ಐಸಿಸ್ ಕೆ ದಾಳಿಗೆ ದೇಹಗಳು ಛಿದ್ರ, ಛಿದ್ರ…ಎಲ್ಲೇ ಅಡಗಿದ್ದರೂ ಉಗ್ರರನ್ನು ಬಿಡಲ್ಲ: ಬೈಡೆನ್
ಐಸಿಸ್ ಖೊರಾಸಸ್ ಉಗ್ರಗಾಮಿ ಸಂಘಟನೆ ವಿರುದ್ಧ ಬೈಡೆನ್ ವಾಗ್ದಾಳಿ ನಡೆಸಿದ್ದಾರೆ.
Team Udayavani, Aug 27, 2021, 10:36 AM IST
ಕಾಬೂಲ್/ವಾಷಿಂಗ್ಟನ್: ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿಂತಿದ್ದ ಸಾವಿರಾರು ಜನರು ಮತ್ತು ಅಮೆರಿಕ ಸೇನೆಯನ್ನು ಗುರಿಯಾಗಿರಿಸಿಕೊಂಡು ಐಸಿಸ್ ಖೊರಾಸಾಸ್ ಉಗ್ರರು ನಡೆಸಿದ್ದ ಎರಡು ಭೀಕರ ಆತ್ಮಾಹುತಿ ದಾಳಿಯಲ್ಲಿ ಅಮೆರಿಕ ಸೈನಿಕರು, ನಾಗರಿಕರು ಸೇರಿದಂತೆ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
“ನಮ್ಮ ವಿರುದ್ಧ ದಾಳಿ ಮಾಡಿ ಹತ್ಯೆಗೈದವರನ್ನು ಕ್ಷಮಿಸುವ ಹಾಗೂ ಬಿಟ್ಟು ಬಿಡುವ ಪ್ರಶ್ನೆಯೇ ಇಲ್ಲ. ನೀವು (ತಾಲಿಬಾನ್, ಐಸಿಸ್ ಉಗ್ರರು) ಎಲ್ಲೇ ಅಡಗಿದ್ದರೂ ಹುಟ್ಟಡಗಿಸದೇ ಬಿಡಲ್ಲ ಎಂದು “ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶಪಥಗೈದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಐಸಿಸ್ ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಅಮೆರಿಕದ 13 ಸೈನಿಕರು ಹಾಗೂ 70 ಮಂದಿ ನಾಗರಿಕರು ಸಾವನ್ನಪ್ಪಿದ್ದು, ಮಕ್ಕಳು, ಮಹಿಳೆಯರ ದೇಹಗಳೆಲ್ಲಾ ಛಿದ್ರ, ಛಿದ್ರವಾಗಿ ಹೋಗಿರುವ ಭೀಕರ ಘಟನೆ ಗುರುವಾರ ಸಂಜೆ ನಡೆದಿತ್ತು.
ಈ ಭೀಕರ ದಾಳಿಯ ನಂತರ ಮಾತನಾಡಿದ ಬೈಡೆನ್, ಐಸಿಸ್ ಖೊರಾಸಸ್ ಉಗ್ರಗಾಮಿ ಸಂಘಟನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಫ್ಘಾನಿಸ್ತಾನದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರಿಯಲಿದೆ ಎಂದು ತಿಳಿಸಿರುವ ಬೈಡೆನ್, ಆಗಸ್ಟ್ 31ರೊಳಗೆ ಕಾಬೂಲ್ ವಿಮಾನ ನಿಲ್ದಾಣದಿಂದ ಸಂಪೂರ್ಣವಾಗಿ ಅಮೆರಿಕ ಸೇನೆಯನ್ನು ಹಿಂಪಡೆಯಬೇಕು ಎಂದು ತಾಲಿಬಾನ್ ನೀಡಿರುವ ಅಂತಿಮ ಗಡುವಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿ ವಿವರಿಸಿದೆ.
ಕಾಬೂಲ್ ನಲ್ಲಿ ಇನ್ನೂ ಒಂದು ಸಾವಿರಕ್ಕೂ ಅಧಿಕ ಅಮೆರಿಕನ್ ಪ್ರಜೆಗಳು ಇದ್ದು, ಅವರನ್ನು ಸ್ಥಳಾಂತರ ಮಾಡಬೇಕಾಗಿದೆ. ನಮ್ಮ ಸೈನಿಕರ ಮೇಲೆ ದಾಳಿ ಮಾಡಿರುವ ಐಸಿಸ್ ಖೊರಾಸಸ್ ಮೇಲೆ ದಾಳಿ ನಡೆಸಿ ಅವರ ನೆಲೆಗಳನ್ನು ಧ್ವಂಸಗೊಳಿಸುವಂತೆ ಅಮೆರಿಕ ಕಮಾಂಡರ್ ಗಳಿಗೆ ಸೂಚನೆ ನೀಡಿರುವುದಾಗಿ ಬೈಡೆನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ