ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಭಕ್ತರಿಗೆ ಅವಕಾಶ: ಕೋಟ
Team Udayavani, May 26, 2020, 7:38 PM IST
ಬೆಂಗಳೂರು:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ನಿರ್ಬಂಧ ಸಡಿಲಿಕೆಯಾಗಿರುವ ನಡುವೆಯೇ ಇದೀಗ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಜೂನ್ 1ರಿಂದ ಪೂಜೆ ಪುನಸ್ಕಾರ ನಡೆಸಲು ಕೆಲವೊಂದು ಷರತ್ತುಗಳೊಂದಿಗೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜೂನ್ 1ರಿಂದ ಭಕ್ತರು ಸಾಮಾಜಿಕ ಅಂತರ, ನೈರ್ಮಲತೆ ಕಾಯ್ದುಕೊಂಡು ದೇವರ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಲಾಕ್ ಡೌನ್ ನಿಂದಾಗಿ ದೇವಾಲಯಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಇತ್ತೀಚೆಗಷ್ಟೇ ಆನ್ ಲೈನ್ ಸೇವೆ ಆರಂಭಿಸಿತ್ತು. ಹರಕೆ ಹೊತ್ತ ಭಕ್ತರಿಗೆ ಆನ್ ಲೈನ್ ಸೇವೆಯಿಂದ ಅನುಕೂಲವಾಗಲಿದೆ ಎಂದು ಕೋಟ ತಿಳಿಸಿದ್ದರು. ಇದೀಗ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.