ಹೆಣ್ಣುಮಕ್ಕಳ ಮುಖ ನೋಡುವ ಆಸೆ ಯಾಕೆ?: ಹಿಜಾಬ್ ವಿವಾದದ ಕುರಿತು ಸಿ.ಎಂ.ಇಬ್ರಾಹಿಂ
ವಿವಾದಗಳನ್ನು ಸೃಷ್ಟಿ ಮಾಡುವಲ್ಲಿ ಬಿಜೆಪಿ ಸರಕಾರ ಮುಂಚೂಣಿಯಲ್ಲಿ
Team Udayavani, Feb 5, 2022, 12:33 PM IST
ಬೆಂಗಳೂರು : ರಾಜ್ಯ ಸರ್ಕಾರ ವಿವಾದಗಳನ್ನು ಸೃಷ್ಟಿ ಮಾಡುವಲ್ಲಿ ಮುಂಚೂಣಿಯಲ್ಲಿದ್ದು, ಯಾವುದೇ ವಿವಾದದಲ್ಲಿ ಯಶಸ್ಸು ಸಿಗುತ್ತಿಲ್ಲ, ಹಾಗಾಗಿ ಈಗ ಹಿಜಾಬ್ ವಿವಾದ ಶುರು ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.
ಹಿಜಾಬ್ ಬಹಳ ವರ್ಷದಿಂದ ನಡೆದುಕೊಂಡು ಬಂದಿದೆ. ಮೈಸೂರು ಮಹಾರಾಜ ಕಾಲದಿಂದಲೂ ಜಾರಿಯಲ್ಲಿದೆ.ಹೆಣ್ಣುಮಕ್ಕಳು ತೆರಳುವ ಚಕ್ಕಡಿ ಗಾಡಿಗೂ ಪರದೆ ಹಾಕಿರುವ ಇತಿಹಾಸ ಇದೆ. ಇದು ಕೋವಿಡ್ ಸಮಯದಲ್ಲಿ ಹಾಕಿಕೊಳ್ಳುವಂತೆ ಆಗಿದ್ದು, ನಾನು ಹಾಕೊಂಡಿದ್ದೇನೆ,
ಸಿಎಂ ಬೊಮ್ಮಾಯಿ ಕೂಡ ಹಿಜಾಬ್ ಹಾಕಿಕೊಂಡಿದ್ದಾರೆ. ಆ ಪ್ರಿನ್ಸಿಪಲ್ ಪಾಠ ಮಾಡುವವನು, ಅವರಿಗೆ ಬುದ್ದಿ ಇದೆಯಾ ಎಂದು ಪ್ರಶ್ನಿಸಿದರು.
ಈ ಹಿಂದೆ ಪೋಲಿಸರಿಗೂ ಸಮವಸ್ತ್ರ ಹಾಕಿಸಿ ಬಿಟ್ಟರು, ಎಲ್ಲಿಗೆ ತೆಗೆದುಕೊಂಡು ಹೋಗುತ್ತಾ ಇದ್ದೀರಿ, ಅಧಿಕಾರಿಗಳಿಗೆ ಹೇಳುತ್ತಾ ಇದ್ದೇನೆ,
ಹುಷಾರ್,ಬಿಜೆಪಿ ಇದೇ ಕೊನೆ ಬಾರಿ ಗಾಳಿ ಬದಲಾಗುತ್ತಾ ಇದೆ. ಅವರ ಮುಖ ನೋಡೋಕೆ ನೀವೇಕೆ ಕಾಲೇಜ್ ಗೆ ಹೋಗೋದು ವಿದ್ಯೆ ಕಲಿಯೋಕೋ ಬ್ಯೂಟಿ ನೋಡೋಕೋ ಎಂದು ಪ್ರಶ್ನಿಸಿದರು.
ಅನೇಕರು ಹಿಜಾಬ್ ಹಾಕೊಲ್ಲ, ಅವರಿಗೆ ನಾವು ಒತ್ತಡ ಹಾಕಿದ್ದೇವಾ? ಹೀಗಾಗಿ ನಾನು ಸರ್ಕಾರ ಶೀಘ್ರವಾಗಿ ನಿರ್ಧಾರ ಮಾಡಬೇಕು. ಇದನ್ನ ಕೂಡಲೇ ಕಮಿಷನರ್ ಹೈಕೋರ್ಟ್ ಆದೇಶ ಬರುವವರೆಗೂ ಸೂಕ್ತ ಕ್ರಮ ಕೈಗೊಳ್ಳ ಬೇಕು. ದೇಶದ ಮರ್ಯಾದೇ ಎಲ್ಲಿಗೆ ಹೋಗುತ್ತಾ ಇದೆ ಎಂದರು.
ಉತ್ತರಕರ್ನಾಟಕದಲ್ಲಿ ಹೆಂಗಸರು ತಲೆ ಮೇಲೆ ಸೆರಗು ಹಾಕ್ತಾರೆ.ಮಾರ್ವಾಡಿಗಳ ಹೆಣ್ಮಕ್ಕಳು ಸೆರಗು ಹಾಕ್ತಾರೆ. ಕೋರ್ಟ್ ಕೇಸ್ ತೀರ್ಪು ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕಿತ್ತು ಆದರೆ ಸರ್ಕಾರ ಹಾಗೆ ಮಾಡಿಲ್ಲ. ಸರ್ಕಾರ ಹಿಜಾಬ್ ವಿವಾದ ಆಗಲು ಬಿಡಬಾರದು ಎಂದರು.
ಶಿಕ್ಷಣ ಸಚಿವರು ಮತ್ತು ಸಿಎಂ ಅವರಿಗೆ ಮನವಿ ಮಾಡ್ತೇನೆ.ಸಮಸ್ಯೆ ಬಗೆಹರಿಸಬೇಕು. ಕೋರ್ಟ್ ಆದೇಶ ಬರುವ ತನಕ ಯಥಾಸ್ಥಿತಿ ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು