ವಿಧಾನ ಕದನ 2023: ಕುಂದಾಪುರಕ್ಕೆ ಆರನೇ ಬಾರಿಗೂ ಹಾಲಾಡಿಯವರಾ?

ಕಾಂಗ್ರೆಸ್‌ನಲ್ಲಿ ಎದುರಾಳಿ ಕಂಡು ಲೆಕ್ಕಾಚಾರ

Team Udayavani, Mar 17, 2023, 8:00 AM IST

kundapur

ಕುಂದಾಪುರ: ನಾಲ್ಕು ಬಾರಿ ಬಿಜೆಪಿಯಿಂದ, ಒಮ್ಮೆ ಪಕ್ಷೇತರನಾಗಿ ಸ್ಪರ್ಧಿಸಿ ವಿಜಯದ ಸರಪಳಿ ಕಡಿಯದ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ಈ ಬಾರಿಯೂ ಅವಕಾಶ ಸಿಕ್ಕರೆ ಕಣಕ್ಕಿಳಿಯುವ ಹುರಿಯಾಳು. ಕಾಂಗ್ರೆಸ್‌ನಿಂದ ಹಲವರು ಟಿಕೆಟ್‌ ಆಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ ಯಾರಿಗೆ ಅವಕಾಶ ಸಿಗುತ್ತದೆಂಬ ಲೆಕ್ಕಾಚಾರ ನಡೆದಿದೆ.

ಬಿಜೆಪಿ ವರಿಷ್ಠರು ಆಗಾಗ ಹೇಳುತ್ತಿರುವ ಅಭ್ಯರ್ಥಿ ಬದಲಾವಣೆ ಕುಂದಾಪುರ ಕ್ಷೇತ್ರದಲ್ಲಿ ನಡೆಯಲಿದೆಯೇ, 70 ವಯೋಮಾನ ದಾಟಿದವರಿಗೆ ಟಿಕೆಟ್‌ ನಿರಾಕರಿಸಲಾಗುತ್ತದೆಯೇ, 72 ವಯಸ್ಸಿನ ಹಾಲಾಡಿ ಅವರನ್ನು ಬದಲಿಸಿದರೆ ಬಿಜೆಪಿ ಈ ಕ್ಷೇತ್ರವನ್ನು ತನ್ನ ಹಿಡಿತದಲ್ಲಿ ಕಾಪಿಟ್ಟುಕೊಳ್ಳಲು ಯಾವ ತಂತ್ರಗಾರಿಕೆ ಮಾಡುತ್ತದೆ ಎಂಬುದು ರಹಸ್ಯವಾಗಿಯೇ ಇದೆ. ಈ ಮಧ್ಯೆ ಹಾಲಾಡಿ ಅವರು ಕ್ಷೇತ್ರಾದ್ಯಂತ ಓಡಾಟ ನಡೆಸುತ್ತಿದ್ದಾರೆ.

ಬಿಜೆಪಿಯಲ್ಲೂ ಆಕಾಂಕ್ಷಿಗಳು
ಒಂದು ವೇಳೆ ಹಾಲಾಡಿ ಅವರ ಬದಲಿಗೆ ಎಂಬ ಪ್ರಶ್ನೆ ಉದ್ಭವಿಸಿದರೆ ಎಂಬುದಕ್ಕೆ ಸದ್ಯ ಕ್ಷೇತ್ರದಲ್ಲಿ ಓಡಾಡುತ್ತಿರುವ ಹೆಸರುಗಳೆಂದರೆ ರಾಜ್ಯ ಆಹಾರ ನಿಗಮ ಉಪಾಧ್ಯಕ್ಷ ಕಿರಣ್‌ ಕೊಡ್ಗಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರದು. ಕೋಟ ಶ್ರೀನಿವಾಸ ಪೂಜಾರಿ ಅಥವಾ ಅಚ್ಚರಿಯ ಆಯ್ಕೆಯಾಗಿ ಸಾಮಾನ್ಯ ಕಾರ್ಯಕರ್ತನೂ ಸ್ಪರ್ಧಿಸಲೂಬಹುದು ಎಂಬ ಅಭಿಪ್ರಾಯವೂ ಇದೆ.

ಕಾಂಗ್ರೆಸ್‌ನಲ್ಲಿ ಹೇಗಿದೆ
1999ರಿಂದ ಕಳೆದುಕೊಂಡ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಹವಣಿಸುತ್ತಿದೆ. ಕಾಂಗ್ರೆಸ್‌ನಿಂದ ಈ ಹಿಂದೆ ಸ್ಪರ್ಧಿಸಿದ ಮಲ್ಯಾಡಿ ಶಿವರಾಮ ಶೆಟ್ಟರು ಅಷ್ಟೊಂದು ಆಸಕ್ತಿ ತೋರಿಸುತ್ತಿಲ್ಲ. ಪ್ರತಾಪಚಂದ್ರ ಶೆಟ್ಟರ ಹೆಸರಿಗೆ ಕಾರ್ಯಕರ್ತರ ಅಭಯಮುದ್ರೆ ಇದ್ದರೂ ಸುಲಭದಲ್ಲಿ ದೊರೆತ ವಿಧಾನಪರಿಷತ್‌ ಅನ್ನೇ ತೊರೆದವರು ಇಲ್ಲಿ ಸ್ಪರ್ಧೆಗೆ ಇಳಿಯುತ್ತಾರೆಯೇ ಎಂಬ ಪ್ರಶ್ನೆ ಇದೆ. ಕಳೆದ ಬಾರಿ ಸ್ಪರ್ಧಿಸಿದ್ದ ರಾಕೇಶ್‌ ಮಲ್ಲಿಯವರೂ ಬಂಟ್ವಾಳದತ್ತ ಕಣ್ಣು ನೆಟ್ಟಿದ್ದಾರೆ. ಉಳಿದಂತೆೆ ಮೊಳಹಳ್ಳಿ ದಿನೇಶ ಹೆಗ್ಡೆ, ಶ್ಯಾಮಲಾ ಭಂಡಾರಿ, ಅಶೋಕ್‌ ಪೂಜಾರಿ ಬೀಜಾಡಿ ಮತ್ತಿತರರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು ಆಕಾಂಕ್ಷಿಗಳು ಕ್ಷೇತ್ರಾದ್ಯಂತ ಓಡಾಟ ನಡೆಸುತ್ತಿದ್ದಾರೆ.

ಬಂಟರ ಹಿಡಿತ
ವಿನ್ನಿಫ್ರೆಡ್‌ ಫೆರ್ನಾಂಡಿಸ್‌ ಹೊರತುಪಡಿಸಿ 1952ರಿಂದ ಈವರೆಗೆ ಈ ಕ್ಷೇತ್ರದಲ್ಲಿ ಗೆದ್ದವರು ಬಂಟರು ಎನ್ನುವುದು ಗಮನಾರ್ಹ. ಈ ಸೂಕ್ಷ$ಗಮನಿ ಸಿಯೇ ಬಿಜೆಪಿ ಮತ್ತು ಕಾಂಗ್ರೆಸ್‌ ಆಖಾಡಕ್ಕೆ ಇಳಿಯುತ್ತದೆ. ಈ ಬಾರಿ ಆ ಸಂಪ್ರದಾಯ ಮುರಿಯುವುದೇ ಎಂಬುದು ಬಿಜೆಪಿಯ ಹೊಸ ಪ್ರಯೋಗದ ಮೇಲೆ ಅವಲಂಬಿಸಿದ್ದು, ಬದಲಾವಣೆಯ ಪರಿಣಾಮಗಳನ್ನೂ ಲೆಕ್ಕ ಹಾಕಲಾಗುತ್ತಿದೆ. ಗುಜರಾತ್‌ ಮಾದರಿ ಇಲ್ಲಿಗೆ ಅನ್ವಯವಾಗುವುದೇ ಇಲ್ಲವೇ ಎಂಬುದು ಕಾದು ನೋಡಬೇಕಿದೆ.

~ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.