ನಾಪತ್ತೆಯಾಗಿದ್ದ ಪೆರ್ಡೂರು ಮೇಳದ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ
Team Udayavani, Apr 28, 2021, 7:03 PM IST
ಕೋಟ: ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ.
ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ವಾಪಸಾಗಿರಲಿಲ್ಲ ಹಾಗೂ ಮೊಬೈಲ್ ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರುವುದಿಲ್ಲ.
ಈ ಬಗ್ಗೆ ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ ಹೆಗಡೆ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆಗಿಳಿದ ಪೊಲೀಸರು ಉದಯ ಹೆಗಡೆಯವರು ಬೆಂಗಳೂರಿನ ಸಂಬಂಧಿಯ ಮನೆಯಲ್ಲಿ ವಾಸವಿರುವುದು ಪತ್ತೆ ಹಚ್ಚಿದ್ದಾರೆ. ನಾಪತ್ತೆ ಕಾರಣ ಹೆಚ್ಚಿನ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.
ಇದನ್ನೂ ಓದಿ :ನೋಂದಣಿಗೆ ಮುಗಿಬಿದ್ದ ಜನ…1 ನಿಮಿಷದಲ್ಲಿ ಕೋ ವಿನ್ ಪೋರ್ಟಲ್ ಗೆ 27 ಲಕ್ಷ ಹಿಟ್ಸ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ