ಮತ್ತೊಂದು ಘಟನೆ: ಕಾಶ್ಮೀರಿ ಸಮುದಾಯ ಟಾರ್ಗೆಟ್: ಶಿಕ್ಷಕಿಯನ್ನು ಗುಂಡಿಟ್ಟು ಕೊಂದ ಉಗ್ರರು
ಭಲ್ಲಾ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Team Udayavani, May 31, 2022, 11:37 AM IST
ಜಮ್ಮು-ಕಾಶ್ಮೀರ: ಶಿಕ್ಷಕಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮಂಗಳವಾರ (ಮೇ 31) ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲಪೋರಾ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಯಾರ ಜೊತೆಯೂ ಹೊಂದಾಣಿಕೆ- ಒಪ್ಪಂದ ಇಲ್ಲ. ನಾವೇ ಗೆಲ್ಲುತ್ತೇವೆ: ಕಟೀಲ್ ವಿಶ್ವಾಸ
ಹಿಂದೂ ಶಾಲೆಯ ಶಿಕ್ಷಕಿಯಾಗಿರುವ ರಜನಿ ಭಲ್ಲಾ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಕೂಡಲೇ ಭಲ್ಲಾ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯ ಎಸಗಿರುವ ಉಗ್ರರನ್ನು ಶೀಘ್ರವೇ ಪತ್ತೆ ಹಚ್ಚಿ ಹತ್ಯೆಗೈಯಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ. ಗೋಪಾಲ್ ಪೋರಾ ಪ್ರದೇಶದಲ್ಲಿನ ಪ್ರೌಢಶಾಲೆಯ ಆವರಣದೊಳಗೆ ಈ ಘಟನೆ ನಡೆದಿದ್ದು, ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇತ್ತೀಚೆಗೆ ಕಣಿವೆ ಪ್ರದೇಶದಲ್ಲಿ ಕಾಶ್ಮೀರಿ ಪಂಡಿತರು, ಹಿಂದೂ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ. ಮೇ 12ರಂದು ಕಂದಾಯ ಇಲಾಖೆಯ ಉದ್ಯೋಗಿ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆಗೈದಿದ್ದರು. ಕಳೆದ ವಾರ ಚಾಡೂರಾ ಪ್ರದೇಶದಲ್ಲಿ ನಟಿ ಅಮ್ರೀನ್ ಭಟ್ ಮೇಲೆ ಲಷ್ಕರ್ ಎ ತೊಯ್ಬಾ ಉಗ್ರರು ದಾಳಿ ನಡೆಸಿ ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್ಗೆ ಅಮೆರಿಕ ಸಲಹೆ
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ