ಬಾಂಜಾರು ಮಲೆಯಲ್ಲಿ ಮತಗಟ್ಟೆ ವೀಕ್ಷಣೆಗೆ ತೆರಳಿದ ಅಧಿಕಾರಿಗಳಿಗೆ ಎದುರಾದ ಒಂಟಿ ಸಲಗ
Team Udayavani, Dec 12, 2020, 10:49 AM IST
ಬೆಳ್ತಂಗಡಿ: ಗ್ರಾ.ಪಂ. ಚುನಾವಣೆ ರಂಗೇರುತ್ತಿರುವ ಮಧ್ಯೆ ಚುನಾವಣಾ ಅಧಿಕಾರಿಗಳಿಗೆ ಗ್ರಾಮೀಣ ಪ್ರದೇಶದ ಮತಗಟ್ಟೆ ಭೇಟಿಯು ಸವಾಲಾಗಿದೆ.
ಇದೇ ರೀತಿ ಕಳೆದೆರಡು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆ ಪ್ರದೇಶದ ಚುನಾವಣೆಯ ಮತಗಟ್ಟೆ ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ಒಂಟಿ ಸಲಗ ಪ್ರತ್ಯಕ್ಷವಾಗಿ ಭಯಬೀತಿ ಉಂಟುಮಾಡಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕು ಕೇಂದ್ರದಿಂದ 35 ಕಿಮೀ ದೂರದಲ್ಲಿರುವ ಬಾಂಜಾರುಮಲೆ ಪ್ರದೇಶ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ, ಚಾರ್ಮಾಡಿ ಘಾಟಿಯ 9ನೇ ತಿರುವಿನಿಂದ
ಸುಮಾರು 15 ಕಿ.ಮೀ. ಒಳ ಭಾಗದಲ್ಲಿದೆ.
ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಮಂಗಳೂರು ಬಸ್ ಸಂಚಾರದಲ್ಲಿ ವ್ಯತ್ಯಯ
ಕಾಡಿನಿಂದ ಆವೃತ್ತವಾಗಿರುವ ಈ ಪ್ರದೇಶದಲ್ಲಿ ಸುಮಾರು 45 ಮನೆಗಳ 260ರಷ್ಟು ಮತದಾರರಿಗೆ ಬಾಂಜಾರುಮಲೆ ಸಮುದಾಯಭವನದಲ್ಲಿ ಮತಗಟ್ಟೆ ಸಂಖ್ಯೆ 86ರಲ್ಲಿ ಅವಕಾಶಮಾಡಿಕೊಡಲಾಗುತ್ತದೆ.
ಇದರ ಪರಿಶೀಲನೆಗಾಗಿ ಚುನಾವಣಾಧಿಕಾರಿ ರಘು, ಸಹಾಯಕ ಚುನಾವಣಾಧಿಕಾರಿ ಅಜಿತ್, ನೆರಿಯ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹಾಗೂ ಸಿಬಂದಿಗಳು ಬಾಡಿಗೆ ವಾಹನ ಮೂಲಕ ತೆರಳಿದ್ದರು.
ಮಧ್ಯಾಹ್ನ 1.35 ಕ್ಕೆ ಹೊರಟು ವಾಪಾಸಾಗುತ್ತಿದ್ದಾಗ, ಏನೆಪೋಯ ವಿದ್ಯುತ್ ಘಟಕದ ಡ್ಯಾಂ ಬಳಿ ಒಂಟಿ ಸಲಗ ಎದುರಾಗಿದೆ.
ಒಂಟಿ ಸಲಗ ಕಂಡು ಸಮೀಪದ ಕಿರು ರಸ್ತೆಯಲ್ಲಿ ಚಾಲಕ ವಾಹನನ್ನು ತಿರುವು ಹಾಕಿದ್ದರು. ಸುಮಾರು 2.15ರಿಂದ 3.15 ರವರೆಗೆ ಆನೆ ಹಾದು ಹೋಗುವವರೆಗೆ ಸ್ಥಳದಲ್ಲೇ ಅಧಿಕಾರಿಗಳು ಉಳಿಯುವಂತಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಪಿಡಿಒ ಗಾಯತ್ರಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!