ಕಾರ್ಯಾರಂಭಕ್ಕೆ ಸಿದ್ಧ:ಐಫೆಲ್ ಟವರ್ ಮೀರಿಸುವ ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ …
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪರ್ಕವನ್ನು ಒದಗಿಸುವ ಮಹತ್ವದ ಸೇತುವೆ ಇದಾಗಿದೆ.
Team Udayavani, Mar 27, 2023, 4:58 PM IST
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿಯ ಮೇಲೆ ನಿರ್ಮಾಣಗೊಂಡಿರುವ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ. ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಬಕ್ಕಾಲ್ ಮತ್ತು ಕೌರಿ ನಡುವೆ ಈ ಸೇತುವೆ ನಿರ್ಮಾಣಗೊಂಡಿದೆ.
ಇದನ್ನೂ ಓದಿ:ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಚೆನಾಬ್ ನದಿಯಿಂದ 359 ಮೀಟರ್ (1,178 ಅಡಿ) ಎತ್ತರದಲ್ಲಿ ರೈಲ್ವೆ ಸೇತುವೆಯನ್ನು ನಿರ್ಮಿಸಲಾಗಿದೆ. 2003ರಲ್ಲಿ ಆರಂಭಗೊಂಡಿದ್ದ ರೈಲ್ವೆ ಸೇತುವೆ ಕಾಮಗಾರಿ ಇದೀಗ 2023ರಲ್ಲಿ ಮುಕ್ತಾಯಗೊಂಡಿದೆ. ಈಗಾಗಲೇ ಭಾರೀ ಪ್ರಮಾಣದ ಗಾಳಿ ಹೊಡೆತದ ಪರೀಕ್ಷೆ, ವಿಪರೀತ ಹವಾಮಾನದ ಪರೀಕ್ಷೆ, ಭೂಕಂಪನ ಮತ್ತು ವಿವಿಧ ತಾಂತ್ರಿಕ ಪರೀಕ್ಷೆಗಳನ್ನು ನಡೆಸಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಸೇತುವೆಯ ಪರಿಶೀಲನೆ ನಡೆಸಿದ್ದಾರೆ.
ಚೆನಾಬ್ ರೈಲ್ವೆ ಸೇತುವೆಯು ಪ್ಯಾರೀಸ್ ನ ಐಫೆಲ್ ಟವರ್ ಗಿಂತಲೂ ಸುಮಾರು 35 ಮೀಟರ್ ಎತ್ತರವಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಮಾನು ರೀತಿಯ ಸೇತುವೆ ನಿರ್ಮಾಣ ಪೂರ್ಣಗೊಳಿಸಲು ಹಗಲು-ರಾತ್ರಿ 300 ಸಿವಿಲ್ ಇಂಜಿನಿಯರ್ಸ್, 1,300ಕ್ಕೂ ಅಧಿಕ ಕಾರ್ಮಿಕರು ದುಡಿದಿದ್ದರು.
ಚೆನಾಬ್ ಸೇತುವೆಯು 28,000 ಸಾವಿರ ಕೋಟಿ ರೂಪಾಯಿ ವೆಚ್ಚದ ಉಧಾಮ್ ಪುರ್, ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆಯ(ಯುಎಸ್ ಬಿಆರ್ ಎಲ್) ಭಾಗವಾಗಿದೆ. ಇದು ಸಂಕೀರ್ಣ ಭೌಗೋಳಿಕ ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪರ್ಕವನ್ನು ಒದಗಿಸುವ ಮಹತ್ವದ ಸೇತುವೆ ಇದಾಗಿದೆ.
ಜಮ್ಮು-ಕಾಶ್ಮೀರ ಜನರಿಗಾಗಿ ನಿರ್ಮಿಸಲು ಉದ್ದೇಶಿಸಿರುವ ಈ ಸೇತುವೆಯು ಎರಡು ದಶಕಗಳ ನಂತರ ಪೂರ್ಣಗೊಂಡಂತಾಗಿದೆ. 2003ರಲ್ಲಿ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಯೋಜನೆ ಪೂರ್ಣಗೊಳಿಸಲು ಹಲವಾರು ಡೆಡ್ ಲೈನ್ ಗಳನ್ನು ನೀಡಲಾಗಿತ್ತು. ಚೆನಾಬ್ ರೈಲ್ವೆ ಸೇತುವೆಗಾಗಿ 1,400 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿದೆ.
ಚೆನಾಬ್ ಸೇತುವೆ ನಿರ್ಮಾಣಕ್ಕಾಗಿ 25,000 ಮೆಟ್ರಿಕ್ ಟನ್ಸ್ ಸ್ಟೀಲ್, 4,000 ಟನ್ಸ್ ಉಕ್ಕು ಮತ್ತು 46,000 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಅನ್ನು ಬಳಸಲಾಗಿದೆ. ಚೆನಾಬ್ ರೈಲ್ವೆ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಈಗಾಗಲೇ ಸೇತುವೆ ಮೇಲೆ ರೈಲ್ವೆ ವ್ಯಾಗನ್ಸ್ ಪರೀಕ್ಷೆ ನಡೆಸಲಾಗಿದೆ. ಈ ವರ್ಷಾಂತ್ಯದಲ್ಲಿ ಸೇತುವೆ ಕಾರ್ಯಾರಂಭಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್