ಸೋನಿಯಾ, ರಾಹುಲ್ ಗಾಂಧಿ ಎಂದಿಗೂ ಪಾಠ ಕಲಿಯಲ್ಲ: ಕ್ಯಾ.ಅಮರೀಂದರ್ ಸಿಂಗ್ ವಾಗ್ದಾಳಿ
Team Udayavani, Mar 11, 2022, 3:52 PM IST
ನವದೆಹಲಿ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ 4.5 ವರ್ಷಗಳ ಕಾಲ ಆಡಳಿತ ವಿರೋಧಿ ನೀತಿಯಿಂದಾಗಿ ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಸೋಲುವಂತಾಯ್ತು ಎಂಬ ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಕ್ಕೆ ಶುಕ್ರವಾರ(ಮಾರ್ಚ್ 11) ತಿರುಗೇಟು ನೀಡಿರುವ ಅಮರೀಂದರ್ ಸಿಂಗ್, ಕಾಂಗ್ರೆಸ್ ಹೈಕಮಾಂಡ್ (ಸೋನಿಯಾ ಗಾಂಧಿ, ರಾಹುಲ್ ಗಾಂಧಿ) ಯಾವತ್ತೂ ಪಾಠ ಕಲಿಯುವುದಿಲ್ಲ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ಪಂಜಾಬ್ ಮತದಾರರು ಅತ್ಯುತ್ತಮ ನಿರ್ಧಾರ ಕೈಗೊಂಡಿದ್ದಾರೆ: ಆಪ್ ಜಯಭೇರಿಗೆ ಸಿಧು ಬಹುಪರಾಕ್
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಅಧಿಕಾರ ಕಿತ್ತುಕೊಂಡಿರುವ ಆಮ್ ಆದ್ಮಿ ಪಕ್ಷ ಸ್ಪಷ್ಟ ಜನಾದೇಶ ಪಡೆದುಕೊಂಡ ಬಳಿಕ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿಗೆ ಯಾರು ಹೊಣೆ? ಮಣಿಪುರ, ಗೋವಾ, ಉತ್ತರಾಖಂಡ್ ನ ಫಲಿತಾಂಶ ಏನಾಯ್ತು ಎಂದು ಅಮರೀಂದರ್ ಸಿಂಗ್ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ನಂತರ ಬಂಡಾಯವೆದ್ದು, ತಮ್ಮದೇ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಸ್ವತಃ ಅಮರೀಂದರ್ ಸಿಂಗ್ ಪಟಿಯಾಲಾ ನಗರ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಜಿತ್ ಪಾಲ್ ಸಿಂಗ್ ಕೊಹ್ಲಿ ಎದುರು ಪರಾಯಗೊಂಡಿದ್ದರು.
ಪಂಜಾಬ್ ಚುನಾವಣೆಯಲ್ಲಿ ಸಿಂಗ್ ಅವರ ಪಂಜಾಬ್ ಲೋಕ್ ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಿಲ್ಲ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 92 ಸ್ಥಾನಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಪಕ್ಷ ಕೇವಲ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ