ನಾಳೆಯಿಂದ ಚಳಿಗಾಲದ ಅಧಿವೇಶನ:ಬಿಲ್ ಬಗ್ಗೆ ಸ್ಪೀಕರ್ ಕಾಗೇರಿ ಹೇಳಿದ್ದೇನು?
Team Udayavani, Dec 12, 2021, 5:58 PM IST
ಬೆಳಗಾವಿ : ನಾಳೆಯಿಂದ (ಡಿಸೆಂಬರ್ 13) ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಎಲ್ಲ ಶಾಸಕರು ಸಕ್ರಿಯವಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ರೀತಿಯ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 10.30 ಗೆ ಬಿಎಸ್ ಇ ಮೀಟಿಂಗ್ ನಡೆಯಲಿದ್ದು, ಎಲ್ಲಾ ಪಕ್ಷದ ಸದಸ್ಯರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಎಲ್ಲಾ ದಿನದ ಕಾರ್ಯ ಕಲಾಪದ ವಿವರಗಳನ್ನ ಚರ್ಚೆ ಚರ್ಚೆ ಮಾಡಿ ಕಾರ್ಯಕಲಾಪದ ವಿವರ ಪಡೆಯಲಾಗುತ್ತದೆ ಎಂದರು.
ಸರ್ಕಾರ ಇದುವರೆಗೂ ಯಾವ ಯಾವ ಬಿಲ್ ಮಂಡಿಸಲಿದೆ ಅನ್ನುವುದನ್ನು ಕಳುಹಿಸಿಲ್ಲ,ಬಿಲ್ ಕಳುಹಿಸುತ್ತೇವೆ ಅಂತ ಹೇಳಿದ್ದಾರೆ, ಇದುವರೆಗೂ ಬಂದಿಲ್ಲ,ನಾಳೆಯೊಳಗೆ ಕಳುಹಿಸುತ್ತೇವೆ ಅಂತ ಮೌಖಿಕವಾಗಿ ತಿಳಿಸಿದ್ದಾರೆ ಎಂದರು.
ಈ ಅಧಿವೇಶನದಲ್ಲಿ ಎರಡು ದಿನವಾದರೂ ಉತ್ತರ ಕರ್ನಾಟಕ ಭಾಗದ ವಿಷಯ ಚರ್ಚೆ ಮಾಡಬೇಕು ಅಂತ ಸಲಹೆಗಳು ಬಂದಿದೆ. ಬಿಎಸ್ ಇ ಮೀಟಿಂಗ್ ನಲ್ಲಿ ಇದರ ಬಗ್ಗೆ ಚರ್ಚೆ ಮಾಡುತ್ತೇವೆ. ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತಗೆದುಕೊಂಡಿದ್ದೇವೆ.ಕಲಾಪ ಚನ್ನಾಗಿ ನಡೆಯುವ ಅಗತ್ಯತೆ ಇದೆ.ಇಷ್ಟೆಲ್ಲ ವ್ಯವಸ್ಥೆ ಮಾಡಿ ಕಲಾಪ ಚನ್ನಾಗಿ ನಡೆಯಲಿಲ್ಲ ಅಂದರೆ ಹೇಗೆ ? ಹೀಗಾಗಿ, ಸಕ್ರಿಯವಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಿ ಎಂದು ಎಲ್ಲಾ ಶಾಸಕರಿಗೂ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದರು.
ನಿಯಮಾನುಸಾರ ಎಲ್ಲರಿಗೆ ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ.ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತೆ ಅಂತ ಗೈರಾಗುವುದು ಸರಿಯಲ್ಲ.ಬೆಳಗಾವಿ ಅಧಿವೇಶನದಲ್ಲಿ ಎಲ್ಲಾ ಶಾಸಕರು ಪಾಲ್ಗೊಳ್ಳಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ