ಸುಳ್ಯ ತಾಲೂಕಿನಲ್ಲಿ ಕೃಷಿಗೆ ನಿರಂತರ ಆನೆ ದಾಳಿ : ತಡೆಗೆ ಶಾಶ್ವತ ಯೋಜನೆ ಎಂದು?


Team Udayavani, Mar 8, 2021, 5:45 AM IST

ಸುಳ್ಯ ತಾಲೂಕಿನಲ್ಲಿ ಕೃಷಿಗೆ ನಿರಂತರ ಆನೆ ದಾಳಿ : ತಡೆಗೆ ಶಾಶ್ವತ ಯೋಜನೆ ಎಂದು?

ಅರಂತೋಡು: ಸುಳ್ಯ ತಾಲೂಕಿನ ಹೆಚ್ಚಿನ ಗಡಿ ಭಾಗಗಳು ಅರಣ್ಯದಂಚಿನ ಪ್ರದೇಶದಲ್ಲಿ ಇದ್ದು ಈ ಭಾಗದ ತೋಟಗಳಿಗೆ ಆಗಾಗ ಆನೆ ದಾಳಿ ನಡೆಸುತ್ತಿದ್ದು, ಕೃಷಿಕರು ಹೈರಾಣಾಗಿದ್ದಾರೆ.

ಸುಮಾರು 40 ವರ್ಷಗಳಿಂದ ಆನೆ ದಾಳಿಗಳನ್ನು ತಡೆಗಟ್ಟಲು ತಾಲೂಕಿನ ಕೆಲವಡೆ ಆನೆಕಂದಕಗಳನ್ನು ತೋಡಿದ್ದರೂ ಅವುಗಳನ್ನು ಲೆಕ್ಕಿಸದೆ ಕಾಡಾನೆಗಳು ತೋಟ ಗಳಿಗೆ ನುಗ್ಗುತ್ತಿವೆ. ಸಂಪಾಜೆ ಗ್ರಾಮದ ಬಯ್ಲೆ ಕುಯಿಂತೋಡು, ಕೈಪಡ್ಕ,ನೆಲ್ಲಿಕುಮೇರಿ, ಸಂಪಾಜೆ ಬಯಲು, ತೊಡಿಕಾನ ಗ್ರಾಮದ ಬಾಳಕಜೆ, ಪಟ್ಟಿ, ಪೆತ್ತಾಜೆ, ಶೆಟ್ಟಿಯಡ್ಕ, ಅರಂತೋಡು ಗ್ರಾಮದ ಜೋಡಿಪಣೆ, ಚುಕ್ರಡ್ಕ ಹಾಗೂ ಮಂಡೆಕೋಲು, ಆಲೆಟ್ಟಿ, ಅಜ್ಜಾವರ, ಪುಳಿಕುಕ್ಕು, ಹರಿಹರ, ಕೊಲ್ಲಮೊಗ್ರ, ಬಾಳುಗೋಡು ಭಾಗಗಳ ಕೃಷಿ ತೋಟಗಳು ಪದೇ ಪದೆ ಕಾಡಾನೆ ದಾಳಿಗೆ ತುತ್ತಾಗುತ್ತಿವೆ.

ನಷ್ಟವಾಗುತ್ತಿರುವ ಕೃಷಿ
ಈ ಪ್ರದೇಶದಲ್ಲಿ ರಬ್ಬರ್‌, ಅಡಿಕೆ, ತೆಂಗು, ಕೊಕ್ಕೊ, ಬಾಳೆ, ಗೇರು, ಕಾಳುಮೆಣಸು ಹೆಚ್ಚಾಗಿ ಬೆಳೆಯುತ್ತಿದ್ದು ಇವುಗಳು ಆನೆ ದಾಳಿಗೆ ನಲುಗುತ್ತಿವೆ. ಸಂಪಾಜೆ ಗ್ರಾಮದ ಕುಯಿಂತೋಡು ಕೆ.ಪಿ. ಜಗದೀಶ ಅವರ ತೋಟಕ್ಕೆ 40 ವರ್ಷಗಳಿಂದ ಆನೆಗಳು ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.

ಆಗಾಗ ದಾಳಿ
ಕಾಡಾನೆಗಳು ತೋಟಕ್ಕೆ ಬಂದು ಒಮ್ಮೆ ಸ್ವಲ್ಪ ಬೆಳೆಗಳನ್ನು ನಾಶ ಮಾಡಿಹೋದರೆ ಮತ್ತೆ ಕೆಲವು ದಿನಗಳ ಬಳಿಕ ಮತ್ತೆ ಅಲ್ಲಿಗೇ ದಾಳಿ ಮಾಡುತ್ತವೆ. ಅಲ್ಪ ಸ್ವಲ್ಪ ಹಾನಿಯಾದರೆ ರೈತರು ಕೃಷಿ ಇಲಾಖೆಗೆ ಅರ್ಜಿ ಕೊಡಲು ಮನಸ್ಸು ಮಾಡುವುದಿಲ್ಲ. ಅರ್ಜಿ ಕೊಟ್ಟರೂ ಸಿಗುವ ಪರಿಹಾರ ತುಂಬಾ ಕಡಿಮೆ. ಅದಕ್ಕಾಗಿ ಹಲವು ಬಾರಿ ಕಚೇರಿಗೆ ಅಲೆಯಬೇಕಾಗುತ್ತದೆ. ಸಿಗುವ ಪರಿಹಾರಕ್ಕಿಂತ ಆಗುವ ಖರ್ಚೆ ಜಾಸ್ತಿ. ಇದರಿಂದ ಕಾಡಿನಂಚಿನ ಕೃಷಿಕರ ಜೀವನ ಕಷ್ಟದಲ್ಲಿ ಸಾಗುತ್ತಿದೆ.

ಪರಿಹಾರ ರೈತರ ಖಾತೆಗೆ
ಕೆಲ ವೊಂದು ಕಡೆ ಆನೆಕಂದಕಗಳು ಮಳೆಯಿಂದ ಹಾನಿಯಾದ ಪರಿಣಾಮ ಸಮರ್ಪಕವಾಗಿ ಕಾರ್ಯ ನಿರ್ವಹಿ ಸುತ್ತಿಲ್ಲ. ಈ ಕಂದಕಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಸಚಿವರ ಸಭೆಯಲ್ಲಿ ಚರ್ಚಿಸಿ ಸರಕಾರಕ್ಕೆ ಬರೆಯ ಲಾಗಿದೆ. ಆನೆದಾಳಿಗಳಿಂದ ನಷ್ಟವಾದ ಕೃಷಿಕರಿಗೆ ಸರಕಾರ ನಿಗದಿ ಪಡಿಸಿದ ರೀತಿ ಯಲ್ಲಿ ಪರಿಹಾರವನ್ನು ಖಾತೆಗೆ ಜಮೆ ಮಾಡಲಾಗುತ್ತಿದೆ. -ಗಿರೀಶ್‌, ವಲಯ ಅರಣ್ಯಾಧಿಕಾರಿ, ಸುಳ್ಯ.

ಯೋಜನೆ ಅಗತ್ಯ
40 ವರ್ಷಗಳಿಂದ ಕಾಡಾನೆಗಳು ನಮ್ಮ ತೋಟಕ್ಕೆ ದಾಳಿ ಮಾಡುತ್ತಿವೆ. ಇಲಾಖೆ ವತಿಯಿಂದ ನಿರ್ಮಿಸಿದ ಆನೆ ಕಂದಕಗಳು ಅವೈಜ್ಞಾನಿ ಕವಾಗಿದ್ದು ಇವನ್ನು ದಾಟಿಕೊಂಡೆ ಕಾಡಾನೆಗಳು ನುಗ್ಗುತ್ತಿವೆ. ಸೈರನ್‌ ಕೂಡ ಕೆಲಸ ಮಾಡುತ್ತಿಲ್ಲ. ಆನೆ ದಾಳಿಯಿಂದ ಉಂಟಾದ ನಷ್ಟಕ್ಕೆ ಸಿಗುವ ಪರಿಹಾರ ತುಂಬಾ ಕಡಿಮೆ . ಅಷ್ಟು ಸಿಗಬೇಕಾದರೆ ಅದರ ಹಿಂದೆಯೇ ಅಲೆಯಬೇಕು. ಆಗ ಹಾನಿ ಖರ್ಚಿಗಿಂತ ಅಲೆದಾಟದ ಖರ್ಚೇ ಜಾಸ್ತಿ ಆಗುತ್ತಿದೆ. ಹೀಗಾಗಿ ಕಾಡಾನೆಗಳ ಕಾಟ ತಡೆಯಲು ಶಾಶ್ವತ ಯೋಜನೆ ರೂಪಿಸಬೇಕು.
-ಕೆ.ಪಿ. ಜಗದೀಶ, ಕೃಷಿಕರು, ಕುಯಿಂತೋಡು.

ಆಟಕ್ಕುಂಟು ಲೆಕ್ಕಕ್ಕಿಲ್ಲದ ಆನೆಕಂದಕಗಳು
ಅನೇಕ ಕಡೆ ಆ®ಗಳು ಬರುವ ದಾರಿ ಯಲ್ಲಿ ಆನೆ ಕಂದಕ ಗಳನ್ನು ನಿರ್ಮಾಣ ಮಾಡ ಲಾಗಿದೆ. ಈ ಕಂದಕಗಳನ್ನೂ ದಾಟಿ ಆನೆಗಳು ನುಗ್ಗುತ್ತವೆ. ಈ ಕಂದಕಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸ ಲಾಗಿದೆ ಎಂದು ರೈತರು ದೂರುತ್ತಿ¨ªಾರೆ. ಹೀಗಾಗಿ ತಾಲೂಕಿನ ಅರಣ್ಯದಂಚಿನ ಪ್ರದೇಶದ ರೈತರ ಸಂಕಷ್ಟ ನಿವಾರಣೆಗೆ ಸರಕಾರ ಶಾಶ್ವತ ಯೋಜನೆ ರೂಪಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

– ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.