ವಿಹೆಚ್ ಪಿ, ಬಜರಂಗದಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ: ಹೆಚ್ ಡಿಕೆ ಟ್ವೀಟ್
ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ
Team Udayavani, Apr 1, 2022, 11:09 AM IST
ಬೆಂಗಳೂರು: ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವ ಹಿಂದೂ ಪರಿಷತ್, ಬಜರಂಗದಳದ ವಿರುದ್ಧ ಆಕ್ರೋಶದಿಂದ ಕೂಡಿದ ಟ್ವೀಟ್ ಗಳನ್ನು ಮಾಡಿದ್ದಾರೆ.
‘ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ” ಎಂದು ಬರೆದಿದ್ದಾರೆ.
”ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.
”ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್