World Cup; ಭಾರತ-ನ್ಯೂಜಿಲ್ಯಾಂಡ್‌: ಇಂದು ಅಜೇಯ ತಂಡಗಳ ಆಟ

 ಭಾರತವನ್ನು ಕಾಡಲಿದೆ ಪಾಂಡ್ಯ ಗೈರು  ಸೂರ್ಯ ಗಾಯಾಳು; ಇಶಾನ್‌ಗೆ ಜೇನು ಕಡಿತ

Team Udayavani, Oct 22, 2023, 6:00 AM IST

1-ssadas

ಧರ್ಮಶಾಲಾ: ಹದಿ ಮೂರನೇ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮೊದಲ್ಗೊಂಡು ಎರಡು ವಾರ ಉರುಳಿದೆ. ಈ ಅವಧಿಯಲ್ಲಿ ಸ್ಥಿರ ಪ್ರದರ್ಶನ ಕಾಯ್ದುಕೊಂಡು ಅಜೇಯ ಅಭಿಯಾನಗೈದಿರುವ ತಂಡಗಳು ಎರಡು ಮಾತ್ರ, ಒಂದು, ಆತಿಥೇಯ ಭಾರತ; ಇನ್ನೊಂದು, ಕಳೆದೆರಡು ಬಾರಿಯ ರನ್ನರ್ ಅಪ್‌ ನ್ಯೂಜಿಲ್ಯಾಂಡ್‌. ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದಿರುವ ಈ ತಂಡಗಳು ರವಿವಾರ ಧರ್ಮಶಾಲಾದಲ್ಲಿ ಮುಖಾಮುಖಿ ಆಗಲಿವೆ. ಸಹಜ ವಾಗಿಯೇ ಒಂದು ತಂಡ ಗೆಲುವಿನ ಓಟ ಮುಂದುವರಿಸಬೇಕಿದೆ, ಇನ್ನೊಂದು ತಂಡ ಮೊದಲ ಸಲ ಸೋಲಿನ ಮುಖ ಕಾಣಲಿದೆ. ಹೀಗಾಗಿ ಇದು ಕೂಟದ ಮತ್ತೂಂದು “ದೊಡ್ಡ ಪಂದ್ಯ’ ಆಗುವು ದರಲ್ಲಿ ಅನುಮಾನವಿಲ್ಲ. ಗೆದ್ದವರು ಸೆಮಿಫೈನಲ್‌ಗೆ ಹತ್ತಿರವಾಗಲಿದ್ದಾರೆ.

ಭಾರತ ತಂಡ ಆಸ್ಟ್ರೇಲಿಯ ವಿರುದ್ಧ ಅಸಾಮಾನ್ಯ ಬ್ಯಾಟಿಂಗ್‌ ಹೋರಾಟ ನೀಡಿ ಗೆಲ್ಲುವ ಮೂಲಕ ತನ್ನ ಅಭಿಯಾನ ಆರಂಭಿಸಿತ್ತು. ಬಳಿಕ ಅಫ್ಘಾನಿಸ್ಥಾನ ವನ್ನು ಕೆಡವಿತು. 3ನೇ ಮುಖಾಮುಖೀಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನಕ್ಕೆ 7 ವಿಕೆಟ್‌ಗಳ ಏಟು ಬಿಗಿಯಿತು. ಅನಂತರ ಬಾಂಗ್ಲಾದೇಶವನ್ನೂ ಇಷ್ಟೇ ಅಂತರದಿಂದ ಕೆಡವಿತು. ಇವೆಲ್ಲವೂ ವೀರೋಚಿತ ಗೆಲುವುಗಳೇ ಆಗಿದ್ದವು.

ಟೀಮ್‌ ಇಂಡಿಯಾ ತುಸು ಆತಂಕಕ್ಕೆ ಸಿಲುಕಿದ್ದು ಆಸ್ಟ್ರೇಲಿಯ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಚೇಸಿಂಗ್‌ ಮಾಡುವಾಗ ಮಾತ್ರ. ಅಲ್ಲಿ 2 ರನ್ನಿಗೆ 3 ವಿಕೆಟ್‌ ಬಿದ್ದಾಗ ಟೀಮ್‌ ಇಂಡಿಯಾದ ಕತೆ ಏನೋ ಹೇಗೋ ಎಂಬ ಭಯ ಮೂಡಿದ್ದು ಸಹಜ. ಆದರೆ ಕೊಹ್ಲಿ-ರಾಹುಲ್‌ ಸೇರಿಕೊಂಡು ಪರಿಸ್ಥಿತಿಯನ್ನು ನಿಭಾ ಯಿಸಿ ತಂಡವನ್ನು ದಡ ಸೇರಿಸಿದ ಬಳಿಕ ಭಾರತ ತನ್ನ ರಾಜ್ಯಭಾರವನ್ನು ವಿಸ್ತರಿಸುತ್ತಲೇ ಬಂದಿದೆ. ಅನಂತರ ಏಷ್ಯಾದ ಮೂರೂ ತಂಡಗಳ ಮೇಲೆ ಸವಾರಿ ಮಾಡಿತು. ಪಾಕಿಸ್ಥಾನವನ್ನಂತೂ ಎಲ್ಲರ ಎಣಿಕೆಗಿಂತಲೂ ಸುಲಭವಾಗಿ ಬಗ್ಗುಬಡಿಯಿತು. ಬಾಂಗ್ಲಾ ಟೈಗರ್ ಕೂಡ ಭೀತಿಯೊಡ್ಡಲಿಲ್ಲ.

ಕಿವೀಸ್‌ ಸವಾಲು ಸುಲಭದ್ದಲ್ಲ
ಆದರೆ ನ್ಯೂಜಿಲ್ಯಾಂಡ್‌ ಸವಾಲು ಸುಲಭದ್ದಲ್ಲ. ಅದರಲ್ಲೂ ವಿಶ್ವಕಪ್‌ನಲ್ಲಿ ಈ ಬ್ಲ್ಯಾಕ್‌ಕ್ಯಾಪ್ಸ್‌ ಭಾರತಕ್ಕೆ ಆತಂಕ ಒಡ್ಡುತ್ತಲೇ ಬಂದಿದೆ. 9ರಲ್ಲಿ 5 ಪಂದ್ಯಗಳನ್ನು ನ್ಯೂಜಿಲ್ಯಾಂಡ್‌ ಜಯಿಸಿದೆ. ಭಾರತ ಗೆದ್ದದ್ದು ಮೂರರಲ್ಲಿ ಮಾತ್ರ. 2019ರ ಸೆಮಿಫೈನಲ್‌ನಲ್ಲಿ ಕೇನ್‌ ವಿಲಿಯಮ್ಸನ್‌ ಪಡೆ ಭಾರತವನ್ನು ಕೂಟದಿಂದಲೇ ಹೊರದಬ್ಬಿತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವುದು ಭಾರತದ ಮೊದಲ ಗುರಿ ಆಗಬೇಕು.

ಪಾಂಡ್ಯ ಬದಲು ಯಾರು?
ರವಿವಾರದ ಮೇಲಾಟದಲ್ಲಿ ಭಾರತ ಆತಂಕ ಪಡುವಂಥ ಕಾರಣವೊಂದಿದೆ. ಅದೆಂದರೆ, ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಗಾಯಾಳಾಗಿ ಹೊರಗುಳಿದಿರುವುದು. ಇವರ ಸ್ಥಾನವನ್ನು ತುಂಬ ಬಲ್ಲ ಮತ್ತೋರ್ವ ಸಮರ್ಥ ಸವ್ಯಸಾಚಿ ಇಲ್ಲ ಎಂಬುದು ಭಾರತದ ದೊಡ್ಡ ಕೊರತೆ. ಇದರಿಂದ ತಂಡದ ಸಮತೋಲನ ಖಂಡಿತ ತಪ್ಪಲಿದೆ.

ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌ ಶನಿವಾರದ ಅಭ್ಯಾಸ ವೇಳೆ ಸಮಸ್ಯೆಗೆ ಸಿಲುಕಿದ್ದಾರೆ. ಇಶಾನ್‌ ಕಿಶನ್‌ ಅವರಿಗೆ ಕುತ್ತಿಗೆಯ ಭಾಗಕ್ಕೆ ಜೇನುನೋಣ ಕಡಿದಿದೆ. ತ್ರೋಡೌನ್‌ ಸ್ಪೆಷಲಿಸ್ಟ್‌ ರಘು ಅವರ ಚೆಂಡಿನೇಟಿಗೆ ಸೂರ್ಯಕುಮಾರ್‌ ಅವರ ಮೊಣಕೈಗೆ ಏಟಾಗಿದೆ. ಹೀಗಾಗಿ ಪಾಂಡ್ಯ ಬದಲು ಯಾರು ಎಂಬ ಪ್ರಶ್ನೆ ಜಟಿಲಗೊಂಡಿದೆ.

ಅನುಭವಿ ಮೊಹಮ್ಮದ್‌ ಶಮಿ ಕೂಡ ಪಾಂಡ್ಯ ಸ್ಥಾನ ತುಂಬಬಹುದು. ಆದರೆ ಇವರಿಗೆ ಬ್ಯಾಟಿಂಗ್‌ ಅಷ್ಟಕ್ಕಷ್ಟೇ. ಶಾರ್ದೂಲ್‌ ಠಾಕೂರ್‌ ಈಗಾಗಲೇ ಆಡುವ ಬಳಗದಲ್ಲಿದ್ದರೂ ಇವರ ಆಟ ವಿಶ್ವಕಪ್‌ ಮಟ್ಟದಲ್ಲಿಲ್ಲ. ಇನ್ನುಳಿದಿರುವುದು ಆರ್‌. ಅಶ್ವಿ‌ನ್‌. ನ್ಯೂಜಿಲ್ಯಾಂಡ್‌ನಂಥ ಬಲಿಷ್ಠ ತಂಡದೆದುರಿನ ಪಂದ್ಯದ ವೇಳೆಯೇ ಭಾರತಕ್ಕೆ ಈ ಸಮಸ್ಯೆ ಕಾಡಿದ್ದೊಂದು ವಿಪರ್ಯಾಸ.

ಟೀಮ್‌ ಇಂಡಿಯಾ ಪಾಲಿನ ಹೆಗ್ಗಳಿಕೆಯೆಂದರೆ ಬ್ಯಾಟಿಂಗ್‌ ಸರದಿ ಬಲಿಷ್ಠವಾಗಿರುವುದು ಹಾಗೂ ಎಲ್ಲರೂ ಫಾರ್ಮ್ನಲ್ಲಿರುವುದು. ರೋಹಿತ್‌, ಗಿಲ್‌, ಕೊಹ್ಲಿ, ಅಯ್ಯರ್‌ ಮತ್ತು ರಾಹುಲ್‌ ಭಾರತದ ಕ್ರಿಕೆಟ್‌ ಅಭಿಮಾನಿಗಳ ನಂಬಿಕೆಯನ್ನು ಸಾಕಾರಗೊಳಿಸುತ್ತಲೇ ಬಂದಿದ್ದಾರೆ. ಇವರು ಬೌಲ್ಟ್, ಹೆನ್ರಿ, ಫ‌ರ್ಗ್ಯುಸನ್‌ ಅವರ ವೇಗದ ದಾಳಿಯನ್ನು, ಎಡಗೈ ಸ್ಪಿನ್ನರ್‌ ಸ್ಯಾಂಟ್ನರ್‌ ಅವರ ಬೌಲಿಂಗ್‌ ದಾಳಿಯನ್ನು ನಿಭಾಯಿಸಿ ನಿಂತಾರೆಂಬ ನಿರೀಕ್ಷೆ ಇದೆ.

ಕೇನ್‌, ಸೌಥಿ ಗೈರು
ನ್ಯೂಜಿಲ್ಯಾಂಡ್‌ ತಂಡದಲ್ಲಿ ಇಬ್ಬರು ಅನು ಭವಿಗಳ ಗೈರು ಎದ್ದು ಕಾಣುತ್ತಿದೆ. ಇವರೆಂದರೆ, ನಾಯಕ ಕೇನ್‌ ವಿಲಿಯಮ್ಸನ್‌ ಮತ್ತು ವೇಗಿ ಟಿಮ್‌ ಸೌಥಿ. ಆದರೆ ಇವರ ಗೈರಲ್ಲೂ ಕಿವೀಸ್‌ ಅಸಾಮಾನ್ಯ ಪ್ರದರ್ಶನ ಕಾಯ್ದುಕೊಂಡು ಬಂದಿರುವುದನ್ನು ಮೆಚ್ಚಲೇ ಬೇಕು.

ಆರಂಭಿಕ ಪಂದ್ಯದಲ್ಲೇ ಚಾಂಪಿ ಯನ್‌ ಇಂಗ್ಲೆಂಡ್‌ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗು ಬಡಿಯುವ ಮೂಲಕ ನ್ಯೂಜಿಲ್ಯಾಂಡ್‌ ಇಡೀ ಕೂಟಕ್ಕೆ ಅಗತ್ಯವಿರುವಷ್ಟು ಆತ್ಮವಿಶ್ವಾಸವನ್ನು ಕೂಡಿ ಟ್ಟುಕೊಂಡಿದೆ. ಅನಂತರ ನೆದರ್ಲೆಂಡ್ಸ್‌ (99 ರನ್‌), ಬಾಂಗ್ಲಾದೇಶ (8 ವಿಕೆಟ್‌) ಮತ್ತು ಅಫ್ಘಾನಿಸ್ಥಾನವನ್ನು (149 ರನ್‌) ದೊಡ್ಡ ಅಂತರದಲ್ಲೇ ಮಣಿಸಿದೆ.

ಆದರೆ ಇಂಗ್ಲೆಂಡ್‌ ಬಳಿಕ ಕಿವೀಸ್‌ಗೆ ದೊಡ್ಡ ಸವಾಲು ಎದುರಾಗುತ್ತಿರುವುದು ಇದೇ ಮೊದಲು ಎನ್ನಲಡ್ಡಿಯಿಲ್ಲ. ಇಲ್ಲಿ ಕಾನ್ವೇ, ಯಂಗ್‌, ರವೀಂದ್ರ, ಮಿಚೆಲ್‌, ಲ್ಯಾಥಂ, ಫಿಲಿಪ್ಸ್‌, ಚಾಪ್‌ಮನ್‌ ಅವರ ಬ್ಯಾಟಿಂಗ್‌ಗೆ ನಿಜವಾದ ಅಗ್ನಿಪರೀಕ್ಷೆ ಎದುರಾಗಲಿದೆ.
ಇದು ಧರ್ಮಶಾಲಾದಲ್ಲಿ ನಡೆಯುವ ಮುಖಾಮುಖೀ. ದಕ್ಷಿಣ ಆಫ್ರಿಕಾ- ನೆದರ್ಲೆಂಡ್ಸ್‌ ಪಂದ್ಯಕ್ಕೆ ಮಳೆಯಿಂದ ಅಡಚಣೆ ಆಗಿತ್ತು. ಆದರೆ ರವಿವಾರದ ವಾತಾವರಣ ಶುಭ್ರವಾಗಿರಲಿದೆ. ಭಾರತ ಮೊದಲು ಬ್ಯಾಟಿಂಗ್‌ ನಡೆಸಿ ದೊಡ್ಡ ಮೊತ್ತವನ್ನು ಪೇರಿಸಿಟ್ಟರೆ ಕ್ಷೇಮ.

ಆರಂಭ: ಅ. 2.00
 ಪ್ರಸಾರ: ಸ್ಟಾರ್‌ ನ್ಪೋರ್ಟ್ಸ್

ವಿಶ್ವಕಪ್ ಮುಖಾಮುಖಿ
 ಪಂದ್ಯ: 09
ಭಾರತ ಜಯ: 03
ನ್ಯೂಜಿಲ್ಯಾಂಡ್‌ ಜಯ: 05
 ರದ್ದು: 01
2019ರ ವಿಶ್ವಕಪ್‌ ಫ‌ಲಿತಾಂಶ
1. ರದ್ದು
2. ನ್ಯೂಜಿಲ್ಯಾಂಡ್‌ಗೆ 18 ರನ್‌ ಜಯ

ಟಾಪ್ ನ್ಯೂಸ್

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.