ತಿಪಟೂರು: ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ, ಯುವಕ ಪರಾರಿ
Team Udayavani, Nov 14, 2021, 1:54 PM IST
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯೊಬ್ಬರನ್ನು ಕಟ್ಟು ಸೀಳಿ ಬರ್ಬರವಾಗಿ ಹತ್ಯೆ ಗೈದಿರುವ ಘಟನೆ ಭಾನುವಾರ ನಡೆದಿದೆ.
ಅಂಗನವಾಡಿ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ (30) ಹತ್ಯೆಗೀಡಾದ ಮಹಿಳೆ.
ಮಹಿಳೆ ಪತಿಯನ್ನು ಕಳೆದುಕೊಂಡಿದ್ದು,ಆಕೆಯ ಪತಿ ನಾಗರಾಜ್ ಅವರ ಅಕ್ಕನ ಮಗನಾದ ದಿವಾಕರ್ (25) ಎಂಬುವವನು ಅಂಗನವಾಡಿ ಕಟ್ಟಡದ ಹಿಂಭಾಗ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಅಂಗನವಾಡಿ ಕಟ್ಟಡದ ಹಿಂಭಾಗದಲ್ಲಿ ವಾಸವಿರುವ ಮನೆಯ ಓರ್ವ ಮಹಿಳೆ ಘಟನೆಯನ್ನು ನೋಡಿದ್ದಾರೆ ಎನ್ನಲಾಗಿದೆ.
ಕೆಲ ಸಾರ್ವಜನಿಕರು ಈ ಘಟನೆಯ ಬಗ್ಗೆ ತಿಳಿದು, ಆಕೆಯನ್ನು ಕಾಪಾಡಲೆಂದು ಹೋದಾಗ ನಿಮ್ಮನ್ನೂ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿ, ಆರೋಪಿ ಓಡಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.
.ಈ ಘಟನೆ ನಡೆದ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ