ್ನತ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ, ಜನವರಿ 14ರ ಪವಿತ್ರ ಮಕರ ಸಂಕ್ರಾಂತಿಯಂದು ಭಾರತ ಸರ್ಕಾರ ನಿರ್ದೇಶಿಸಿದಂತೆ ಬೃಹತ್ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸಲು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸೂರ್ಯ ನಮಸ್ಕಾರ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿತ್ತು.
ಈ ಕುರಿತು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ನ ಮುಖಂಡ ಒಮರ್ ಅಬ್ದುಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದು, ಸೂರ್ಯ ನಮಸ್ಕಾರ, ಯೋಗ ಮಾಡುವಂತೆ ಮುಸ್ಲಿಮ್ ವಿದ್ಯಾರ್ಥಿಗಳನ್ನು ಯಾಕೆ ಬಲವಂತ ಪಡಿಸುತ್ತೀರಿ? ಮಕರ ಸಂಕ್ರಾಂತಿ ಒಂದು ಹಬ್ಬವಾಗಿದೆ, ಇದನ್ನು ಆಚರಿಸುವವರು ಆಚರಿಸಬಹುದು, ಇದೊಂದು ವೈಯಕ್ತಿಕ ಆಯ್ಕೆಯಲ್ಲ. ಒಂದು ವೇಳೆ ಇದನ್ನೇ ಮುಸ್ಲಿಮೇತರ ವಿದ್ಯಾರ್ಥಿಗಳು ಈದ್ ಆಚರಿಸುವಂತೆ ಹೇಳಿದರೆ ಬಿಜೆಪಿ ಒಪ್ಪುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಒಂದು ವೇಳೆ ಮುಸ್ಲಿಂ ಮುಖ್ಯಮಂತ್ರಿ, ರಂಜಾನ್ ವೇಳೆ ಪ್ರತಿಯೊಬ್ಬರು ಉಪವಾಸ ಕೈಗೊಳ್ಳಬೇಕು ಎಂದು ಆದೇಶ ಹೊರಡಿಸಿದರೆ, ಆಗ ಇತರ ಸಮುದಾಯದ ವಿದ್ಯಾರ್ಥಿಗಳು ಹೇಗೆ ಪ್ರತಿಕ್ರಿಯಿಸಬಹುದು. ಇಂತಹ ಧಾರ್ಮಿಕ ಸಂಪ್ರದಾಯದ ಆಚರಣೆಯನ್ನು ಹೇರುವುದನ್ನು ನಿಲ್ಲಿಸಿ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವ ಹಕ್ಕು ನಿಮಗಿಲ್ಲ ಎಂದು ಟ್ವೀಟ್ ನಲ್ಲಿ ಒಮರ್ ತಿರುಗೇಟು ನೀಡಿದ್ದಾರೆ.
ಕೇಂದ್ರ ಸರ್ಕಾರದ ಸೂರ್ಯ ನಮಸ್ಕಾರ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಮೆಹಬೂಬ್ ಮುಫ್ತಿ, ಸಜಾದ್ ಲೋನ್ ಸೇರಿದಂತೆ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್