ಈ ಬಾರಿ ನಗರಪಾಲಿಕೆ ಚುನಾವಣೆ ವೇಳೆ ಹಿಂಸಾಚಾರ ನಡೆಸಿದರೆ ಪ್ರತಿ ಬೂತ್ ಧ್ವಂಸ: ಟಿಎಂಸಿಗೆ BJP
ಈ ಬಾರಿ ಹಿಂಸಾಚಾರಕ್ಕೆ ಮುಂದಾದರೆ ಇಟ್ಟಿಗೆ, ಕಲ್ಲುಗಳಿಂದ ಪ್ರತಿಕ್ರಿಯೆ ನೀಡುತ್ತೇವೆ.
Team Udayavani, Feb 21, 2022, 2:12 PM IST
ನವದೆಹಲಿ: ಪಶ್ಚಿಮಬಂಗಾಳದಲ್ಲಿ ಫೆಬ್ರವರಿ 27ರಂದು ನಡೆಯಲಿರುವ ನಗರಪಾಲಿಕೆಯ ಚುನಾವಣೆ ಸಂದರ್ಭದಲ್ಲಿ ಒಂದು ವೇಳೆ ಹಿಂಸಾಚಾರ ನಡೆಸಿದರೆ, ಪ್ರತಿಯೊಂದು ಮತಗಟ್ಟೆಯನ್ನೂ ಧ್ವಂಸಗೊಳಿಸುವುದಾಗಿ ಪಶ್ಚಿಮಬಂಗಾಳದ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ಅರ್ಜುನ್ ಸಿಂಗ್ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಶಿವಮೊಗ್ಗ ಹರ್ಷ ಹತ್ಯೆ ಕೇಸ್: ಇಬ್ಬರು ಆರೋಪಿಗಳು ವಶಕ್ಕೆ; ಎಡಿಜಿಪಿ ಮುರುಗನ್
ಒಂದು ವೇಳೆ ನಗರಪಾಲಿಕೆ ಚುನಾವಣೆ ಸಂದರ್ಭದಲ್ಲಿ ಟಿಎಂಸಿ ಗೂಂಡಾಗಳು ಹಿಂಸಾಚಾರ ನಡೆಸಿದರೆ ಭಾರತೀಯ ಜನತಾ ಪಕ್ಷ ತಕ್ಕ ಉತ್ತರ ನೀಡಲಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಈ ಬಾರಿ ಹಿಂಸಾಚಾರಕ್ಕೆ ಮುಂದಾದರೆ ಇಟ್ಟಿಗೆ, ಕಲ್ಲುಗಳಿಂದ ಪ್ರತಿಕ್ರಿಯೆ ನೀಡುತ್ತೇವೆ. ಒಂದು ವೇಳೆ ಯಾವುದೇ ಒಂದು ಬೂತ್ ನಲ್ಲಿ ಅಕ್ರಮವಾಗಿ ಮಧ್ಯಪ್ರವೇಶಿಸಿದರೂ ಕೂಡಾ ನಂತರ ಪ್ರಿಸೈಡಿಂಗ್ ಅಧಿಕಾರಿ ತನ್ನ ಕೆಲಸಕ್ಕಾಗಿ ಪ್ರಾರ್ಥಿಸಬೇಕಾಗುತ್ತದೆ. ನಾನು ಪ್ರತಿಯೊಂದು ಬೂತ್ ನಲ್ಲಿರುವ ಯಂತ್ರಗಳನ್ನು ಒಡೆದು ಹಾಕುವೆ ಎಂದು ಸಿಂಗ್ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ಫೆಬ್ರವರಿ 27ರಂದು ಪಶ್ಚಿಮಬಂಗಾಳದ 108 ನಗರಪಾಲಿಕೆ ಚುನಾವಣೆಗೂ ಮುನ್ನ ಸಿಂಗ್ ಈ ವಿವಾದಿತ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ. ಅರ್ಜುನ್ ಸಿಂಗ್ ಬರ್ರಾಕ್ ಪುರ್ ನ ಬಿಜೆಪಿ ಸಂಸದರಾಗಿದ್ದು, ತಮ್ಮ ನೆರೆಯ ಭಾಟ್ಪಾರಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಂದರ್ಭದಲ್ಲಿ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು