ಯಾಸ್‌ ಚಂಡಮಾರುತದ ಪ್ರಭಾವ: ಕೇರಳದಲ್ಲಿ ಹೆಚ್ಚು ಮಳೆ :ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ 

ಪೂರ್ವ ಕರಾವಳಿಯ ರಾಜ್ಯಗಳಲ್ಲಿ ಹೆಚ್ಚು ಹಾನಿ

Team Udayavani, May 24, 2021, 8:48 PM IST

ಯಾಸ್‌ ಚಂಡಮಾರುತದ ಪ್ರಭಾವ:  ಕೇರಳದಲ್ಲಿ ಹೆಚ್ಚು ಮಳೆ :ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ 

ನವದೆಹಲಿ: ಪಶ್ಚಿಮ ಬಂಗಾಳ, ಒಡಿಶಾಗಳಿಗೆ ಬುಧವಾರ ಅಪ್ಪಳಿಸಲಿರುವ “ಯಾಸ್‌’ ಚಂಡಮಾರುತದಿಂದ ಕೇರಳದಲ್ಲಿ ಧಾರಾಕಾರ ಮಳೆಯಾಗಲಿದೆ. ಬುಧವಾರದ ವರೆಗೆ ಮಳೆಯ ಪ್ರಕೋಪ ಇರಲಿದೆ. ಚಂಡಮಾರುತ ಸಾಗಿಬರುವ ಹಾದಿಯನ್ನು ತಜ್ಞರು ಗುರುತಿಸಿದ್ದರೂ, ಆ ದಾರಿಯಲ್ಲಿ ಕೇರಳ ಇಲ್ಲ. ಎರ್ನಾಕುಳಂ, ಇಡುಕ್ಕಿ, ಕೊಟ್ಟಾಯಂ, ಅಲಪ್ಪುಳ, ಪಟ್ಟಣಂತಿಟ್ಟ, ಕೊಲ್ಲಂ ಹಾಗೂ ತಿರುವಂತಪುರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಈ ಚಂಡಮಾರುತಕ್ಕೆ ಯಾಸ್‌ ಎಂದು ಒಮನ್‌ ದೇಶದ ತಜ್ಞರು ಹೆಸರಿಟ್ಟಿದ್ದಾರೆ. ಅಂದರೆ ಸುವಾಸನೆ ಬೀರುವ ಮರ.

ಭೂಕುಸಿತ: 26ರಂದು ಪೂರ್ವ ಕರಾವಳಿಯನ್ನು ತಟ್ಟಲಿರುವ ಯಾಸ್‌, ಗಂಟೆಗೆ 155ರಿಂದ 165 ಕಿ.ಮೀ. ವೇಗದಲ್ಲಿ ಸಾಗಲಿದ್ದು, ನಂತರ ಇದು ಗಂಟೆಗೆ 185 ಕಿ.ಮೀ. ವೇಗಕ್ಕೆ ವರ್ದಿಸಲಿದೆ. ಭಾರಿ ಮಳೆಯಿಂದಾಗಿ ಬಾಲಸೋರ್‌ನಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳದ ದಿಘಾದಲ್ಲಿ ಈ ಚಂಡಮಾರುತ ಪ್ರತಿಗಂಟೆಗೆ 610 ಕಿ.ಮೀ. ವೇಗದಲ್ಲಿ ಚಲಿಸಲಿದೆ.

ಆಂಧ್ರಪ್ರದೇಶ, ಅಂಡಮಾನ್‌ ನಿಕೋಬಾರ್‌ ದ್ವೀಪ ಸಮೂಹದಲ್ಲಿ ಬಿರುಸಿನ ಮಳೆಯಾಗಲಿದೆ. ಇದೇ ವೇಳೆ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯ ಸರ್ಕಾರಗಳ ಜತೆಗೆ ಸಭೆ ನಡೆಸಿದ್ದಾರೆ.

ಇದನ್ನೂ ಓದಿ :ಕೋವಿಡ್ ಮರಣ : ಪರಿಹಾರ ಧನ ನೀಡುವ ಬಗ್ಗೆ ನಿಲುವು ತಿಳಿಸಿ : ಕೇಂದ್ರಕ್ಕೆ ಸುಪ್ರೀಮ್ ಸೂಚನೆ

ಈಶಾನ್ಯ ರಾಜ್ಯಗಳಿಗೆ ಹೆಚ್ಚು ಹಾನಿ?
ಪಶ್ಚಿಮ ಬಂಗಾಳ ಹಾಗೂ ಒಡಿಶಾ ಕರಾವಳಿಗಳ ಪ್ರಾಂತ್ಯಗಳಲ್ಲಿ ಬಿರುಗಾಳಿ ಸಹಿತ ಅಗಾಧವಾಗಿ ಮಳೆಯಾಗಲಿದೆ. ಈ ಎರಡೂ ರಾಜ್ಯಗಳ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬಂಗಾಳ ಕೊಲ್ಲೆಯ ಆಗ್ನೇಯ ಭಾಗದಿಂದಲೇ ಯಾಸ್‌ನ ಮಾರುತಗಳು ಆಗಮಿಸಲಿರುವುದರಿಂದ ಪ್ರಮುಖವಾಗಿ ಆ ಪ್ರದೇಶದಲ್ಲಿ ಯಾವುದೇ ಮೀನುಗಾರಿಕೆ ಚಟುವಟಿಕೆಯನ್ನು ನಡೆಸದಂತೆ ಅಂಡಮಾನ್‌-ನಿಕೋಬಾರ್‌ ದ್ವೀಪಗಳ ಮೀನುಗಾರರಿಗೂ ಸೂಚಿಸಲಾಗಿದೆ.

ಕರ್ನಾಟಕ್ಕೆ ಮುಂಗಾರು ಐದು ದಿನ ಮುಂಚೆ?
ಈ ಮುಂಚಿನ ಲೆಕ್ಕಾಚಾರದ ಪ್ರಕಾರ, ಪ್ರಸಕ್ತ ವರ್ಷದ ಮುಂಗಾರು ಕರ್ನಾಟಕಕ್ಕೆ ಜೂ. 3 ಅಥವಾ 4ಕ್ಕೆ ಆಗಮಿಸಬೇಕಿತ್ತು. ಆದರೆ, ಯಾಸ್‌ ಚಂಡಮಾರುತದಿಂದ ಮುಂಗಾರು ಮಾರುತಗಳು ಕರ್ನಾಟಕಕ್ಕೆ ನಾಲ್ಕು ದಿನ ಮುಂಚಿತವಾಗಿಯೇ ಪ್ರವೇಶಿಸಬಹುದೆಂದು ತಜ್ಞರು ಅಂದಾಜಿಸಿದ್ದಾರೆ. ಹಾಗಾಗಿ, ಮೇ 30 ಅಥವಾ 31ಕ್ಕೆ ಕರ್ನಾಟಕ್ಕೆ ಮುಂಗಾರು ಆಗಮಿಸಬಹುದು.

ಮಾನ್ಸೂನ್‌-ಸೈಕ್ಲೋನ್‌ ಕಾಕ್‌ಟೇಲ್‌!
ಕೇರಳಕ್ಕೆ ಮಾಸಾಂತ್ಯಕ್ಕೇ ಮಂಗಾರು ಮಾರುತಗಳು ಪ್ರವೇಶಿಸುವುದರಿಂದ ಯಾಸ್‌ ಚಂಡಮಾರುತ ತರುವ ಮಳೆ-ಗಾಳಿಯ ಜೊತೆಗೆ ಮುಂಗಾರು ಮಳೆಯೂ ಅಗಾಧವಾಗಿ ಸುರಿಯುವ ಸಾಧ್ಯತೆಯಿದೆ. ಕೇರಳಕ್ಕೆ ಮೇ 31ರಂದು ಪ್ರವೇಶಿಸಬೇಕಿದ್ದ ಮುಂಗಾರು, ಮೇ 26 ಅಥವಾ 27ಕ್ಕೇ ಆಗಮಿಸಬಹುದು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.