ಕನ್ನಡ ನಾಮಫಲಕಗಳಲ್ಲಿ ಪದಗಳ ದೋಷ !: “ಬಸ್‌” ಬದಲಾಗಿ “ಬಸು” ಎಂದು ಗೀಚಿ ಅಪಹಾಸ್ಯ


Team Udayavani, Jun 12, 2022, 10:51 AM IST

4kannada

ವಾಡಿ: ಚಿತ್ತಾಪುರ ತಾಲೂಕಿನ ಸಿಮೆಂಟ್‌ ನಗರಿ ವಾಡಿ, ನಾಲವಾರ ವಲಯದ ವಿವಿಧ ಗ್ರಾಮಗಳಲ್ಲಿ ಕಂಡು ಬರುತ್ತಿರುವ ಕನ್ನಡಾಕ್ಷರಗಳ ನಾಮಫಲಕಗಳಲ್ಲಿ ಪದಗಳ ದೋಷಗಳು ಕಂಡು ಬಂದಿವೆ.

ಕೊಲ್ಲೂರು ಗ್ರಾಮದ ಡಾ|ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ನಿಲ್ದಾಣಕ್ಕೆ ಸೂಕ್ತ ನಾಮಫಲ ಅಳವಡಿಸಲು ಸಾರಿಗೆ ಸಂಸ್ಥೆಗೆ ಆಸಕ್ತಿಯಿಲ್ಲ ಎಂಬುದು ಸಾಬೀತಾಗಿದೆ.

ಯಾವುದೋ ಕಂಪನಿಗಳು ಗ್ರಾಮೀಣ ಪ್ರದೇಶಕ್ಕೆ ಕಾಲಿಡುವ ಮೂಲಕ ಎಲ್ಲ ಬಸ್‌ ನಿಲ್ದಾಣಗಳಿಗೂ ಬಣ್ಣ ಬಳಿದು ತಮ್ಮ ಕಂಪನಿಯ ಜಾಹೀರಾತು ಪ್ರಕಟಿಸಿವೆ. ಬಸ್‌ ನಿಲ್ದಾಣದ ನಾಮಫಲಕವನ್ನು ಅವರಸರದಲ್ಲಿ ಇವರೇ ಬರೆದು ಹೋಗಿದ್ದರಿಂದ “ಬಸ್‌’ ಬದಲಾಗಿ “ಬಸು’ ಎಂದು ಗೀಚಿ ಅಪಹಾಸ್ಯ ಮಾಡಿದ್ದಾರೆ.

ಜಾಹೀರಾತು ಕಂಪನಿಗಳ ಹಾವಳಿಗೆ ಸಿಕ್ಕು ನಲುಗುತ್ತಿರುವ ಗ್ರಾಮೀಣ ಭಾಗದ ಬಸ್‌ ನಿಲ್ದಾಣಗಳು ತಮ್ಮ ಸೌಂದರ್ಯ ಕಳೆದುಕೊಂಡಿವೆ. ಸುಣ್ಣಬಣ್ಣ ಮಾಡಲು ಸಾಧ್ಯವಾಗದೇ ಸಾರಿಗೆ ಇಲಾಖೆ ಕೈಕಟ್ಟಿ ಕುಳಿತದ್ದೇ ಈ ಕಂಪನಿಗಳ ಜಾಹೀರಾತಿಗೆ ಲಾಭ ತಂದು ಕೊಡುತ್ತಿವೆ. ಇದಲ್ಲದೇ ವಿವಿಧ ಗ್ರಾಮಗಳ ಸರ್ಕಾರಿ ನಾಮಫಲಕಗಳಲ್ಲೂ ಸಾಕಷ್ಟು ಕನ್ನಡ ಅಕ್ಷರಗಳ ಪದ ದೋಷ ಎದ್ದು ಕಾಣುತ್ತಿವೆ. ಪ್ರಥಮ-ಪ್ರದಮ, ಶಾಸಕ ಪ್ರಿಯಾಂಕ್‌ -ಪ್ರಿಯಾಂಕ, ಅಣೆಕಟ್ಟು-ಅಣಿಕಟ್‌, ಹಳಕರ್ಟಿ- ಹಲಕಟ್ಟಿ-ಹಲಕಟ್ಟಾ? ಹೀಗೆ ವಿವಿಧ ರೀತಿಯ ನಾಮಫಲಕಗಳು ಕನ್ನಡವನ್ನು ಅಣಕಿಸುತ್ತಿವೆ.

ಇದನ್ನೂ ಓದಿ:ಮೋದಿ ಭದ್ರತೆಗೆ ತೆರಳಿದ್ದ ಯೋಧನ ದೇಹದಲ್ಲಿ 30ಕ್ಕೂ ಹೆಚ್ಚು ಗ್ರೆನೇಡ್‌ ಚೂರುಗಳು

ಕನ್ನಡಕ್ಕೆ ಆದ್ಯತೆ ನೀಡುವಲ್ಲಿ ಅಂಗಡಿ ಮಾಲೀಕರ ನಿರ್ಲಕ್ಷ್ಯ

ಹೆದ್ದಾರಿ ಸಂಪರ್ಕ ಹೊಂದಿರುವ ಸಿಮೆಂಟ್‌ ನಗರಿ ವಾಡಿ ಪಟ್ಟಣ ಸೇರಿದಂತೆ ನಾಲವಾರ, ಕುಂಬಾರಹಳ್ಳಿ, ಕೊಲ್ಲೂರ, ರಾವೂರ, ಇಂಗಳಗಿ, ಕಮರವಾಡಿ, ಹಳಕರ್ಟಿ, ಲಾಡ್ಲಾಪುರ ಹಾಗೂ ಇನ್ನಿತರ ಪ್ರದೇಶಗಳಲ್ಲಿನ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡುವಲ್ಲಿ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದಾರೆ. ಎಲ್ಲವೂ ಇಂಗ್ಲಿಷ್‌ ಮತ್ತು ಹಿಂದಿಮಯವಾಗಿದ್ದು ಕನ್ನಡ ಮೂರನೇ ದರ್ಜೆಗೆ ಜಾರಿದೆ. ಕೆಲವರು ನಾಮಫಲಕದ ಮೊದಲಿಗೆ ಕನ್ನಡದಲ್ಲಿ ಬರೆಯಿಸಿದ್ದಾರೆಯಾದರೂ ಅದು ಆಂಗ್ಲ ಅಕ್ಷರಗಳಿಗಿಂತ ತೀರಾ ಚಿಕ್ಕದಾಗಿವೆ. ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕೆಂದು ರಾಜ್ಯ ಸರ್ಕಾರದ ಆದೇಶವಿದ್ದರೂ ಅದು ಕಾರ್ಯರೂಪಕ್ಕೆ ಬರುತ್ತಿಲ್ಲವಾಗಿದೆ.

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.