ಕೋವಿಡ್ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಬರೆದರೆ ತಪ್ಪೇನು? ಸುಪ್ರೀಂ ಚಾಟಿ
ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಖಡಕ್ ಸಂದೇಶ
Team Udayavani, Apr 30, 2021, 5:16 PM IST
ನವದೆಹಲಿ:ಒಂದು ವೇಳೆ ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕಳವಳ ಮತ್ತು ಅಸಮಾಧಾನ ಹೊರಹಾಕಿದಲ್ಲಿ ಅಂತಹವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ದೇಶಾದ್ಯಂತ ಕೋವಿಡ್ ಪರಿಸ್ಥಿತಿ ಕುರಿತ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಜಸ್ಟೀಸ್ ಡಿ.ವೈ.ಚಂದ್ರಚೂಡ್ ಶುಕ್ರವಾರ(ಏಪ್ರಿಲ್ 30) ತಿಳಿಸಿದ್ದಾರೆ.
ಇದನ್ನೂ ಓದಿ:ಕೋವಿಡ್ ಲಸಿಕೆ ಕೊರತೆ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮದವರ ವಿರುದ್ಧ ಗರಂ ಅದ ಸಿಎಂ!
ನಾನು ಗಂಭೀರವಾದ ವಿಷಯವನ್ನು ಎತ್ತುತ್ತಿದ್ದೇನೆ. ಯಾವುದೇ ರೀತಿಯ ಅಡೆತಡೆ ಇಲ್ಲದೆಯೇ ಮಾಹಿತಿ ಪ್ರಸಾರಕ್ಕೆ ಅವಕಾಶ ನೀಡಬೇಕು.ಒಂದು ವೇಳೆ ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದರೆ, ಅದು ಸರಿಯಲ್ಲ ಎಂದು ಹೇಳಲು ಯಾವ ಕಾರಣವೂ ಇಲ್ಲ. ಅಲ್ಲದೇ ಅಂತಹ ಮಾಹಿತಿ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಜಸ್ಟೀಸ್ ಚಂದ್ರಚೂಡ್ ಈ ಸಂದರ್ಭದಲ್ಲಿ ಕೇಂದ್ರಕ್ಕೆ ಸೂಚನೆ ನೀಡಿದ್ದಾರೆ.
ಒಂದು ವೇಳೆ ಆಕ್ಸಿಜನ್ ಅಥವಾ ಬೆಡ್ ಕೊರತೆ ಇದೆ ಎಂದು ಸಾಮಾಜಿಕ ಜಾಲತಾಣ ಅಥವಾ ಮಾಧ್ಯಮಗಳಲ್ಲಿ ವಿಷಯ ಹಂಚಿಕೊಂಡವರ ಮೇಲೆ ಕಿರುಕುಳ, ಕ್ರಮ ತೆಗೆದುಕೊಂಡರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಖಡಕ್ ಸಂದೇಶವನ್ನು ರವಾನಿಸಿರುವುದಾಗಿ ತಿಳಿಸಿದ್ದಾರೆ.
ಆಮ್ಲಜನಕ, ಹಾಸಿಗೆ ಕೊರತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಾಗ, ಇವರು ವದಂತಿ ಹಬ್ಬಿಸುತ್ತಿದ್ದಾರೆ ಎಂದು ಭಾವಿಸಬಾರದು ಎಂಬುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ