ಕಾಂಗ್ರೆಸ್ ರೀತಿ ಕೀಳುಮಟ್ಟದ ವಿಚಾರದೊಂದಿಗೆ ಪ್ರಚಾರ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ
Team Udayavani, Jan 29, 2023, 12:24 PM IST
ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಕಾಂಗ್ರೆಸ್ ಮಾದರಿಯಲ್ಲಿ ಕೀಳುಮಟ್ಟದ ಹಾಗೂ ನಕಾರಾತ್ಮಕ ವಿಚಾರದೊಂದಿಗೆ ಪ್ರಚಾರಕ್ಕಿಳಿಯದೆ ರಾಜ್ಯ- ಕೇಂದ್ರ ಸರಕಾರಗಳ ಅಭಿವೃದ್ಧಿ ಯೋಜನೆಗಳ ಆಧಾರದಲ್ಲಿ ಚುನಾವಣೆಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಶಕಗಳಿಂದ ವಿಷಯಾಧಾರಿತ ಚುನಾವಣೆ ಪ್ರಚಾರ ಇಲ್ಲದಂತಾಗಿದೆ ಎಂಬುದು ನಿಜ. ಕಾಂಗ್ರೆಸ್ ನವರು ಸೋಲಿನ ಹತಾಶೆಯಿಂದ ನಕಾರಾತ್ಮಕ ವಿಷಯಗಳ ಪ್ರಚಾರಕ್ಕಿಳಿದಿದ್ದಾರೆ. ನನ್ನ ವಿರುದ್ಧ ಕೀಳುಮಟ್ಟದ ಆರೋಪಗಳನ್ನು ಮಾಡಿದಾಗಲು ನಾನು ಅವರ ಮಟ್ಡಕ್ಕೆ ಹೋಗಿ ಪ್ರತಿಕ್ರಿಯೆ ನೀಡಿಲ್ಲ. ಕಾಂಗ್ರೆಸ್ ನವರು ಇನ್ನೇನು ಅಧಿಕಾರಕ್ಕೆ ಬಂದೇ ಬಿಟ್ಟೆವು ಎಂಬ ಮನೋಸ್ಥಿತಿಯಲ್ಲಿದ್ದಾರೆ ಆದರೆ, ವಾಸ್ತವ ಬೇರೆ ಇದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವ ಸಂದೇಹ ಇಲ್ಲ ಎಂದರು.
ಇದನ್ನೂ ಓದಿ:ಪಡುಮಲೆಯಲ್ಲೊಂದು ಕೌತುಕ; ತೆಂಗಿನ ನೀರು ಬಿದ್ದರೂ ಪ್ರಜ್ವಲಿಸಿದ ಆರತಿ!
ಕಾಂಗ್ರೆಸ್ ಪಕ್ಷ ಅತ್ಯಂತ ಕೀಳುಮಟ್ಟದ ಭಾಷೆ ಬಳಕೆ ನೋವು ತರಿಸುತ್ತಿದೆ ಕರ್ನಾಟಕ ಚುನಾವಣೆ ಇತಿಹಾಸಕ್ಕೆ ಅದರದ್ದೆ ಮಹತ್ವವಿದೆ, ಅದಕ್ಕೆ ಚ್ಯುತಿ ತರುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದರು.
ಅಮಿತ್ ಶಾ ಬಂದಿದ್ದು ಕಾರ್ಯಕರ್ತರಿಗೆ ದೊಡ್ಡ ಹುಮ್ಮಸ್ಸು ತಂದಿದೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ ಎಂಬುದು ನಮ್ಮ ಕಾರ್ಯಕ್ರಮಗಳಿಗೆ ಜನ ಸೇರುತ್ತಿರುವುದೇ ಸಾಕ್ಷಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್ನೀಡಲು ಸ್ವಾಮೀಜಿಗಳಿಂದ ಒತ್ತಾಯ
ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್ ಶೋ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ
ನೇಕಾರ ಸಮ್ಮಾನ್ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ