ನಿವೃತ್ತ ಸೇನಾಧಿಕಾರಿ ಮೇಲೆ ಕಾಡಾನೆ ದಾಳಿ : ಕರ್ನಲ್ ಮುತ್ತಣ್ಣ ಮೈಸೂರು ಆಸ್ಪತ್ರೆಗೆ ದಾಖಲು
Team Udayavani, Nov 4, 2020, 6:45 PM IST
ಮಡಿಕೇರಿ: ಕೊಡಗು ವೈಲ್ಡ್ ಲೈಫ್ ಸೊಸೈಟಿ ಅಧ್ಯಕ್ಷ, ಪರಿಸರವಾದಿ ನಿವೃತ್ತ ಕರ್ನಲ್ ಮುತ್ತಣ್ಣ ಅವರ ಮೇಲೆ ಕಾಡಾನೆಯೊಂದು ದಾಳಿ ಮಾಡಿದೆ. ಕಾಲು ಮುರಿತಕ್ಕೊಳಗಾಗಿರುವ ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗ್ಗೆ ಪಾಲಿಬೆಟ್ಟದಲ್ಲಿರುವ ತಮ್ಮ ತೋಟಕ್ಕೆ ಮುತ್ತಣ್ಣ ಅವರು ತೆರಳುತ್ತಿದ್ದಾಗ ಏಕಾಏಕಿ ಎದುರಿನಿಂದ ಬಂದ ಒಂಟಿ ಸಲಗ ದಾಳಿ ಮಾಡಿದೆ. ಈ ಸಂದರ್ಭ ಓಡುವಾಗ ಕೆಳಗೆ ಬಿದ್ದ ಮುತ್ತಣ್ಣ ಅವರ ಕಾಲು ಮುರಿತಕ್ಕೊಳಗಾಗಿದ್ದು, ತೋಟ ಕಾರ್ಮಿಕರು ಗೋಣಿಕೊಪ್ಪ ಆಸ್ಪತ್ರೆಗೆ ಕರೆದೊಯ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಲ್ ಮುತ್ತಣ್ಣ ಅವರು ಕೊಡಗಿನ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ವನ್ಯಜೀವಿಗಳ ಹಿತದೃಷ್ಟಿಯಿಂದ ಕೊಡಗಿಗೆ ರೈಲು ಮಾರ್ಗ, ಹೆದ್ದಾರಿ ವಿಸ್ತರಣೆ, ಚತುಷ್ಪಥ ರಸ್ತೆ ಮೊದಲಾದ ಪರಿಸರ ವಿರೋಧಿ ಕಾಮಗಾರಿಗಳ ವಿರುದ್ದ ನ್ಯಾಯಾಲಯದಲ್ಲಿ ಕಾನೂನಾತ್ಮಕ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ ಅವರ ಮೇಲೆಯೇ ಕಾಡಾನೆ ದಾಳಿ ಮಾಡಿರುವ ಪ್ರಕರಣ ನಡೆದಿದೆ.
ಇದನ್ನೂ ಓದಿ:Unlock 5.0: ಮಹಾರಾಷ್ಟ್ರದಲ್ಲಿ ನವೆಂಬರ್ 5ರಿಂದ ಸಿನಿಮಾ ಥಿಯೇಟರ್, ಈಜುಕೊಳ ಪುನರಾರಂಭ
ಪಾಲಿಬೆಟ್ಟ ಮತ್ತು ಸುತ್ತಲಿನ ಕಾಫಿ ತೋಟಗಳಲ್ಲಿ ಹಲವಾರು ವರ್ಷಗಳಿಂದ ಕಾಡಾನೆಗಳು ಮರಿಗಳ ಸಹಿತ ಠಿಕಾಣಿ ಹೂಡಿದ್ದು, ಸ್ಥಳೀಯರು ಆತಂಕದಲ್ಲೇ ದಿನದೂಡಬೇಕಾಗಿದೆ. ಮುತ್ತಣ್ಣ ಅವರಿಗೆ ಸಾಂತ್ವನ ಹೇಳಲು ಬಂದ ರೈತ ಸಂಘದ ಪ್ರಮುಖರು ಕಾಡಾನೆ ಹಾವಳಿ ವಿರುದ್ಧ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?