ಸಿಡಿಲು ಬಡಿದು ದನಗಾಯಿ ಮಹಿಳೆ ಸಾವು
Team Udayavani, Apr 12, 2021, 5:39 PM IST
ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಸಿಡಿಲು ಬಡಿದು ದನಗಾಯಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜರುಗಿದೆ. ಸಿಡಿಲಿಗೆ ಬಲಿಯಾದ ದನಗಾಯಿ ಮಹಿಳೆಯನ್ನು ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ಲಕ್ಷ್ಮೀಬಾಯಿ ಹನುಮಂತ ತಳವಾರ (50) ಎಂದು ಗುರುತಿಸಲಾಗಿದೆ.
ದೇವರಹಿಪ್ಪರಗಿ ತಾಲೂಕಿನಲ್ಲಿ ಮಧ್ಯಾಹ್ನ ಗುಡುಗು ಸಹಿತ ಮಳೆ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ದನಗಳನ್ನು ಮೇಯಿಸುತ್ತಿದ್ದ ಪಡಗಾನೂರ ಗ್ರಾಮದ ದನಗಾಯಿ ಮಹಿಳೆ ಲಕ್ಷ್ಮೀಬಾಯಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ ಐ ರವಿ ಯಡೆಣ್ಣನವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.