ಉದಯಪುರ ಆಯ್ತು, ಪ್ರವಾದಿ ಬಗ್ಗೆ ಹೇಳಿಕೆ ನೀಡಿ ಕೊಲೆಯಾಗಿದ್ದ ತಿವಾರಿ ಪತ್ನಿಗೆ ಬೆದರಿಕೆ ಪತ್ರ
ನಮ್ಮ ಮುಂದಿನ ಗುರಿ ನೀವೇ… ಎಂದು ಉರ್ದುವಿನಲ್ಲಿ ಬರೆಯಲಾಗಿದೆ ಎಂದು ವರದಿ ವಿವರಿಸಿದೆ.
Team Udayavani, Jul 2, 2022, 4:05 PM IST
ನವದೆಹಲಿ: ಉದಯಪುರದಲ್ಲಿ ಹಾಡಹಗಲೇ ಟೈಲರ್ ಶಿರಚ್ಛೇದನ ಘಟನೆ ನಡೆದ ನಂತರ ಹತ್ಯೆಗೀಡಾಗಿದ್ದ ಹಿಂದೂ ಸಮಾಜ್ ಪಕ್ಷದ ಮುಖ್ಯಸ್ಥ ಕಮಲೇಶ್ ತಿವಾರಿ ಪತ್ನಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಸಾಗರ : ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ : ಪೇಪರ್ ವಿತರಣೆಗೆ ಹೋಗಿದ್ದ ಯುವಕ ಸ್ಥಳದಲ್ಲೇ ಸಾವು
ಜೂನ್ 22ರಂದು ತಮ್ಮ ಲಕ್ನೋ ಮನೆಯಲ್ಲಿ ಬಿಳಿ ಬಣ್ಣದ ಲಕೋಟೆಯನ್ನು ಪಡೆದಿದ್ದು, ಇದರಲ್ಲಿ ಉರ್ದು ಭಾಷೆಯಲ್ಲಿ ಬರೆಯಲಾಗಿದೆ ಎಂದು ಕಮಲೇಶ್ ತಿವಾರಿ ಪತ್ನಿ ಕಿರಣ್ ತಿವಾರಿ ತಿಳಿಸಿದ್ದಾರೆ. ಬೆದರಿಕೆ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಜನರ ಕಪ್ಪು-ಬಿಳುಪಿನ ಫೋಟೋಗಳು ಇದ್ದು, ನಮ್ಮ ಮುಂದಿನ ಗುರಿ ನೀವೇ… ಎಂದು ಉರ್ದುವಿನಲ್ಲಿ ಬರೆಯಲಾಗಿದೆ ಎಂದು ವರದಿ ವಿವರಿಸಿದೆ.
ಈ ಬಗ್ಗೆ ತಮಗೆ ದೂರು ಬಂದಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲಪಂಥೀಯ ಹಿಂದೂ ಸಮಾಜ್ ಪಕ್ಷದ ಅಧ್ಯಕ್ಷ ಕಮಲೇಶ್ ತಿವಾರಿ ಅವರನ್ನು 2018ರ ಅಕ್ಟೋಬರ್ 18ರಂದು ಲಕ್ನೋದಲ್ಲಿ ಗಂಟಲು ಸೀಳಿ ಹತ್ಯೆಗೈಯಲಾಗಿತ್ತು. ಉತ್ತರಪ್ರದೇಶದ ಲಕ್ನೋದಲ್ಲಿ ತಿವಾರಿ ಕಚೇರಿಯಲ್ಲಿದ್ದಾಗ ಈ ಘಟನೆ ನಡೆದಿತ್ತು.
2015ರ ಡಿಸೆಂಬರ್ ನಲ್ಲಿ ಕಮಲೇಶ್ ತಿವಾರಿ, ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ವಿವಾದಕ್ಕೀಡಾಗಿದ್ದರು. ಇದರಿಂದಾಗಿ ದೇಶದ ಹಲವೆಡೆ ಪ್ರತಿಭಟನೆ ನಡೆದಿದ್ದು, ತಿವಾರಿ ಶಿರಚ್ಛೇದನ ಮಾಡುವಂತೆ ಕೆಲವು ಸಂಘಟನೆಗಳು ಕರೆ ನೀಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ