ಪುತ್ರ ರಕ್ಷಾ ರಾಮಯ್ಯಗೆ ಟಿಕೆಟ್ ಕೊಡುತ್ತೇನೆ: ಸೀತಾರಾಮ್ ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ


Team Udayavani, Jul 4, 2022, 1:33 PM IST

ಪುತ್ರ ರಕ್ಷಾ ರಾಮಯ್ಯಗೆ ಟಿಕೆಟ್ ಕೊಡುತ್ತೇನೆ: ಸೀತಾರಾಮ್ ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ

ಬೆಂಗಳೂರು: ಪಕ್ಷದ ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಮನವೊಲಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಾಗಿದ್ದಾರೆ. ಪುತ್ರ ರಕ್ಷಾ ರಾಮಯ್ಯಗೆ ಚಿಕ್ಕಬಳ್ಳಾಪುರದಿಂದ ಟಿಕೆಟ್ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬಲಿಜ ಸಮಾಜದ ಮುಖಂಡರ ಭೇಟಿಯ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಳೆದ ತಿಂಗಳು ಸೀತಾರಾಮ್ ಅಭಿಮಾನಿಗಳ ಸಭೆ ಮಾಡಿದ್ದರು.  ಯಾಕೆ ಸಭೆ ಮಾಡುತ್ತಿದ್ದೀರಿ, ತಪ್ಪು ಸಂದೇಶ ಹೋಗುತ್ತದೆ ಎಂದು ನಾನು ಹೇಳಿದ್ದೆ. ಅವರು ಎರಡು ಬಾರಿ ಪರಿಷತ್ ಸದಸ್ಯರಾಗಿದ್ದರು. ಈ ಬಾರಿ ಅವರಿಗೆ ಟಿಕೆಟ್ ಕೊಡಬೇಕಿತ್ತು, ಆದರೆ ಬಹಳ ಜಾತಿಗೆ ಬಲ ಇಲ್ಲ, ಅವರಿಗೂ ಟಿಕೆಟ್ ಕೊಡಬೇಕಾಗುತ್ತದೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟ ಪಕ್ಷ ಎಂದರು.

ನಾನು ಸಿಎಂ ಆದಾಗ ಸೀತಾರಾಮ್ ರನ್ನು ಮಂತ್ರಿ ಮಾಡಿದ್ದೆ. ವಿಧಾನ ಪರಿಷತ್ ನಲ್ಲಿ ಸಭಾ ನಾಯಕರು ಆಗಿದ್ದರು. 2018 ಮಲ್ಲೇಶ್ವರದಲ್ಲಿ ಟಿಕೆಟ್ ನೀಡಲಾಗಿತ್ತು, ಆದರೆ ಅವರು ನಿಲ್ಲುವುದಿಲ್ಲ ಎಂದು ಹೇಳಿಬಿಟ್ಟರು. ಹಾಗಾಗಿ ಬೇರೆಯವರಿಗೆ ಟಿಕೆಟ್ ಕೊಟ್ಟರು. ಎರಡು ಪರಿಷತ್ ಸ್ಥಾನ ನೀಡಲು ಪ್ರಯತ್ನ ಮಾಡಿದ್ದೆವು. ಈ ಬಾರಿ ಕೂಡ ಸಾಕಷ್ಟು ಪ್ರಯತ್ನ ಮಾಡಿದ್ದೆವು ಎಂದರು.

ತನಗೆ ಕಾಂಗ್ರೆಸ್ ಅವಮಾನ ಮಾಡಿದೆ ಎಂದು ಸೀತಾರಾಮ್ ತಲೆಯಲ್ಲಿದೆ. ಮತ್ತೆ ಮೊನ್ನೆ ಸೀತಾರಾಂ ಕರೆದು‌ ಮಾತನಾಡಿದ್ದೆ. ಯಾವುದೇ ಕಾರಣಕ್ಕೆ ಕಾಂಗ್ರೆಸ್ ಬಿಡಬೇಡ, ನಿನಗೆ ಎಂಎಲ್ ಎ, ಲೋಕಸಭಾ ಯಾವುದಾದರೂ ಟಿಕೆಟ್ ನೀಡೋಣ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ರಕ್ಷಾ ರಾಮಯ್ಯ ನಿಲ್ಲಿಸಲು ಹೇಳಿದ್ದೇನೆ. ಆದರೆ ಸೀತಾರಾಮ್ ಗೆ ಪರಿಷತ್ ಟಿಕೆಟ್ ಕೊಟ್ಟಿಲ್ಲವೆಂದು ಬೇಜಾರಿದೆ. ಸೀತಾರಾಮ್ ಪರ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಕಾಂಗ್ರೆಸ್ ನಲ್ಲಿ ಹಿರಿಯ ಸ್ಥಾನ ನಿನಗೆ ಇದೆ ಅಂದಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:ಸಿಂಗರ್ ಸಿಧು ಮೂಸೆವಾಲಾ ಹತ್ಯೆ ಮಾಡಿದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಅಂಕಿತ್ ಸಿರ್ಸಾ ಬಂಧನ

ಬಲಿಜ ಜನಾಂಗ ಕಾಂಗ್ರೆಸ್ ಜೊತೆ ಇದೆ. ಸೀತಾರಾಂ ನನ್ನ ಜೊತೆಗೆ ಇರುತ್ತೇನೆಂದು ಹೇಳಿದ್ದಾರೆ. ಆದರೆ ಮನಸಾರೆ ಮಾತುಗಳನ್ನು ಸೀತಾರಾಂ ಹೇಳಿಲ್ಲ. ಮುಂದೆ ನಿನ್ನ ಪರವಾಗಿ ಮಾತನಾಡಿ ಸ್ಥಾನ ಕೊಡಿಸುತ್ತೇನೆ ಎಂದಿದ್ದೇನೆ. ನಿಮ್ಮ ಜೊತೆ ಇರುತ್ತೇನೆ ಸರ್ ಎಂದು ಸೀತಾರಾಮ್ ಹೇಳಿದ್ದಾರೆ, ಆದರೆ ಕಾಂಗ್ರೆಸ್ ನಲ್ಲಿ ಇರುತ್ತೇನೆಂದು ಹೇಳುತ್ತಿಲ್ಲ ಎಂದು ಹೇಳಿದರು.

ಮುಂದೆ ರಕ್ಷಾ ರಾಮಯ್ಯಗೆ ಚಿಕ್ಕಬಳ್ಳಾಪುರ ಟಿಕೆಟ್ ನೀಡೋಣ. ನಾನೇ ಅದರ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಒಂದು ವೇಳೆ ಟಿಕೆಟ್ ಸಿಗದೆ ಹೋದರೆ ಸೀತಾರಾಂ ಗೆ ಪರಿಷತ್ ಸ್ಥಾನ ನೀಡೋಣ. ಸೀತಾರಾಮ್ ಕಾಂಗ್ರೆಸ್ ಬಿಟ್ಟರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆಂದು ಗೊತ್ತಿದೆ ಎಂದು ಸಿದ್ದರಾಮಯ್ಯ ಸಭೆಗೆ ಬಂದಿದ್ದ ಸೀತಾರಾಮ್ ಅಭಿಮಾನಿಗಳ ಸಮ್ಮುಖದಲ್ಲಿ ಹೇಳಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.